Viral Video: ರಸ್ತೆಯಲ್ಲಿ ಹೊತ್ತಿ ಉರಿಯುತ್ತಿದ್ದ ಕಾರಿನೊಳಗಿದ್ದ ವೃದ್ಧರನ್ನು ಕಾಪಾಡಿದ ಯುವಕರು; ಶಾಕಿಂಗ್ ವಿಡಿಯೋ ಇಲ್ಲಿದೆ

Shocking Video: ಕ್ಯಾಲಿಫೋರ್ನಿಯಾದಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದ ಕಾರೊಳಗೆ ಸಿಲುಕಿದ್ದ 90ರ ಆಸುಪಾಸಿನ ಅಜ್ಜ-ಅಜ್ಜಿಯನ್ನು ಯುವಕರಿಬ್ಬರು ಕಾಪಾಡಿದ್ದಾರೆ.

Viral Video: ರಸ್ತೆಯಲ್ಲಿ ಹೊತ್ತಿ ಉರಿಯುತ್ತಿದ್ದ ಕಾರಿನೊಳಗಿದ್ದ ವೃದ್ಧರನ್ನು ಕಾಪಾಡಿದ ಯುವಕರು; ಶಾಕಿಂಗ್ ವಿಡಿಯೋ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
| Updated By: ಸುಷ್ಮಾ ಚಕ್ರೆ

Updated on:Sep 09, 2021 | 5:07 PM

ಕ್ಯಾಲಿಫೋರ್ನಿಯಾದ ರಸ್ತೆಯಲ್ಲಿ ಕಾರೊಂದು ಹೊತ್ತಿ ಉರಿಯುತ್ತಿತ್ತು. ಆ ಕಾರಿನೊಳಗೆ ಸಿಲುಕಿದ್ದ ಅಜ್ಜ-ಅಜ್ಜಿ ಹೊರಗೆ ಬರಲು ಪರದಾಡುತ್ತಿದ್ದರು. ಆದರೆ, ಬೆಂಕಿಯ ಕೆನ್ನಾಲಿಗೆ ಕಾರನ್ನು ಆವರಿಸಿಕೊಂಡಿತ್ತು. ಅಲ್ಲೇ ಅಕ್ಕಪಕ್ಕದಲ್ಲಿದ್ದವರು ಹಾಗೂ ವಾಹನಗಳಲ್ಲಿ ಹೋಗುತ್ತಿದ್ದವರು ಈ ಆಘಾತಕಾರಿ ದೃಶ್ಯವನ್ನು ನೋಡುತ್ತಾ ನಿಂತಿದ್ದರು. ಆದರೆ, ಆಗ ಸಮಯಪ್ರಜ್ಞೆ ಮೆರೆದ ಯುವಕರಿಬ್ಬರು ಕಾರಿನ ಬಳಿ ಓಡಿ ಹೋಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಆ ವೃದ್ಧ ದಂಪತಿಯನ್ನು ಕಾಪಾಡಿದ್ದಾರೆ. ಇದರ ವಿಡಿಯೋ ವೈರಲ್ ಆಗಿದ್ದು, ಯುವಕರ ಸಾಹಸಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಕ್ಯಾಲಿಫೋರ್ನಿಯಾದಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದ ಕಾರೊಳಗೆ ಸಿಲುಕಿದ್ದ 90ರ ಆಸುಪಾಸಿನ ಅಜ್ಜ-ಅಜ್ಜಿಯನ್ನು ಯುವಕರಿಬ್ಬರು ಕಾಪಾಡಿದ್ದಾರೆ. ಹೊತ್ತಿ ಉರಿದ ಕಾರಿನೊಳಗಿಂದ ಹೊರಬರಲಾಗದೆ ಚಡಪಡಿಸುತ್ತಿದ್ದ ವೃದ್ಧ ಜೋಡಿಯನ್ನು ಈ ಐವರು ರಕ್ಷಣೆ ಮಾಡಿದ್ದಾರೆ. ವೃದ್ಧರು ಸೀಟ್ ಬೆಲ್ಟ್‌ ಧರಿಸಿದ್ದರು. ಹೀಗಾಗಿ, ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಾಗ ತಕ್ಷಣ ಕೆಳಗೆ ಇಳಿಯಲು ಸಾಧ್ಯವಾಗಲಿಲ್ಲ.

ವೃದ್ಧರನ್ನು ಕಾಪಾಡಿದ ಯುವಕರಿಗೂ ಸುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೃದ್ಧ ದಂಪತಿಯನ್ನು ಕೂಡ ಆಸ್ಪತ್ರೆಗೆ ಸೇರಿಸಲಾಗಿದೆ. ಧಗಧಗನೆ ಹೊತ್ತಿ ಉರಿಯುವ ಕಾರಿನಿಂದ ವೃದ್ಧರನ್ನು ರಕ್ಷಿಸಿದ ಯುವಕರ ಧೈರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Viral Video: ಚಮಚದಿಂದ ಜೈಲಿನ ಟಾಯ್ಲೆಟ್​ ನೆಲ ಕೊರೆದು ಹಾಲಿವುಡ್​ ಸ್ಟೈಲಲ್ಲಿ ಉಗ್ರರು ಪರಾರಿ!

Shocking Video: 7 ಮರಿಗಳ ಜೊತೆ ನಾಯಿಗೆ ಬೆಂಕಿ ಹಚ್ಚಿ ಸುಟ್ಟ ಮಹಿಳೆಯರು; ಅಮಾನವೀಯ ವಿಡಿಯೋ ಇಲ್ಲಿದೆ

(Youths rescue elderly couple from burning car in California Shocking Video is here)

Published On - 5:07 pm, Thu, 9 September 21

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್