AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೆಟ್ಟದ ಕೆಳಗೆ ಬಿದ್ದ ಹಸುವನ್ನು ಕಾಪಾಡಲು ಪ್ರಾಣವನ್ನೇ ಒತ್ತೆಯಿಟ್ಟ ಯುವಕರು; ವಿಡಿಯೋ ವೈರಲ್

ಹಸುವಿನ ಕಾಲಿಗೆ ಹಗ್ಗ ಕಟ್ಟಿ ಮೇಲಕ್ಕೆ ಎಳೆಯುವಾಗ ಆ ಯುವಕರೆಲ್ಲರೂ ತಮಗೆ ಇನ್ನಷ್ಟು ಶಕ್ತಿ ಕೊಡು ಎಂದು ದೇವರಲ್ಲಿ ಬೇಡಿಕೊಳ್ಳುವುದನ್ನು ವಿಡಿಯೋದಲ್ಲಿ ನೋಡಬಹುದು.

Viral Video: ಬೆಟ್ಟದ ಕೆಳಗೆ ಬಿದ್ದ ಹಸುವನ್ನು ಕಾಪಾಡಲು ಪ್ರಾಣವನ್ನೇ ಒತ್ತೆಯಿಟ್ಟ ಯುವಕರು; ವಿಡಿಯೋ ವೈರಲ್
ಬೆಟ್ಟದ ಕೆಳಗೆ ಬಿದ್ದ ಹಸುವನ್ನು ಕಾಪಾಡಿದ ಯುವಕರುImage Credit source: NDTV
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 12, 2022 | 3:26 PM

ಬೆಟ್ಟದಿಂದ ಕೆಳಗೆ ಬಿದ್ದಿದ್ದ ಹಸುವೊಂದನ್ನು ರಕ್ಷಿಸಲು ಯುವಕರ ತಂಡ ಪರದಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದ್ದು, ನೆಟ್ಟಿಗರ ಮೆಚ್ಚುಗೆ ಗಳಿಸಿದೆ. ಕಳೆದ 2 ದಿನಗಳಿಂದ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಗುಡ್ಡದಿಂದ ಕೆಳಗೆ ಬಿದ್ದ ಹಸುವನ್ನು ಕಾಪಾಡಲು ಯುವಕರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿದ್ದಾರೆ. ಹಸುವಿಗೆ ಹಗ್ಗ ಕಟ್ಟಿ ಮೇಲೆಳೆದು ಅದರ ಜೀವ ಕಾಪಾಡಿದ್ದಾರೆ. ಸಾಲಾಗಿ ಬೆಟ್ಟದ ತುದಿಯಲ್ಲಿ ನಿಂತಿರುವ ಯುವಕರು ಹಗ್ಗದ ಮೂಲಕ ಹಸುವನ್ನು ಮೇಲಕ್ಕೆ ಎಳೆಯುತ್ತಿರುವ ದೃಶ್ಯ ಎಲ್ಲರ ಮನಗೆದ್ದಿದೆ.

ಆ ಯುವಕರಲ್ಲಿ ಒಬ್ಬಾತ ಬೆಟ್ಟದ ತುದಿಯಲ್ಲಿ ನಿಂತು, ಹಗ್ಗವನ್ನು ಎಳೆದುಕೊಡುತ್ತಿದ್ದಾನೆ. ಆ ಯುವಕ ಆಗಾಗ ಕೆಳಗೆ ಬಗ್ಗಿ ಹಸುವಿನ ಪರಿಸ್ಥಿತಿ ಈಗ ಹೇಗಿದೆ? ಎಂಬುದನ್ನು ಪರೀಕ್ಷಿಸುತ್ತಿದ್ದಾನೆ. ಹಸು ಸುರಕ್ಷಿತವಾಗಿದೆ ಮತ್ತು ಕೊಂಚ ಮೇಲಕ್ಕೆ ಬಂದಿದೆ ಎಂಬುದು ಖಚಿತವಾಗುತ್ತಿದ್ದಂತೆ ಗೆಳೆಯರ ಸಹಾಯದಿಂದ ಮತ್ತೆ ಹಗ್ಗಕ್ಕೆ ಕೈಹಾಕಿ ಮೇಲಕ್ಕೆ ಎಳೆದುಕೊಳ್ಳುತ್ತಿದ್ದಾನೆ.

ಇದನ್ನೂ ಓದಿ
Image
Viral Video: ಮದುವೆ ದಿನ ವಿಭಿನ್ನ ಒಪ್ಪಂದಕ್ಕೆ ಸಹಿ ಹಾಕಿದ ನವಜೋಡಿ, ವಿಧಿಸಲಾದ ಷರತ್ತುಗಳು ಏನೇನು ಗೊತ್ತಾ?
Image
Shocking News: ಪುರುಷನಿಗೂ ಪಿರಿಯಡ್ಸ್​!; ಹೊಟ್ಟೆ ನೋವೆಂದು ಡಾಕ್ಟರ್ ಬಳಿ ಹೋದವನಿಗೆ ಶಾಕ್
Image
Love Story: ಕೈಕೊಟ್ಟ ಪ್ರಿಯತಮನ ತಂದೆಯನ್ನೇ ಮದುವೆಯಾದ ಯುವತಿ..!
Image
Viral Video: ಮಳೆಯಿಂದಾಗಿ ಕುದುರೆ ಸವಾರಿ ಮಾಡಿ ಫುಡ್ ನೀಡಿದ ಸ್ವಿಗ್ಗಿ ಡೆಲಿವರಿ ಬಾಯ್; ವಿಡಿಯೋ ವೈರಲ್

ರೆಡ್ಡಿಟ್​ನಲ್ಲಿ ಈ ವಿಡಿಯೋವನ್ನು ಅಪ್​ಲೋಡ್ ಮಾಡಲಾಗಿದೆ. ಈ ವಿಡಿಯೋವನ್ನು ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಚಿತ್ರೀಕರಿಸಲಾಗಿದೆ. ಹಸುವಿನ ಕಾಲಿಗೆ ಹಗ್ಗ ಕಟ್ಟಿ ಮೇಲಕ್ಕೆ ಎಳೆಯುವಾಗ ಆ ಯುವಕರೆಲ್ಲರೂ ತಮಗೆ ಇನ್ನಷ್ಟು ಶಕ್ತಿ ಕೊಡು ಎಂದು ದೇವರಲ್ಲಿ ಬೇಡಿಕೊಳ್ಳುವುದನ್ನು ವಿಡಿಯೋದಲ್ಲಿ ನೋಡಬಹುದು.

ಕೆಲವು ಗಂಟೆಗಳ ಪ್ರಯತ್ನದಿಂದ ಕೊನೆಗೂ ಆ ಯುವಕರ ತಂಡ ಹಸುವನ್ನು ಸುರಕ್ಷಿತವಾಗಿ ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಆ ಹಸುವಿನ ಕಾಲಿಗೆ ಹಗ್ಗವನ್ನು ಕಟ್ಟಿ ಮೇಲೆಳೆದುಕೊಳ್ಳಲಾಗಿದೆ. ಯುವಕರ ಧೈರ್ಯ ಮತ್ತು ಸಾಹಸಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Published On - 3:25 pm, Tue, 12 July 22

ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ