AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಕಾರು ಆಟೋ ಮಧ್ಯೆ ಸಿಲುಕಿದ ಮಹಿಳೆ, ಮುಂದೇನಾಯಿತು?

Accident : ಆಟೋರಿಕ್ಷಾ ಮತ್ತು ಕಾರು ನಡುವಿನ ಢಿಕ್ಕಿಯಲ್ಲಿ ಸಿಲುಕಿಕೊಂಡ ಮಹಿಳೆ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ದೆಹಲಿಯಲ್ಲಿ ನಡೆದಿದೆ. ವಿಡಿಯೋ ನೋಡಿ.

Viral Video : ಕಾರು ಆಟೋ ಮಧ್ಯೆ ಸಿಲುಕಿದ ಮಹಿಳೆ, ಮುಂದೇನಾಯಿತು?
ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ
TV9 Web
| Updated By: ಶ್ರೀದೇವಿ ಕಳಸದ|

Updated on: Sep 14, 2022 | 12:51 PM

Share

Viral Video : ಹೊಸದಿಲ್ಲಿಯ ರಸ್ತೆಯೊಂದರಲ್ಲಿ ಮಹಿಳೆ ತನ್ನಷ್ಟಕ್ಕೆ ತಾನು ನಡೆದುಕೊಂಡು ಬರುತ್ತಿದ್ದಳು. ಎದುರಿನಿಂದ ವೇಗದಲ್ಲಿ ಬಂದ ಕಾರೊಂದು ನಿಂತ ಆಟೋಗೆ ಗುದ್ದಿತು. ಆಟೋ ಮತ್ತು ಕಾರು ಒಂದಕ್ಕೊಂದು ಢಿಕ್ಕಿ ಹೊಡೆದು ಮುಂದೆ ಚಲಿಸುತ್ತಿರುವಾಗ ಮಧ್ಯೆ ಮಹಿಳೆ ಸಿಲುಕಿಕೊಂಡರು. ಅದೃಷ್ಟವಶಾತ್​ ಆ ಮಹಿಳೆಗೆ ಯಾವುದೇ ನೋವು, ಗಾಯ ಸಂಭವಿಸಿಲ್ಲ. ಆದರೆ ಆಟೋ ಮುಗ್ಗರಿಸಿ ಬಿದ್ದಿದೆ. ಕಾರು ಎದುರಿನ ಲೈಟ್​ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಆಗ ಸ್ಥಳೀಯರು ರಕ್ಷಣೆಗೆ ಧಾವಿಸಿದ್ದಾರೆ. ಈ ಭಯಾನಕ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ವಿಡಿಯೋ ಅನ್ನು ಐಪಿಎಸ್ ಅಧಿಕಾರಿ ವಿ.ಸಿ. ಸಜ್ಜನರ್ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ‘ಕೂದಲೆಳೆಯ ಅಂತರದಲ್ಲೇ ಪಾರು. ಆದರೆ ಎಷ್ಟು ದಿನ ಅದೃಷ್ಟವನ್ನೇ ಅವಲಂಬಿಸುವುದು? ರಸ್ತೆಯ ಮೇಲೆ ಚಲಿಸುವಾಗ ಜವಾಬ್ದಾರಿ ಇರಲಿ’ ಎಂದು ಎಚ್ಚರಿಕೆಯ ನೋಟ್​ ಬರೆದಿದ್ದಾರೆ ಸಜ್ಜನರ್.

ಎನ್​ಸಿಆರ್​ಬಿ ಪ್ರಕಾರ, 2020ರಲ್ಲಿ ಭಾರತದಲ್ಲಿ ಅಪಘಾತ ಪ್ರಕರಣಗಳ ಸಂಖ್ಯೆ 3,54,796 ಇತ್ತು, 2021 ರಲ್ಲಿ 4,03,116ಕ್ಕೆ ಏರಿತು. ಸಾವನ್ನಪ್ಪಿದವರು ಸುಮಾರು 1,55,622 ಜನರು. ಗಾಯಗೊಂಡವರು 3,71,884 ಜನರು.

ಮಿಜೋರಾಂ, ಪಂಜಾಬ್, ಜಾರ್ಖಂಡ್ ಮತ್ತು ಉತ್ತರ ಪ್ರದೇಶಗಳು ರಸ್ತೆ ಅಪಘಾತಗಳು ಹೆಚ್ಚು ಸಂಭವಿಸುತ್ತವೆ ಎನ್ನುವುದು ಸಂಶೋಧನಾ ವರದಿಗಳ ಮೂಲಕ ಬಹಿರಂಗಗೊಂಡಿದೆ. ಗಾಯಕ್ಕೆ ಒಳಗಾಗುವವರಿಗಿಂತ ಸಾವಿಗೆ ಈಡಾಗುವವರ ಸಂಖ್ಯೆ ಹೆಚ್ಚಿದೆ ಎನ್ನುವುದು ಆಘಾತಕಾರಿ ಮತ್ತು ಯೋಚಿಸಬೇಕಾದ ಸಂಗತಿ ಅಲ್ಲವೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ 

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?