AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಸಾಕು ನಾಯಿಯನ್ನು ಕಾರಿನಿಂದ ಹೊರಗೆಸೆದ ಚಾಲಕ

ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಕಾರು ಚಾಲಕ(Driver)ನೊಬ್ಬ ವೇಗವಾಗಿ ಚಲಿಸುತ್ತಿದ್ದ ಕಾರಿನಿಂದ ಸಾಕು ನಾಯಿಯನ್ನು ಹೊರಗೆಸೆದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ವಾಷಿಂಗ್ಟನ್‌ನ ಪಿಯರ್ಸ್ ಕೌಂಟಿಯಲ್ಲಿ ನಡೆದಿದೆ. ಈ ಘಟನೆ ಜನವರಿ 6ರಂದು ನಡೆದಿದೆ. ರಾತ್ರಿಹೊತ್ತು ಎಂದಿನಂತೆ ಸಾಮಾನ್ಯವಾಗಿ ಸಂಚಾರ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು.

Viral Video: ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಸಾಕು ನಾಯಿಯನ್ನು ಕಾರಿನಿಂದ ಹೊರಗೆಸೆದ ಚಾಲಕ
ನಾಯಿ
ನಯನಾ ರಾಜೀವ್
|

Updated on: Jan 14, 2026 | 8:08 AM

Share

ವಾಷಿಂಗ್ಟನ್, ಜನವರಿ 14: ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಕಾರು ಚಾಲಕ(Driver)ನೊಬ್ಬ ವೇಗವಾಗಿ ಚಲಿಸುತ್ತಿದ್ದ ಕಾರಿನಿಂದ ಸಾಕು ನಾಯಿಯನ್ನು ಹೊರಗೆಸೆದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ವಾಷಿಂಗ್ಟನ್‌ನ ಪಿಯರ್ಸ್ ಕೌಂಟಿಯಲ್ಲಿ ನಡೆದಿದೆ. ಈ ಘಟನೆ ಜನವರಿ 6ರಂದು ನಡೆದಿದೆ. ರಾತ್ರಿಹೊತ್ತು ಎಂದಿನಂತೆ ಸಾಮಾನ್ಯವಾಗಿ ಸಂಚಾರ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು.

ಆಗ ವೇಗವಾಗಿ ಕಾರೊಂದು ಬಂದಿತ್ತು, ಪೊಲೀಸರು ಕೈ ಅಡ್ಡ ಮಾಡಿದರೂ ಕಾರು ನಿಲ್ಲಲೇ ಇಲ್ಲ, ಪೊಲೀಸರಿಗೆ ಅನುಮಾನ ಮೂಡಿ ಆತನನ್ನು ಚೇಸ್ ಮಾಡಿದ್ದಾರೆ. ಆಗ ವೇಗವಾಗಿ ಚಲಿಸುತ್ತಿದ್ದ ಕಾರಿನಿಂದ ಸಾಕು ನಾಯಿಯನ್ನು ಚಾಲಕ ಕೆಳಗೆ ಎಸೆದಿದ್ದಾನೆ. ಆತ ಮದ್ಯಪಾನ ಮಾಡಿದ್ದ ಎನ್ನಲಾಗಿದೆ. ಪಿಯರ್ಸ್ ಕೌಂಟಿ ಶೆರಿಫ್ ಕಚೇರಿ (PCSO) ಪ್ರಕಾರ, ನೋಂದಣಿ ಅವಧಿ ಮುಗಿದ ಕಾರಣ ರಾತ್ರಿ 12.45ರ ಸುಮಾರಿಗೆ ವಾಹನವನ್ನು ನಿಲ್ಲಿಸಲು ಪ್ರಯತ್ನಿಸಿದರು, ಆದರೆ ಚಾಲಕ ನಿಲ್ಲಲು ಸಿದ್ಧನಿರಲಿಲ್ಲ.

ಮತ್ತಷ್ಟು ಓದಿ: Video: ಅಪಹರಣಕಾರರಿಗೆ ಸಿಗುವ ಮುನ್ನವೇ ಸಮಯಪ್ರಜ್ಞೆಯಿಂದ ಮಗಳ ಕಾಪಾಡಿದ ತಾಯಿ

ಚಾಲಕ ವೇಗವನ್ನು ಹೆಚ್ಚಿಸಿ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಅಧಿಕಾರಿಗಳು ಆತನನ್ನು ಬೆನ್ನಟ್ಟಲು ಮುಂದಾದರು. ವಾಹನವು ವೇಗವನ್ನು ಕಡಿಮೆ ಮಾಡಲು ವಿಫಲವಾಗಿ, ಡಿವೈಡರ್​ಗೆ ಗುದ್ದಿದೆ, ಕಾರಿನ ಗಾಜು ಪುಡಿ ಪುಡಿಯಾಗುವಷ್ಟು ತೀವ್ರವಾಗಿತ್ತು ಈ ಅಪಘಾತ.ನಾಯಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದೆ.

ವಿಡಿಯೋ

ಕಾರಿನೊಳಗೆ ಮತ್ತೊಂದು ನಾಯಿಯು ಕೂಡ ಇತ್ತು, ಆದರೆ ಅಪಘಾತದಲ್ಲಿ ಅದಕ್ಕೇನು ತೊಂದರೆಯಾಗಿಲ್ಲ.ದೊಡ್ಡ ನಾಯಿಯನ್ನು ಅಂತಿಮವಾಗಿ ಅದರ ಮಾಲೀಕರೊಟ್ಟಿಗೆ ಸೇರಿಸಲಾಯಿತು. 39 ವರ್ಷದ ವ್ಯಕ್ತಿಯೊಬ್ಬರು ಚಾಲನೆ ಮಾಡುತ್ತಿದ್ದರು ಮತ್ತು 28 ವರ್ಷದ ಮಹಿಳೆಯೊಬ್ಬರು ಪ್ರಯಾಣಿಕರ ಸೀಟಿನಲ್ಲಿ ಇದ್ದರು. ಪರವಾನಗಿ ಇಲ್ಲದೆ ವಾಹನ ಚಾಲನ, ಡ್ರಂಕ್ ಆ್ಯಂಡ್ ಡ್ರೈವ್, ಅಪಾಯಕಾರಿ ಚಾಲನೆ ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ. ಪ್ರಾಣಿ ಹಿಂಸೆ ಆರೋಪವನ್ನು ಎದುರಿಸುತ್ತಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ
ಕೃತಿ ಸನೋನ್ ಮನಗೆದ್ದ ನಾಲ್ಕು ಸಾವಿರ ಕೋಟಿ ಒಡೆಯ; ಧೋನಿಗೆ ಅತ್ಯಾಪ್ತ
ಕೃತಿ ಸನೋನ್ ಮನಗೆದ್ದ ನಾಲ್ಕು ಸಾವಿರ ಕೋಟಿ ಒಡೆಯ; ಧೋನಿಗೆ ಅತ್ಯಾಪ್ತ
ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ!
ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ!