Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೀ ವರ್ಕ್​ ಫ್ರಂ ಹೋಂ ಮಾಡುತ್ತಲೇ ಇದ್ದರೆ ಹೇಗೆ? ನನ್ನನ್ನೂ ನೋಡು ಸ್ವಲ್ಪ; 3 ಮಿಲಿಯನ್​ ಜನರನ್ನು ಸೆಳೆದಿದೆ ಈ ವಿಡಿಯೋ

Work From Home : ಮಕ್ಕಳನ್ನು ಎತ್ತಿಕೊಂಡೇ ಹೀಗೆ ವರ್ಕ್​ ಫ್ರಂ ಹೋಂ ಮಾಡಿದ ದಿನಗಳು ನೆನಪಿರಬಹುದು. ಹಾಗೆಯೇ ಸಾಕುಪ್ರಾಣಿಗಳನ್ನೂ. ಎತ್ತಿಕೊಂಡು ಕೆಲಸದಲ್ಲಿ ಕಳೆದುಹೋದಿರೋ ಅಷ್ಟೇ!

ಬರೀ ವರ್ಕ್​ ಫ್ರಂ ಹೋಂ ಮಾಡುತ್ತಲೇ ಇದ್ದರೆ ಹೇಗೆ? ನನ್ನನ್ನೂ ನೋಡು ಸ್ವಲ್ಪ; 3 ಮಿಲಿಯನ್​ ಜನರನ್ನು ಸೆಳೆದಿದೆ ಈ ವಿಡಿಯೋ
ಬರೀ ಕೆಲಸ ಮಾಡುತ್ತಲೇ ಇದ್ದರೆ ಹೇಗೆ? ನನ್ನನ್ನೂ ನೋಡು...
Follow us
TV9 Web
| Updated By: ಶ್ರೀದೇವಿ ಕಳಸದ

Updated on:Nov 29, 2022 | 10:53 AM

Viral Video : ಮಕ್ಕಳೂ ಅಷ್ಟೇ ಪ್ರಾಣಿಗಳೂ ಅಷ್ಟೇ. ಅವುಗಳನ್ನು ಮುದ್ದಿಸದಿದ್ದರೆ ಹೀಗೆ ಅಟೆನ್ಷನ್ ಸೀಕಿಂಗ್​ ಶುರುಮಾಡಿಕೊಂಡುಬಿಡುತ್ತವೆ. ಈಗ ವೈರಲ್ ಆಗಿರುವ ಈ ವಿಡಿಯೋ ನೋಡಿ, ಈ ವ್ಯಕ್ತಿ ಮಗುವಿನ ಹಾಗೆ ಅದನ್ನು ತೊಡೆಮೇಲೆ ಕೂರಿಸಿಕೊಂಡು ಕೆಲಸ ಮಾಡುತ್ತಿದ್ದರೂ ನಾಯಿಗೆ ಸಮಾಧಾನವಿಲ್ಲ. ನೀ ನನ್ನ ಕಡೆ ಗಮನ ಕೊಡುತ್ತಿಲ್ಲ ಬರೀ ಕೆಲಸದಲ್ಲಿಯೇ ಮುಳುಗಿದ್ದೀಯಾ ಎಂದು ಮುಖ ಎತ್ತಿ ಅವನನ್ನು ನೋಡುವ ದೃಶ್ಯ ಹೇಗಿದೆ ನೋಡಿ.

3.3 ಮಿಲಿಯನ್​ಗಿಂತಲೂ ಹೆಚ್ಚು ಜನ ಈ ವಿಡಿಯೋ ನೋಡಿದ್ದಾರೆ. ಆ ನಾಯಿಯ ಕಣ್ಣಲ್ಲಿರುವ ಪ್ರೀತಿಯ ಯಾಚನೆಯ ಆಳ ನಿಮ್ಮನ್ನು ತಟ್ಟದೇ ಇರದು. ಈ ವ್ಯಕ್ತಿ ಅದರ ಕಡೆ ಗಮನ ಕೊಡುತ್ತಿದ್ದಂತೆ ಸಂತೃಪ್ತಭಾವದಿಂದ ಅವನಿಗೆ ಮತ್ತಷ್ಟು ಒರಗುತ್ತದೆ. ಈ 13 ಸೆಕೆಂಡುಗಳ ದೃಶ್ಯ ಎಂಥವರ ಮನಸ್ಸನ್ನೂ ಕರಗುವಂತೆ ಮಾಡುತ್ತದೆ. ಅನೇಕರು ಈ ವಿಡಿಯೋ ಪ್ರತಿಕ್ರಿಯಿಸಿದ್ದಾರೆ.

ನಾಯಿ ಜೊತೆಗಿಲ್ಲದಿದ್ದರೆ ನನಗೆ ಪ್ರಪಂಚವೇ ನನ್ನ ಜೊತೆಗಿಲ್ಲ ಎಂದೆನ್ನಿಸುತ್ತದೆ ಎಂದಿದ್ದಾರೆ ಒಬ್ಬರು. ನಾಯಿ ಮಾತ್ರ ನಿಮ್ಮನ್ನು ಸಂಪೂರ್ಣವಾಗಿ ಪ್ರೀತಿಸಲು ಸಾಧ್ಯ, ಅಷ್ಟೇ ವಿಶ್ವಾಸಮಯಿ ಜೀವ ಅದು ಎಂದಿದ್ದಾರೆ ಇನ್ನೂ ಒಬ್ಬರು. ಅನೇಕರು ತಮ್ಮ ತಮ್ಮ ನಾಯಿಗಳ ವಿಡಿಯೋಗಳನ್ನು ಈ ಥ್ರೆಡ್​ಗೆ ಟ್ವೀಟ್ ಮಾಡಿದ್ದಾರೆ. ನಾಯಿಪ್ರಿಯರೆಲ್ಲರೂ ಒಂದೆಡೆ ಸೇರಿದರೆ ಆ ಲೋಕ ಬಹಳ ಮುದದಿಂದ ಕೂಡಿರುವಲ್ಲಿ ಸಂಶಯವೇ ಇಲ್ಲ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:52 am, Tue, 29 November 22

ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್