AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಸ್ವಾತಂತ್ರ್ಯದ ಅಮೃತಮಹೋತ್ಸವಕ್ಕೆ ಬಾಹ್ಯಾಕಾಶದಿಂದ ಶುಭಾಶಯ

Gaganyaan : ಇಟಲಿಯ ಗಗನಯಾತ್ರಿ ಸಮಂತಾ ಕ್ರಿಸ್ಟೋಫೊರೆಟ್ಟಿ 2023ರ ಗಗನಯಾನ ಯೋಜನೆಗೆ ಶುಭ ಕೋರಿದ ವಿಡಿಯೋ.

Viral Post: ಸ್ವಾತಂತ್ರ್ಯದ ಅಮೃತಮಹೋತ್ಸವಕ್ಕೆ ಬಾಹ್ಯಾಕಾಶದಿಂದ ಶುಭಾಶಯ
‘ಗಗನಯಾನ್’ ಯಶಸ್ವಿಯಾಗಲೆಂದು ಗಗನಯಾನಿ ಸಮಂತಾ ಕ್ರಿಸ್ಟೋಫೊರೆಟ್ಟಿ ಬಾಹ್ಯಾಕಾಶದಿಂದ ಇಸ್ರೋಗೆ ಸಂದೇಶ ಕಳಿಸುತ್ತಿರುವ ಚಿತ್ರ
TV9 Web
| Edited By: |

Updated on: Aug 13, 2022 | 5:31 PM

Share

Delhi : ಭಾರತವು ಸ್ವಾತಂತ್ರ್ಯದ ಅಮೃತಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಭಾರತಕ್ಕೆ ಬಾಹ್ಯಾಕಾಶದಿಂದ ಶುಭಾಶಯವನ್ನು ಕೋರಿದ್ದಾರೆ ಇಟಲಿಯ ಗಗನಯಾತ್ರಿ ಸಮಂತಾ ಕ್ರಿಸ್ಟೋಫೊರೆಟ್ಟಿ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾದ ISRO ಗೆ ಗಗನಯಾನ ಯೋಜನೆಗೆ ಅವರು ಶುಭಕೋರಿದ್ದಾರೆ. 2023ರಲ್ಲಿ ನಡೆಯಲಿರುವ ಭಾರತದ ಪ್ರಥಮ ಮಾನವ ಬಾಹ್ಯಾಕಾಶ ಯಾತ್ರೆಯ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದ್ದಾರೆ. 1 ನಿಮಿಷ, 13 ಸೆಕೆಂಡುಗಳ ಈ ವಿಡಿಯೋದಲ್ಲಿ ಸಮಂತಾ, ನಾಸಾ ಮತ್ತು ಇಸ್ರೋ ನಡುವೆ ನಡೆಯುತ್ತಿರುವ ಭೂವೀಕ್ಷಣೆ ಕಾರ್ಯಾಚರಣೆ ಕುರಿತು ಹೇಳಿದ್ದಾರೆ. ಭವಿಷ್ಯದಲ್ಲಿ ಬಾಹ್ಯಾಕಾಶ ಸಂಶೋಧನೆಗಳಿಗಾಗಿ ನಾಸಾ ಅಂತಾರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋದೊಂದಿಗಿನ ಪಾಲುದಾರಿಕೆಯನ್ನು ವಿಸ್ತರಿಸಲಿದೆ ಎಂದಿದ್ದಾರೆ. ಭವಿಷ್ಯದ ಬಾಹ್ಯಾಕಾಶ ಸಂಶೋಧನೆಯನ್ನು ಒಟ್ಟಾಗಿ ಮಾಡುವುದು ನಮ್ಮೆಲ್ಲರ ಗುರಿಯಾಗಿದೆ ಎಂದೂ ತಿಳಿಸಿದ್ದಾರೆ. ಈ ಸಂದೇಶವನ್ನು ಅಮೆರಿಕದ ಭಾರತೀಯ ರಾಯಭಾರಿ ತರಂಜಿತ್ ಸಿಂಗ್ ಸಂಧು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

‘ಗಗನಯಾನ’ ಸಿದ್ಧತೆ ಪೂರ್ಣಗೊಂಡಿದ್ದು, ಭಾರತೀಯರು ಮುಂದಿನ ವರ್ಷ ಬಾಹ್ಯಾಕಾಶಕ್ಕೆ ತೆರಳಲಿದ್ದಾರೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಕಳೆದ ತಿಂಗಳು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು. 2023 ರಲ್ಲಿ ನಡೆಯಲಿರುವ ಮಿಷನ್‌ನ ಪ್ರಯೋಗಗಳನ್ನು ಈ ವರ್ಷದ ಅಂತ್ಯದ ವೇಳೆಗೆ ನಡೆಸಲಾಗುವುದು ಎಂದು ಸಚಿವ ಜಿತೇಂದ್ರ ಸಿಂಗ್ ಹೇಳಿದ್ದರು.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

‘ಮುಂದಿನ ವರ್ಷ ಭಾರತೀಯ ಮೂಲದ ಒಬ್ಬರು ಅಥವಾ ಇಬ್ಬರು ಬಾಹ್ಯಾಕಾಶಕ್ಕೆ ಹೋಗಬಹುದು ಅದಕ್ಕಾಗಿ ನಮ್ಮ ‘ಗಗನಯಾನ ಯೋಜನೆಗೆ’ ಸಿದ್ಧತೆ ನಡೆದಿದೆ. ಅದಕ್ಕೂ ಮೊದಲು ಈ ವರ್ಷಾಂತ್ಯದೊಳಗೆ ಎರಡು ಪ್ರಯೋಗಗಳನ್ನು ನಡೆಸಲಾಗುವುದು. ಎರಡನೇ ಪ್ರಯೋಗದಲ್ಲಿ ಮಹಿಳಾ ರೋಬೋಟ್ (ಗಗನಯಾತ್ರಿ) ವ್ಯೋಮಮಿತ್ರಳನ್ನು ಕಳುಹಿಸಲಾಗುವುದು.’ ಎಂದು ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

ಮತ್ತಷ್ಟು ಸುದ್ದಿಗಾಗಿ ಕ್ಲಿಕ್ ಮಾಡಿ

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು