AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಈ ಮನುಷ್ಯ ಯಾಕಿಷ್ಟು ಕ್ರೂರಿ? ಪಂಜರದಲ್ಲಿ ಬಂಧಿಯಾಗಿದ್ದ ಕಂದನನ್ನು ರಕ್ಷಿಸಲು ತಾಯಿ ಕೋತಿ ಪಟ್ಟ ಪಾಡು ನೋಡಿ 

ತಾಯಿ ಪ್ರೀತಿಯ ಮುಂದೆ ಎಲ್ಲವೂ ಶೂನ್ಯ.  ಮನುಷ್ಯರು ಮಾತ್ರವಲ್ಲ ಪ್ರಾಣಿಗಳು ಸಹ ಅವುಗಳ ಮರಿಗಳನ್ನು ಅಷ್ಟೇ ಪ್ರೀತಿಸುತ್ತವೆ. ಇಂತಹ ತಾಯಿ ಮಗುವಿನ ಬಾಂಧವ್ಯದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ  ಆಗಾಗ್ಗೆ ಹರಿದಾಡುತ್ತಿರುತ್ತವೆ. ಅದೇ ರೀತಿ ಇಲ್ಲೊಂದು ಹೃದಯಸ್ಪರ್ಶಿ ವಿಡಿಯೋ  ವೈರಲ್ ಆಗಿದೆ. ತಾಯಿ ಕೋತಿಯೊಂದು ಪಂಜರದೊಳಗೆ ಬಂಧಿಯಾಗಿದ್ದ ತನ್ನ ಮರಿಕೋತಿಯನ್ನು ರಕ್ಷಿಸಲು ದೊಡ್ಡ ಸಾಹಸವನ್ನೇ ಮಾಡಿದೆ.  ಈ ತಾಯಿ ಕೋತಿಯ ನಿಷ್ಕಲ್ಮಶ ಪ್ರೀತಿಯನ್ನು ಕಂಡು ಹಲವರು ಭಾವುಕರಾಗಿದ್ದಾರೆ.

Viral Video: ಈ ಮನುಷ್ಯ ಯಾಕಿಷ್ಟು ಕ್ರೂರಿ? ಪಂಜರದಲ್ಲಿ ಬಂಧಿಯಾಗಿದ್ದ ಕಂದನನ್ನು ರಕ್ಷಿಸಲು ತಾಯಿ ಕೋತಿ ಪಟ್ಟ ಪಾಡು ನೋಡಿ 
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Dec 20, 2023 | 4:19 PM

Share

ಈ ಜಗತ್ತಿನಲ್ಲಿ ತಾಯಿ ಪ್ರೀತಿಗೆ ಸರಿಸಾಟಿ ಯಾವುದು ಇಲ್ಲ.  ಯಾವುದೇ ಸ್ವಾರ್ಥವಿಲ್ಲದೆ ನಿಷ್ಕಲ್ಮಶ ಪ್ರೀತಿಯನ್ನು ತೋರುವ ಜೀವವವೊಂದಿದೆಯೆಂದರೆ ಅದು ತಾಯಿ ಮಾತ್ರ. ಕೇವಲ ಮನುಷ್ಯರು ಮಾತ್ರವಲ್ಲ,  ಪ್ರಾಣಿಗಳು ಸಹ ತಮ್ಮ ಮರಿಗಳನ್ನು ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತವೆ, ಜೋಪಾನವಾಗಿ ನೋಡಿಕೊಳ್ಳುತ್ತವೆ. ಅಲ್ಲದೆ ವೈರಿಗಳ ದಾಳಿಯಿಂದ ತಮ್ಮ ಮರಿಗಳನ್ನು ರಕ್ಷಿಸಲು ಈ ಪ್ರಾಣಿಗಳು ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತವೆ.  ಪ್ರಾಣಿ ಸಾಮ್ರಾಜ್ಯದ ಇಂತಹ ಹಲವಾರು ಹೃದಯಸ್ಪರ್ಶಿ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ  ಆಗಾಗ್ಗೆ ಹರಿದಾಡುತ್ತಿರುತ್ತವೆ. ಈಗ ಅಂತಹದ್ದೇ ವಿಡಿಯೋವೊಂದು ಹರಿದಾಡುತ್ತಿತ್ತು, ಪಂಜರದೊಳಗೆ ಬಂಧಿಯಾಗಿದ್ದ ಮರಿಕೋತಿಯನ್ನು, ತಾಯಿ ಕೋತಿ ತನ್ನ ಧೈರ್ಯ ಮತ್ತು ಸಾಹಸದಿಂದ  ಬಿಡಿಸಿಕೊಂಡು ತನ್ನ ಮಗುವಿನ ರಕ್ಷಣೆಯನ್ನು ಮಾಡಿದೆ. ಈ ವಿಡಿಯೋವನ್ನು ನೋಡಿದ ಅನೇಕರು ತಾಯಿ ಪ್ರೀತಿಗೆ ಸರಿಸಾಟಿ ಯಾವುದೂ ಇಲ್ಲ ಎಂದು ಭಾವುಕರಾಗಿದ್ದಾರೆ.

@gunsnrosesgirl13 ಈ ವಿಡಿಯೋವನ್ನು ಎಂಬ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು,  ಪಂಜರದೊಳಗೆ ಬಂಧಿಯಾಗಿದ್ದ ಕೋತಿ ಮರಿಯನ್ನು, ತಾಯಿಕೋತಿ ತನ್ನ ಧೈರ್ಯ ಮತ್ತು ಬುದ್ಧಿವಂತಿಕೆಯಿಂದ  ಪಂಜರದಿಂದ ಬಿಡಿಸಿ ರಕ್ಷಣೆ ಮಾಡುವಂತಹ  ಹೃದಯಸ್ಪರ್ಶಿ ದೃಶ್ಯವನ್ನು ಕಾಣಬಹುದು.

ವೈರಲ್​ ವಿಡಿಯೋ ಇಲ್ಲಿದೆ:

20 ಸೆಕೆಂಡುಗಳ ಈ ವಿಡಿಯೋದಲ್ಲಿ  ಒಬ್ಬ ವ್ಯಕ್ತಿ ಪುಟ್ಟ ಕೋತಿಮರಿಯನ್ನು ಪಂಜರದೊಳಗೆ ಬಂಧಿಸಿರುತ್ತಾನೆ.  ಅಲ್ಲಿ ಹಲವಾರು ಕೋತಿಗಳಿದ್ದರೂ, ಈ ಮರಿಯನ್ನು ಯಾರಿದಂಲೂ ರಕ್ಷಿಸಲು ಸಾಧ್ಯವಾಗಲಿಲ್ಲ, ಹೀಗೆ ಸುಮ್ಮನೆ ಮನುಷ್ಯರಿಗೆ ಹೆದರಿಕೊಂಡು ನಿಂತರೆ ನನ್ನ ಮಗುವನ್ನು ನಾನು ಶಾಶ್ವತವಾಗಿ ಕಳೆದುಕೊಳ್ಳಬೇಕಾಗುತ್ತದೆ ಎಂದು ಭಾವಿಸಿದ ತಾಯಿ ಕೋತಿ, ಧೈರ್ಯವಾಗಿ ಮುನ್ನುಗ್ಗಿ, ಮರಿ ಕೋತಿಯನ್ನು ಬಂಧಿಸಿದ್ದ, ಪಂಜರವನ್ನೇ ಎತ್ತಿಕೊಂಡು ಬಂದು, ಪಂಜರದಿಂದ ಮರಿಯನ್ನು ಬಿಡಿಸಿಕೊಂಡು, ದೇವ್ರೇ ನನ್ನ ಮಗು ಕೊನೆಗೂ ನನ್ನ ಮಡಿಲು ಸೇರಿತಲ್ವಾ ಎಂದು ನಿಟ್ಟುಸಿರು ಬಿಡುತ್ತಾ  ಮರಿ ಕೋತಿಯನ್ನು ಮಡಿಲಲ್ಲಿ ಮಲಗಿಸಿ ಮುದ್ದಾಡುವ  ಹೃದಯಸ್ಪರ್ಶಿ ದೃಶ್ಯವನ್ನು  ಕಾಣಬಹುದು.

ಇದನ್ನೂ ಓದಿ: ಭಾರೀ ಸುದ್ದಿಯಾಗಿದ್ದ ಲವ್ ಗುರು ಮಾತುಕನಾಥ್ – ಜೂಲಿ ಲವ್ ಸ್ಟೋರಿ, ಈಗ ಬ್ರೇಕಪ್​​​ ಮಾಡಿಕೊಂಡಿದ್ದು ಏಕೆ? 

ಡಿಸೆಂಬರ್ 19 ರಂದು ಹಂಚಿಕೊಳ್ಳಲಾದ ಈ ವಿಡಿಯೋ 15.8 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ ಹಾಗೂ ಹಲವಾರು ಲೈಕ್ಸ್ಗಳನ್ನು ಪಡೆದುಕೊಂಡಿದೆ.  ಒಬ್ಬ ಬಳಕದಾರರು ʼತಾಯಿ ಪ್ರೀತಿಗೆ ಸರಿಸಾಟಿ ಯಾವುದು ಇಲ್ಲʼ ಎಂದು ಹೇಳಿದ್ದಾರೆ.  ಮತ್ತೊಬ್ಬ ಬಳಕೆದಾರರು ʼತಾಯಿ ಮತು ಮಗುವನ್ನು ಯಾರಿಂದಲೂ ದೂರಮಾಡಲು ಸಾಧ್ಯವಿಲ್ಲ. ಆ ಕೋತಿ ಮರಿಯನ್ನು ಪಂಜರದೊಳಗೆ ಬಂಧಿಸಿದ ವ್ಯಕ್ತಿಯನ್ನು ಜೈಲಿಗೆ ಹಾಕಬೇಕುʼ ಎಂದು ಹೇಳಿದ್ದಾರೆ.  ಇನ್ನೂ ಅನೇಕರು ಈ ತಾಯಿಯ ನಿಷ್ಕಲ್ಮಶ ಪ್ರೀತಿಯನ್ನು ಕಂಡು ಭಾವುಕರಾಗಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ:

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​