Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆನೆ ಬಂತೋ.. ಕಾಪಾಡಪ್ಪ ಗಣಪ; ಈ ಹುಡುಗರು ಗೋಳಾಟ ನೋಡಿ 

ಸಾಮಾನ್ಯವಾಗಿ ಆನೆಗಳು ಆಕ್ರಮಣಕಾರಿ ಪ್ರಾಣಿಗಳಲ್ಲ. ಆದರೆ ಕೆಲವೊಂದು ಬಾರಿ ಆನೆಗಳಿಗೆ ಮದವೇರಿದರೆ, ಅದು ತನ್ನ ಎದುರಿಗಿರುವ ಯಾವುದೇ ಪ್ರಾಣಿಯನ್ನಾದರೂ ಸಹ ಅಟ್ಟಾಡಿಸಿಕೊಂಡು ಹೋಗುತ್ತದೆ.  ಅದೇ ರೀತಿ ಇಲ್ಲೊಂದು ಘಟನೆ ನಡೆದಿದೆ. ಯುವಕರ ಗುಂಪೊಂದು ಜೀಪ್ ಅಲ್ಲಿ ಹೋಗುತ್ತಿದ್ದ ವೇಳೆ, ಆನೆಯೊಂದು ಅವರನ್ನು ಅಟ್ಟಾಡಿಸಿಕೊಂಡು ಹೋಗಿದೆ.  ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. 

Viral Video: ಆನೆ ಬಂತೋ.. ಕಾಪಾಡಪ್ಪ ಗಣಪ; ಈ ಹುಡುಗರು ಗೋಳಾಟ ನೋಡಿ 
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Dec 11, 2023 | 6:33 PM

ಆನೆಗಳು ಶಾಂತ ಪ್ರಾಣಿಗಳು. ಸಾಮಾನ್ಯವಾಗಿ ಅವುಗಳು ಯಾರ ಮೇಲೂ ಆಕ್ರಮಣ ಮಾಡುವುದಿಲ್ಲ. ಆದರೆ ಕೆಲವೊಮ್ಮೆ ಅವುಗಳಿಗೆ ಮದವೇರಿದರೆ, ಅದು ಇತರ ಪ್ರಾಣಿಗಳನ್ನು ಅಟ್ಟಾಡಿಸಿಕೊಂಡು ಹೋಗಿ ಅವುಗಳ ಮೇಲೆ ಆಕ್ರಮಣ ಮಾಡಲು ಮುಂದಾಗುತ್ತವೆ. ಇದೇ ರೀತಿ ಮನುಷ್ಯರು ಹಾಗೂ ಪ್ರಾಣಿಗಳನ್ನು ಆನೆಗಳು ಅಟ್ಟಾಡಿಸಿಕೊಂಡು ಹೋಗುವಂತಹ ಕೆಲವೊಂದು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ. ಈಗ ಅದೇ ರೀತಿಯ ವಿಡಿಯೋವೊಂದು ವೈರಲ್ ಆಗಿದ್ದು, ಜೀಪ್ ಅಲ್ಲಿ ಹಾಯಾಗಿ ಡ್ರೈವ್ ಮಾಡಿಕೊಂಡು ಹೋಗುತ್ತಿದ್ದಂತಹ ಯುವಕರ ಗುಂಪನ್ನು ಆನೆಯೊಂದು ಅಟ್ಟಾಡಿಸಿಕೊಂಡು ಬಂದಿವೆ.  ಈ ದೃಶ್ಯಕ್ಕೆ ಸೂಕ್ತವೆಂಬಂತೆ ಮನು ಹಂದಾಡಿಯವರ, ʼಹಟ್ಟಿಯಂಗಡಿ ಗಣಪತಿ ಮಧೂರು ಗಣಪತಿ… ಆನೆ ಹೋಯ್ತಾʼ ಎಂದು ಹೇಳುವ ತಮಾಷೆಯ ಡೈಲಾಗ್ ಅನ್ನು ಹಿನ್ನೆಲೆ ಧ್ವನಿಯಾಗಿ ಈ   ವಿಡಿಯೋಗೆ ಸೇರಿಸಲಾಗಿದೆ.  ಈ ದೃಶ್ಯಕ್ಕೆ  ಬ್ಯಾಗ್ರೌಂಡ್ ವಾಯ್ಸ್ ಹೇಳಿ ಮಾಡಿಸಿದಂತಿದೆ,  ಇದು ಸಿಕ್ಕಾಪಟ್ಟೆ ಹಾಸ್ಯಮಯವಾಗಿದೆ ಎಂದು ಹಲವರು ಹೇಳಿದ್ದಾರೆ.

ಈ ವಿಡಿಯೋವನ್ನು  @trollkannada_official  ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ವಿಡಿಯೋದಲ್ಲಿ ಜೀಪ್ ಅಲ್ಲಿ ಹಾಯಾಗಿ ಡ್ರೈವ್ ಮಾಡಿಕೊಂಡು ಹೋಗುತ್ತಿದ್ದ ಯುವಕರ  ಗುಂಪನ್ನು  ದೈತ್ಯ ಆನೆ ಅಟ್ಟಾಡಿಸಿಕೊಂಡು ಹೋಗುವುದನ್ನು ಕಾಣಬಹುದು.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವಿಡಿಯೋದಲ್ಲಿ ಕಾಡು ದಾರಿಯ  ಮಧ್ಯೆ  ಒಂದಷ್ಟು ಯುವಕರು ಜೀಪ್ ಅಲ್ಲಿ ಹಾಯಾಗಿ ಡ್ರೈವ್ ಮಾಡುತ್ತಾ ಹೋಗುತ್ತಿದ್ದರು. ಆ ವೇಳೆಯಲ್ಲಿ ದೈತ್ಯ ಆನೆಯೊಂದು ಇವರಿಗೆ ಎದುರಾಗುತ್ತದೆ. ಯುವಕರನ್ನು ಕಂಡು ಸಿಟ್ಟಾದ ಆನೆ ಅವರನ್ನು ಅಟ್ಟಾಡಿಸಿಕೊಂಡು ಬರುತ್ತದೆ. ಆನೆ ಮುಂದೆ ಬರುತ್ತಿದ್ದಂತೆ ಜೀಪ್ ಓಡಿಸುತ್ತಿದ್ದ ಚಾಲಕ ರಿವರ್ಸ್ ಡ್ರೈವ್ ಮಾಡುತ್ತಾ ಬರುತ್ತಾನೆ. ಕೊನೆಯಲ್ಲಿ ಆನೆ ಅತ್ತ ಕಡೆ ಹೋಗುತ್ತೆ.  ಈ ಒಂದು ಸಂದರ್ಭಕ್ಕೆ ಸೂಕ್ತವಾಗುವಂತೆ ಮನು ಹಂದಾಡಿಯವರ ʼಹಟ್ಟಿಯಂಗಡಿ ಗಣಪತಿ ಮಧೂರು ಗಣಪತಿ… ಆನೆ ಹೋಯ್ತಾʼ ಎಂದು ಹೇಳುವ ತಮಾಷೆಯ ಡೈಲಾಗ್ ಅನ್ನು ಹಿನ್ನೆಲೆ ಧ್ವನಿಯಾಗಿ ಸೇರಿಸಲಾಗಿದೆ.

ಇದನ್ನೂ ಓದಿ: ಈ ಲೇಸ್ ಪ್ಯಾಕೆಟ್​​ನಲ್ಲಿ ಎರಡೇ ಚಿಪ್ಸ್! ಇದು ಮಹಾಮೋಸ ಎಂದು ತಲೆ ಚಚ್ಚಿಕೊಂಡ ವ್ಯಕ್ತಿ 

ಇನ್ಸ್ಟಾಗ್ರಾಮ್ ಅಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ 2.1 ಮಿಲಿಯನ್ ವೀಕ್ಷಣೆಗಳನ್ನು ಹಾಗೂ 127K ಲೈಕ್ಸ್ಗಳನ್ನು ಪಡೆದುಕೊಂಡಿದೆ. ಹಲವಾರು ಕಮೆಂಟ್ಸಗಳೂ ಹರಿದುಬಂದಿವೆ. ಒಬ್ಬ ಬಳಕೆದಾರರು ‘ಕೊನೆಗೂ ಭಗವಂತ ಕೈ ಹಿಡಿದʼ ಎಂದು ಕಮೆಂಟ್ ಮಾಡಿದ್ದಾರೆ. ಇನ್ನೂ ಅನೇಕರು ಈ ಹುಡುಗರ ಪರಿಸ್ಥಿತಿಯನ್ನು ಕಂಡು ನಗು ತಡೆಯಲಾಗಲಿಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:31 pm, Mon, 11 December 23

ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ