AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರಿಯುತ್ತಿರುವ ಈ ಮಳೆ, ಬೀದಿನಾಯಿಗಳಿಗೆ ಆಶ್ರಯ ನೀಡಿದ ಮಹಿಳೆ, ಮತ್ತೆ ಮತ್ತೆ ನೋಡಬೇಕೆನ್ನಿಸುವ ಈ ವಿಡಿಯೋ

Shelter to Street Dogs : ಧೋ ಎಂದು ಸುರಿಯುತ್ತಿರುವ ಮಳೆಯಲ್ಲಿ ನಿಮ್ಮಲ್ಲಿ ಅದೆಷ್ಟೋ ಜನ ಹೀಗೆ ಬೀದಿನಾಯಿಗಳಿಗೆ ಆಶ್ರಯ ಕೊಡುತ್ತಿರಬಹುದು. ಆದರೆ ಈ ಮಹಿಳೆಯ ನಡೆ ನೋಡಿ...

ಸುರಿಯುತ್ತಿರುವ ಈ ಮಳೆ, ಬೀದಿನಾಯಿಗಳಿಗೆ ಆಶ್ರಯ ನೀಡಿದ ಮಹಿಳೆ, ಮತ್ತೆ ಮತ್ತೆ ನೋಡಬೇಕೆನ್ನಿಸುವ ಈ ವಿಡಿಯೋ
Street dogs got shelter from a woman
TV9 Web
| Edited By: ಶ್ರೀದೇವಿ ಕಳಸದ|

Updated on:Nov 24, 2022 | 2:55 PM

Share

Viral Video : ಮಳೆಬಂದರೆ ಬೀದಿಬದಿಯ ಜನಜೀವನ ಪೂರ್ತಿ ಅಸ್ತವ್ಯಸ್ತವಾಗಿಬಿಡುತ್ತದೆ. ಅದರಲ್ಲಿಯೂ ಪ್ರಾಣಿಗಳ ಅವಸ್ಥೆ ಅಂತೂ ಕೇಳುವುದೇ ಬೇಡ. ಅದೆಷ್ಟು ಜನ ಅವುಗಳ ಬಗ್ಗೆ ಕಾಳಜಿ ವಹಿಸುತ್ತಾರೆ? ಎಲ್ಲೋ ಅಪರೂಪಕ್ಕೆ ಬೆರಳೆಣಿಕೆಯಷ್ಟು ಜನ ಮಾತ್ರ. ಇದೀಗ ವೈರಲ್ ಆಗುತ್ತಿರುವ ಈ ವಿಡಿಯೋ ನೋಡಿ. ಈ ಮಹಿಳೆ ಬೀದಿನಾಯಿಗಳಿಗೆಲ್ಲ ತಮ್ಮ ಮನೆಯಲ್ಲಿ ಆಶ್ರಯ ಕೊಟ್ಟಿದ್ದಾರೆ. ನೆಟ್ಟಿಗರು ಈ ಮಹಿಳೆಯ ಹೃದಯ ಶ್ರೀಮಂತಿಕೆಗೆ ಸಲಾಮ್​ ಎನ್ನುತ್ತಿದ್ದಾರೆ.

ಈ ಬೀದಿನಾಯಿಗಳಿಗೊಂದೊಂದು ಹೆಸರಿಟ್ಟು ಮುದ್ದಿನಿಂದ ಕೂಗುವ ಈ ಮಹಿಳೆಯ ಪರಿ ಅನನ್ಯ. ಹೊರಗೆ ಗುಡುಗು, ಸುರಿಯುತ್ತಿರುವ ಮಳೆ, ಚಳಿಗೆ ಆತಂಕದಲ್ಲಿಯೇ ನಾಯಿಗಳು ಕುಳಿತಂತಿವೆ. ಎಷ್ಟೇ ಆದರೂ ಬೀದಿನಾಯಿ. ಮಳೆ ನಿಂತ ಮೇಲೆ ಮತ್ತೆ ಬೀದಿಗೇ ಎನ್ನುವ ಬೇಸರ ಅವುಗಳಿಗಿದೆಯೋ ಏನೋ, ಮನಃಸ್ಫೂರ್ತಿ ಅವುಗಳ ಮುಖದ ಮೇಲೆ ಕಾಣದು.

ಬೀದಿನಾಯಿಗಳು ಹೀಗೆ ಮನೆಯೊಳಗೆ ಬಂದು ಆಶ್ರಯ ಪಡೆಯಲೆಂದೇ ತನ್ನ ಮನೆಯ ಗೇಟ್​ ಅನ್ನು ತೆರೆದಿಟ್ಟಿದ್ದಾಳೆ ಈಕೆ. ಮನೆಯ ವರಾಂಡಾದೊಳಗೆ ಏನಿಲ್ಲವೆಂದರೂ ಏಳೆಂಟು ನಾಯಿಗಳು ಮಲಗಿವೆ. ಹಾಗೆಯೇ ತಾಯಿನಾಯಿಯೊಂದು ತನ್ನ ನಾಲ್ಕು ಮರಿಗಳೊಂದಿಗೆ ಬೆಚ್ಚಗೆ ಕುಳಿತಿದೆ.

ಮಳೆಗಾಲ ಅಥವಾ ಕಡುಬೇಸಿಗೆಯ ಸಂದರ್ಭದಲ್ಲಿ ಹೀಗೆ ಪ್ರಾಣಿಗಳಿಗೆ ಆಶ್ರಯ ಕೊಡುವ ಆಲೋಚನೆ ಇದನ್ನು ಓದುತ್ತಿರುವ ಅನೇಕರಿಗೆ ಬಂದರೆ ಸಾಕು.

ಏನಂತೀರಿ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:52 pm, Thu, 24 November 22

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ