Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರಿಯುತ್ತಿರುವ ಈ ಮಳೆ, ಬೀದಿನಾಯಿಗಳಿಗೆ ಆಶ್ರಯ ನೀಡಿದ ಮಹಿಳೆ, ಮತ್ತೆ ಮತ್ತೆ ನೋಡಬೇಕೆನ್ನಿಸುವ ಈ ವಿಡಿಯೋ

Shelter to Street Dogs : ಧೋ ಎಂದು ಸುರಿಯುತ್ತಿರುವ ಮಳೆಯಲ್ಲಿ ನಿಮ್ಮಲ್ಲಿ ಅದೆಷ್ಟೋ ಜನ ಹೀಗೆ ಬೀದಿನಾಯಿಗಳಿಗೆ ಆಶ್ರಯ ಕೊಡುತ್ತಿರಬಹುದು. ಆದರೆ ಈ ಮಹಿಳೆಯ ನಡೆ ನೋಡಿ...

ಸುರಿಯುತ್ತಿರುವ ಈ ಮಳೆ, ಬೀದಿನಾಯಿಗಳಿಗೆ ಆಶ್ರಯ ನೀಡಿದ ಮಹಿಳೆ, ಮತ್ತೆ ಮತ್ತೆ ನೋಡಬೇಕೆನ್ನಿಸುವ ಈ ವಿಡಿಯೋ
Street dogs got shelter from a woman
Follow us
TV9 Web
| Updated By: ಶ್ರೀದೇವಿ ಕಳಸದ

Updated on:Nov 24, 2022 | 2:55 PM

Viral Video : ಮಳೆಬಂದರೆ ಬೀದಿಬದಿಯ ಜನಜೀವನ ಪೂರ್ತಿ ಅಸ್ತವ್ಯಸ್ತವಾಗಿಬಿಡುತ್ತದೆ. ಅದರಲ್ಲಿಯೂ ಪ್ರಾಣಿಗಳ ಅವಸ್ಥೆ ಅಂತೂ ಕೇಳುವುದೇ ಬೇಡ. ಅದೆಷ್ಟು ಜನ ಅವುಗಳ ಬಗ್ಗೆ ಕಾಳಜಿ ವಹಿಸುತ್ತಾರೆ? ಎಲ್ಲೋ ಅಪರೂಪಕ್ಕೆ ಬೆರಳೆಣಿಕೆಯಷ್ಟು ಜನ ಮಾತ್ರ. ಇದೀಗ ವೈರಲ್ ಆಗುತ್ತಿರುವ ಈ ವಿಡಿಯೋ ನೋಡಿ. ಈ ಮಹಿಳೆ ಬೀದಿನಾಯಿಗಳಿಗೆಲ್ಲ ತಮ್ಮ ಮನೆಯಲ್ಲಿ ಆಶ್ರಯ ಕೊಟ್ಟಿದ್ದಾರೆ. ನೆಟ್ಟಿಗರು ಈ ಮಹಿಳೆಯ ಹೃದಯ ಶ್ರೀಮಂತಿಕೆಗೆ ಸಲಾಮ್​ ಎನ್ನುತ್ತಿದ್ದಾರೆ.

ಈ ಬೀದಿನಾಯಿಗಳಿಗೊಂದೊಂದು ಹೆಸರಿಟ್ಟು ಮುದ್ದಿನಿಂದ ಕೂಗುವ ಈ ಮಹಿಳೆಯ ಪರಿ ಅನನ್ಯ. ಹೊರಗೆ ಗುಡುಗು, ಸುರಿಯುತ್ತಿರುವ ಮಳೆ, ಚಳಿಗೆ ಆತಂಕದಲ್ಲಿಯೇ ನಾಯಿಗಳು ಕುಳಿತಂತಿವೆ. ಎಷ್ಟೇ ಆದರೂ ಬೀದಿನಾಯಿ. ಮಳೆ ನಿಂತ ಮೇಲೆ ಮತ್ತೆ ಬೀದಿಗೇ ಎನ್ನುವ ಬೇಸರ ಅವುಗಳಿಗಿದೆಯೋ ಏನೋ, ಮನಃಸ್ಫೂರ್ತಿ ಅವುಗಳ ಮುಖದ ಮೇಲೆ ಕಾಣದು.

ಬೀದಿನಾಯಿಗಳು ಹೀಗೆ ಮನೆಯೊಳಗೆ ಬಂದು ಆಶ್ರಯ ಪಡೆಯಲೆಂದೇ ತನ್ನ ಮನೆಯ ಗೇಟ್​ ಅನ್ನು ತೆರೆದಿಟ್ಟಿದ್ದಾಳೆ ಈಕೆ. ಮನೆಯ ವರಾಂಡಾದೊಳಗೆ ಏನಿಲ್ಲವೆಂದರೂ ಏಳೆಂಟು ನಾಯಿಗಳು ಮಲಗಿವೆ. ಹಾಗೆಯೇ ತಾಯಿನಾಯಿಯೊಂದು ತನ್ನ ನಾಲ್ಕು ಮರಿಗಳೊಂದಿಗೆ ಬೆಚ್ಚಗೆ ಕುಳಿತಿದೆ.

ಮಳೆಗಾಲ ಅಥವಾ ಕಡುಬೇಸಿಗೆಯ ಸಂದರ್ಭದಲ್ಲಿ ಹೀಗೆ ಪ್ರಾಣಿಗಳಿಗೆ ಆಶ್ರಯ ಕೊಡುವ ಆಲೋಚನೆ ಇದನ್ನು ಓದುತ್ತಿರುವ ಅನೇಕರಿಗೆ ಬಂದರೆ ಸಾಕು.

ಏನಂತೀರಿ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:52 pm, Thu, 24 November 22

ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ