AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರಿಯುತ್ತಿರುವ ಈ ಮಳೆ, ಬೀದಿನಾಯಿಗಳಿಗೆ ಆಶ್ರಯ ನೀಡಿದ ಮಹಿಳೆ, ಮತ್ತೆ ಮತ್ತೆ ನೋಡಬೇಕೆನ್ನಿಸುವ ಈ ವಿಡಿಯೋ

Shelter to Street Dogs : ಧೋ ಎಂದು ಸುರಿಯುತ್ತಿರುವ ಮಳೆಯಲ್ಲಿ ನಿಮ್ಮಲ್ಲಿ ಅದೆಷ್ಟೋ ಜನ ಹೀಗೆ ಬೀದಿನಾಯಿಗಳಿಗೆ ಆಶ್ರಯ ಕೊಡುತ್ತಿರಬಹುದು. ಆದರೆ ಈ ಮಹಿಳೆಯ ನಡೆ ನೋಡಿ...

ಸುರಿಯುತ್ತಿರುವ ಈ ಮಳೆ, ಬೀದಿನಾಯಿಗಳಿಗೆ ಆಶ್ರಯ ನೀಡಿದ ಮಹಿಳೆ, ಮತ್ತೆ ಮತ್ತೆ ನೋಡಬೇಕೆನ್ನಿಸುವ ಈ ವಿಡಿಯೋ
Street dogs got shelter from a woman
TV9 Web
| Updated By: ಶ್ರೀದೇವಿ ಕಳಸದ|

Updated on:Nov 24, 2022 | 2:55 PM

Share

Viral Video : ಮಳೆಬಂದರೆ ಬೀದಿಬದಿಯ ಜನಜೀವನ ಪೂರ್ತಿ ಅಸ್ತವ್ಯಸ್ತವಾಗಿಬಿಡುತ್ತದೆ. ಅದರಲ್ಲಿಯೂ ಪ್ರಾಣಿಗಳ ಅವಸ್ಥೆ ಅಂತೂ ಕೇಳುವುದೇ ಬೇಡ. ಅದೆಷ್ಟು ಜನ ಅವುಗಳ ಬಗ್ಗೆ ಕಾಳಜಿ ವಹಿಸುತ್ತಾರೆ? ಎಲ್ಲೋ ಅಪರೂಪಕ್ಕೆ ಬೆರಳೆಣಿಕೆಯಷ್ಟು ಜನ ಮಾತ್ರ. ಇದೀಗ ವೈರಲ್ ಆಗುತ್ತಿರುವ ಈ ವಿಡಿಯೋ ನೋಡಿ. ಈ ಮಹಿಳೆ ಬೀದಿನಾಯಿಗಳಿಗೆಲ್ಲ ತಮ್ಮ ಮನೆಯಲ್ಲಿ ಆಶ್ರಯ ಕೊಟ್ಟಿದ್ದಾರೆ. ನೆಟ್ಟಿಗರು ಈ ಮಹಿಳೆಯ ಹೃದಯ ಶ್ರೀಮಂತಿಕೆಗೆ ಸಲಾಮ್​ ಎನ್ನುತ್ತಿದ್ದಾರೆ.

ಈ ಬೀದಿನಾಯಿಗಳಿಗೊಂದೊಂದು ಹೆಸರಿಟ್ಟು ಮುದ್ದಿನಿಂದ ಕೂಗುವ ಈ ಮಹಿಳೆಯ ಪರಿ ಅನನ್ಯ. ಹೊರಗೆ ಗುಡುಗು, ಸುರಿಯುತ್ತಿರುವ ಮಳೆ, ಚಳಿಗೆ ಆತಂಕದಲ್ಲಿಯೇ ನಾಯಿಗಳು ಕುಳಿತಂತಿವೆ. ಎಷ್ಟೇ ಆದರೂ ಬೀದಿನಾಯಿ. ಮಳೆ ನಿಂತ ಮೇಲೆ ಮತ್ತೆ ಬೀದಿಗೇ ಎನ್ನುವ ಬೇಸರ ಅವುಗಳಿಗಿದೆಯೋ ಏನೋ, ಮನಃಸ್ಫೂರ್ತಿ ಅವುಗಳ ಮುಖದ ಮೇಲೆ ಕಾಣದು.

ಬೀದಿನಾಯಿಗಳು ಹೀಗೆ ಮನೆಯೊಳಗೆ ಬಂದು ಆಶ್ರಯ ಪಡೆಯಲೆಂದೇ ತನ್ನ ಮನೆಯ ಗೇಟ್​ ಅನ್ನು ತೆರೆದಿಟ್ಟಿದ್ದಾಳೆ ಈಕೆ. ಮನೆಯ ವರಾಂಡಾದೊಳಗೆ ಏನಿಲ್ಲವೆಂದರೂ ಏಳೆಂಟು ನಾಯಿಗಳು ಮಲಗಿವೆ. ಹಾಗೆಯೇ ತಾಯಿನಾಯಿಯೊಂದು ತನ್ನ ನಾಲ್ಕು ಮರಿಗಳೊಂದಿಗೆ ಬೆಚ್ಚಗೆ ಕುಳಿತಿದೆ.

ಮಳೆಗಾಲ ಅಥವಾ ಕಡುಬೇಸಿಗೆಯ ಸಂದರ್ಭದಲ್ಲಿ ಹೀಗೆ ಪ್ರಾಣಿಗಳಿಗೆ ಆಶ್ರಯ ಕೊಡುವ ಆಲೋಚನೆ ಇದನ್ನು ಓದುತ್ತಿರುವ ಅನೇಕರಿಗೆ ಬಂದರೆ ಸಾಕು.

ಏನಂತೀರಿ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:52 pm, Thu, 24 November 22

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ