AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರಿಯುತ್ತಿರುವ ಈ ಮಳೆ, ಬೀದಿನಾಯಿಗಳಿಗೆ ಆಶ್ರಯ ನೀಡಿದ ಮಹಿಳೆ, ಮತ್ತೆ ಮತ್ತೆ ನೋಡಬೇಕೆನ್ನಿಸುವ ಈ ವಿಡಿಯೋ

Shelter to Street Dogs : ಧೋ ಎಂದು ಸುರಿಯುತ್ತಿರುವ ಮಳೆಯಲ್ಲಿ ನಿಮ್ಮಲ್ಲಿ ಅದೆಷ್ಟೋ ಜನ ಹೀಗೆ ಬೀದಿನಾಯಿಗಳಿಗೆ ಆಶ್ರಯ ಕೊಡುತ್ತಿರಬಹುದು. ಆದರೆ ಈ ಮಹಿಳೆಯ ನಡೆ ನೋಡಿ...

ಸುರಿಯುತ್ತಿರುವ ಈ ಮಳೆ, ಬೀದಿನಾಯಿಗಳಿಗೆ ಆಶ್ರಯ ನೀಡಿದ ಮಹಿಳೆ, ಮತ್ತೆ ಮತ್ತೆ ನೋಡಬೇಕೆನ್ನಿಸುವ ಈ ವಿಡಿಯೋ
Street dogs got shelter from a woman
TV9 Web
| Edited By: |

Updated on:Nov 24, 2022 | 2:55 PM

Share

Viral Video : ಮಳೆಬಂದರೆ ಬೀದಿಬದಿಯ ಜನಜೀವನ ಪೂರ್ತಿ ಅಸ್ತವ್ಯಸ್ತವಾಗಿಬಿಡುತ್ತದೆ. ಅದರಲ್ಲಿಯೂ ಪ್ರಾಣಿಗಳ ಅವಸ್ಥೆ ಅಂತೂ ಕೇಳುವುದೇ ಬೇಡ. ಅದೆಷ್ಟು ಜನ ಅವುಗಳ ಬಗ್ಗೆ ಕಾಳಜಿ ವಹಿಸುತ್ತಾರೆ? ಎಲ್ಲೋ ಅಪರೂಪಕ್ಕೆ ಬೆರಳೆಣಿಕೆಯಷ್ಟು ಜನ ಮಾತ್ರ. ಇದೀಗ ವೈರಲ್ ಆಗುತ್ತಿರುವ ಈ ವಿಡಿಯೋ ನೋಡಿ. ಈ ಮಹಿಳೆ ಬೀದಿನಾಯಿಗಳಿಗೆಲ್ಲ ತಮ್ಮ ಮನೆಯಲ್ಲಿ ಆಶ್ರಯ ಕೊಟ್ಟಿದ್ದಾರೆ. ನೆಟ್ಟಿಗರು ಈ ಮಹಿಳೆಯ ಹೃದಯ ಶ್ರೀಮಂತಿಕೆಗೆ ಸಲಾಮ್​ ಎನ್ನುತ್ತಿದ್ದಾರೆ.

ಈ ಬೀದಿನಾಯಿಗಳಿಗೊಂದೊಂದು ಹೆಸರಿಟ್ಟು ಮುದ್ದಿನಿಂದ ಕೂಗುವ ಈ ಮಹಿಳೆಯ ಪರಿ ಅನನ್ಯ. ಹೊರಗೆ ಗುಡುಗು, ಸುರಿಯುತ್ತಿರುವ ಮಳೆ, ಚಳಿಗೆ ಆತಂಕದಲ್ಲಿಯೇ ನಾಯಿಗಳು ಕುಳಿತಂತಿವೆ. ಎಷ್ಟೇ ಆದರೂ ಬೀದಿನಾಯಿ. ಮಳೆ ನಿಂತ ಮೇಲೆ ಮತ್ತೆ ಬೀದಿಗೇ ಎನ್ನುವ ಬೇಸರ ಅವುಗಳಿಗಿದೆಯೋ ಏನೋ, ಮನಃಸ್ಫೂರ್ತಿ ಅವುಗಳ ಮುಖದ ಮೇಲೆ ಕಾಣದು.

ಬೀದಿನಾಯಿಗಳು ಹೀಗೆ ಮನೆಯೊಳಗೆ ಬಂದು ಆಶ್ರಯ ಪಡೆಯಲೆಂದೇ ತನ್ನ ಮನೆಯ ಗೇಟ್​ ಅನ್ನು ತೆರೆದಿಟ್ಟಿದ್ದಾಳೆ ಈಕೆ. ಮನೆಯ ವರಾಂಡಾದೊಳಗೆ ಏನಿಲ್ಲವೆಂದರೂ ಏಳೆಂಟು ನಾಯಿಗಳು ಮಲಗಿವೆ. ಹಾಗೆಯೇ ತಾಯಿನಾಯಿಯೊಂದು ತನ್ನ ನಾಲ್ಕು ಮರಿಗಳೊಂದಿಗೆ ಬೆಚ್ಚಗೆ ಕುಳಿತಿದೆ.

ಮಳೆಗಾಲ ಅಥವಾ ಕಡುಬೇಸಿಗೆಯ ಸಂದರ್ಭದಲ್ಲಿ ಹೀಗೆ ಪ್ರಾಣಿಗಳಿಗೆ ಆಶ್ರಯ ಕೊಡುವ ಆಲೋಚನೆ ಇದನ್ನು ಓದುತ್ತಿರುವ ಅನೇಕರಿಗೆ ಬಂದರೆ ಸಾಕು.

ಏನಂತೀರಿ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:52 pm, Thu, 24 November 22

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್