AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ‘ನಾವು ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಯಾಣಿಸುತ್ತಿದ್ದೇವೆ’; ಮನಗೆದ್ದ ಇಂಡಿಗೋ

Param Vir Chakra : ವಿಶೇಷ ವ್ಯಕ್ತಿಯೊಬ್ಬರು ವಿಮಾನದಲ್ಲಿ ಪ್ರಯಾಣಿಸುತ್ತಿರುವಾಗ ಇಂಡಿಗೋ ವಿಮಾನ ಸಿಬ್ಬಂದಿಯು ಅವರನ್ನು ಗೌರವಿಸಿರುವ ರೀತಿ ನೆಟ್ಟಿಗರ ಮನ ಗೆದ್ದಿದೆ. ಈ ವಿಡಿಯೋ ಯೋಧರ ಬಗ್ಗೆ ಹೆಮ್ಮೆ ಮೂಡಿಸುವಂತಿದೆ.

Viral Video: 'ನಾವು ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಯಾಣಿಸುತ್ತಿದ್ದೇವೆ'; ಮನಗೆದ್ದ ಇಂಡಿಗೋ
ಪರಮ ವೀರ ಚಕ್ರ ಪುರಸ್ಕೃತ ಸುಬೇದಾರ್ ಮೇಜರ್ ಸಂಜಯ್ ಕುಮಾರ್ ಅವರನ್ನು ಗೌರವಿಸುತ್ತಿರುವ ಇಂಡಿಗೋ ಸಿಬ್ಬಂದಿ
Follow us
ಶ್ರೀದೇವಿ ಕಳಸದ
| Updated By: ರಶ್ಮಿ ಕಲ್ಲಕಟ್ಟ

Updated on:Jul 24, 2023 | 7:05 PM

Indigo : ಬಸ್ಸಾದರೆ, ರೈಲಾದರೆ ಪರಸ್ಪರರ ಬಗ್ಗೆ ತಿಳಿದುಕೊಂಡು ಒಡನಾಡುತ್ತ ಪ್ರಯಾಣದ ದೂರವನ್ನು ಹತ್ತಿರ ಮಾಡಿಕೊಳ್ಳುವುದು ಸಹಜ. ಆದರೆ ವಿಮಾನದಲ್ಲಿ? ಅವರವರ ಗುಂಗಿನಲ್ಲಿ ಅವರೆಲ್ಲರೂ. ಆದರೆ  ಸಾಮಾನ್ಯವಾಗಿ ವಿಮಾನವೆಂದಾಕ್ಷಣ ಅಲ್ಲಿ ಒಬ್ಬರಾದರೂ ವಿಶೇಷ ವ್ಯಕ್ತಿ ಇದ್ದೇ ಇರುತ್ತಾರೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ಇಂಡಿಗೋ ವಿಮಾನವು ಟೇಕ್​ ಆಫ್​ ಆಗಲು ಸಜ್ಜಾಗಿರುವ ಹೊತ್ತಿನಲ್ಲಿ ಉದ್ಘೋಷಣೆಯೊಂದು ಎಲ್ಲರ ಗಮನ ಸೆಳೆಯುತ್ತದೆ; ಪರಮ ವೀರ ಚಕ್ರ ಪ್ರಶಸ್ತಿ (Param Vir Chakra) ಪುರಸ್ಕೃತರಾದ ಸುಬೇದಾರ್ ಮೇಜರ್ ಸಂಜಯ್ ನಾವು ಪ್ರಯಾಣಿಸುತ್ತಿದ್ದೇವೆ…

ಮೇಜರ್ ಸಂಜಯ್ ಭಾನುವಾರದಂದು ಪುಣೆಗೆ ಪ್ರಯಾಣಿಸುವಾಗ ಕ್ಯಾಪ್ಟನ್​ ಎಡ್ಸೆಲ್ ಪ್ರಯಾಣಿಕರ ಸಮ್ಮುಖದಲ್ಲಿ ಅವರನ್ನು ಹೀಗೆ ಗೌರವಿಸಿದ್ದಾರೆ. ನಂತರ ಸಂಜಯ್​ ಅವರು ಯುದ್ಧದ ಅನುಭವನ್ನು ಹಂಚಿಕೊಂಡರು. ಈ ವಿಡಿಯೋ ಅನ್ನು ಟ್ವೀಟ್ ಮಾಡಿದಾಗಿನಿಂದ 3 ಲಕ್ಷಕ್ಕೂ ಹೆಚ್ಚು ಜನರು ನೋಡಿದ್ದಾರೆ. 1,000ಕ್ಕಿಂತಲೂ ಹೆಚ್ಚು ಜನರು ರೀಟ್ವೀಟ್ ಮಾಡಿದ್ದಾರೆ. 5,000ಕ್ಕಿಂತಲೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ.

ಇದನ್ನೂ ಓದಿ : Viral Video: ಇಲ್ಲಿ ಈ ಆಟ ಆಡುವವರೆಲ್ಲ ಡೈಪರ್ ಹಾಕಿಕೊಳ್ಳಲೇಬೇಕು!

ಸಂಜಯ್ ಅವರ ಬಗ್ಗೆ ಭಾರತೀಯರಾದ ನಮಗೆ ಹೆಮ್ಮೆ ಇದೆ ಎಂದು ನೆಟ್ಟಿಗರನೇಕರು ಹೇಳಿದ್ದಾರೆ. ಅಲ್ಲದೆ, ಅವರನ್ನು ಹೀಗೆ ಅಭಿನಂದಿಸಿರುವ ನಿಮ್ಮ ನಡೆ ಸ್ತುತ್ಯಾರ್ಹ ಎಂದು ಇಂಡಿಗೋಗೆ ತಿಳಿಸಿದ್ದಾರೆ. ಯೋಧರ ಪರಾಕ್ರಮ ಮತ್ತು ತ್ಯಾಗಗಳ ಫಲವಾಗಿಯೇ ನಾವೆಲ್ಲ ಇಂದು ನೆಮ್ಮದಿಯಾಗಿದ್ದೇವೆ ಎಂದಿದ್ದಾರೆ ಕೆಲವರು. ಇಂಥ ಹೆಮ್ಮೆಯ ಕ್ಷಣಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಕ್ಕೆ ಬಹಳ ಖುಷಿ ಎಂದು ಇನ್ನೂ ಕೆಲವರು ಇಂಡಿಗೋಗೆ ಧನ್ಯವಾದ ಅರ್ಪಿಸಿದ್ಧಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:32 pm, Mon, 24 July 23

ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ