AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ‘ನಾವು ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಯಾಣಿಸುತ್ತಿದ್ದೇವೆ’; ಮನಗೆದ್ದ ಇಂಡಿಗೋ

Param Vir Chakra : ವಿಶೇಷ ವ್ಯಕ್ತಿಯೊಬ್ಬರು ವಿಮಾನದಲ್ಲಿ ಪ್ರಯಾಣಿಸುತ್ತಿರುವಾಗ ಇಂಡಿಗೋ ವಿಮಾನ ಸಿಬ್ಬಂದಿಯು ಅವರನ್ನು ಗೌರವಿಸಿರುವ ರೀತಿ ನೆಟ್ಟಿಗರ ಮನ ಗೆದ್ದಿದೆ. ಈ ವಿಡಿಯೋ ಯೋಧರ ಬಗ್ಗೆ ಹೆಮ್ಮೆ ಮೂಡಿಸುವಂತಿದೆ.

Viral Video: 'ನಾವು ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಯಾಣಿಸುತ್ತಿದ್ದೇವೆ'; ಮನಗೆದ್ದ ಇಂಡಿಗೋ
ಪರಮ ವೀರ ಚಕ್ರ ಪುರಸ್ಕೃತ ಸುಬೇದಾರ್ ಮೇಜರ್ ಸಂಜಯ್ ಕುಮಾರ್ ಅವರನ್ನು ಗೌರವಿಸುತ್ತಿರುವ ಇಂಡಿಗೋ ಸಿಬ್ಬಂದಿ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ| Edited By: ರಶ್ಮಿ ಕಲ್ಲಕಟ್ಟ|

Updated on:Jul 24, 2023 | 7:05 PM

Share

Indigo : ಬಸ್ಸಾದರೆ, ರೈಲಾದರೆ ಪರಸ್ಪರರ ಬಗ್ಗೆ ತಿಳಿದುಕೊಂಡು ಒಡನಾಡುತ್ತ ಪ್ರಯಾಣದ ದೂರವನ್ನು ಹತ್ತಿರ ಮಾಡಿಕೊಳ್ಳುವುದು ಸಹಜ. ಆದರೆ ವಿಮಾನದಲ್ಲಿ? ಅವರವರ ಗುಂಗಿನಲ್ಲಿ ಅವರೆಲ್ಲರೂ. ಆದರೆ  ಸಾಮಾನ್ಯವಾಗಿ ವಿಮಾನವೆಂದಾಕ್ಷಣ ಅಲ್ಲಿ ಒಬ್ಬರಾದರೂ ವಿಶೇಷ ವ್ಯಕ್ತಿ ಇದ್ದೇ ಇರುತ್ತಾರೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ಇಂಡಿಗೋ ವಿಮಾನವು ಟೇಕ್​ ಆಫ್​ ಆಗಲು ಸಜ್ಜಾಗಿರುವ ಹೊತ್ತಿನಲ್ಲಿ ಉದ್ಘೋಷಣೆಯೊಂದು ಎಲ್ಲರ ಗಮನ ಸೆಳೆಯುತ್ತದೆ; ಪರಮ ವೀರ ಚಕ್ರ ಪ್ರಶಸ್ತಿ (Param Vir Chakra) ಪುರಸ್ಕೃತರಾದ ಸುಬೇದಾರ್ ಮೇಜರ್ ಸಂಜಯ್ ನಾವು ಪ್ರಯಾಣಿಸುತ್ತಿದ್ದೇವೆ…

ಮೇಜರ್ ಸಂಜಯ್ ಭಾನುವಾರದಂದು ಪುಣೆಗೆ ಪ್ರಯಾಣಿಸುವಾಗ ಕ್ಯಾಪ್ಟನ್​ ಎಡ್ಸೆಲ್ ಪ್ರಯಾಣಿಕರ ಸಮ್ಮುಖದಲ್ಲಿ ಅವರನ್ನು ಹೀಗೆ ಗೌರವಿಸಿದ್ದಾರೆ. ನಂತರ ಸಂಜಯ್​ ಅವರು ಯುದ್ಧದ ಅನುಭವನ್ನು ಹಂಚಿಕೊಂಡರು. ಈ ವಿಡಿಯೋ ಅನ್ನು ಟ್ವೀಟ್ ಮಾಡಿದಾಗಿನಿಂದ 3 ಲಕ್ಷಕ್ಕೂ ಹೆಚ್ಚು ಜನರು ನೋಡಿದ್ದಾರೆ. 1,000ಕ್ಕಿಂತಲೂ ಹೆಚ್ಚು ಜನರು ರೀಟ್ವೀಟ್ ಮಾಡಿದ್ದಾರೆ. 5,000ಕ್ಕಿಂತಲೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ.

ಇದನ್ನೂ ಓದಿ : Viral Video: ಇಲ್ಲಿ ಈ ಆಟ ಆಡುವವರೆಲ್ಲ ಡೈಪರ್ ಹಾಕಿಕೊಳ್ಳಲೇಬೇಕು!

ಸಂಜಯ್ ಅವರ ಬಗ್ಗೆ ಭಾರತೀಯರಾದ ನಮಗೆ ಹೆಮ್ಮೆ ಇದೆ ಎಂದು ನೆಟ್ಟಿಗರನೇಕರು ಹೇಳಿದ್ದಾರೆ. ಅಲ್ಲದೆ, ಅವರನ್ನು ಹೀಗೆ ಅಭಿನಂದಿಸಿರುವ ನಿಮ್ಮ ನಡೆ ಸ್ತುತ್ಯಾರ್ಹ ಎಂದು ಇಂಡಿಗೋಗೆ ತಿಳಿಸಿದ್ದಾರೆ. ಯೋಧರ ಪರಾಕ್ರಮ ಮತ್ತು ತ್ಯಾಗಗಳ ಫಲವಾಗಿಯೇ ನಾವೆಲ್ಲ ಇಂದು ನೆಮ್ಮದಿಯಾಗಿದ್ದೇವೆ ಎಂದಿದ್ದಾರೆ ಕೆಲವರು. ಇಂಥ ಹೆಮ್ಮೆಯ ಕ್ಷಣಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಕ್ಕೆ ಬಹಳ ಖುಷಿ ಎಂದು ಇನ್ನೂ ಕೆಲವರು ಇಂಡಿಗೋಗೆ ಧನ್ಯವಾದ ಅರ್ಪಿಸಿದ್ಧಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:32 pm, Mon, 24 July 23

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ