AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರದ ಸ್ಕೇಲ್​ನಲ್ಲಿ ಮದುವೆಯ ಊಟದ ಮೆನು ಬರೆಸಿದ ಕುಟುಂಬ: ವೈರಲ್​ ಆದ ಫೋಟೋಗಳು

 30 ಸೆಂ ಮೀ ಉದ್ದದ ಸ್ಕೇಲ್​ನಲ್ಲಿ ಊಟದ ಮೆನುವನ್ನು ಬರೆಯಲಾಗಿದೆ. ಮೆನುವುನಲ್ಲಿ ಫ್ರೈಡ್​ ರೈಸ್​, ಮಟನ್​ ಮಸಾಲಾ, ಫಿಶ್​ ಕಲಿಯಾ ಸೇರದಂತೆ ವಿವಿಧ ರೀತಿಯ ಖಾದ್ಯಗಳನ್ನು ಪಟ್ಟಿ ಮಾಡಲಾಗಿದೆ. 

ಮರದ ಸ್ಕೇಲ್​ನಲ್ಲಿ ಮದುವೆಯ ಊಟದ ಮೆನು ಬರೆಸಿದ ಕುಟುಂಬ: ವೈರಲ್​ ಆದ ಫೋಟೋಗಳು
ಸ್ಕೇಲ್​
TV9 Web
| Edited By: |

Updated on: Jan 10, 2022 | 3:54 PM

Share

ಮದುವೆ ಮನೆಗಳಲ್ಲಿ ಊಟ ಎಂದರೆ ಬಾಯಲ್ಲಿ ನೀರೂರಿಸದವರಿಲ್ಲ. ವಿವಿಧ ರೀತಿಯ ಖಾದ್ಯಗಳು, ತರಹೇವಾರಿ ಸಿಹಿ ತಿಂಡಿಗಳು ಮದುವೆ ಮನೆಯ ಊಟದ ರುಚಿಯನ್ನು ಹೆಚ್ಚಿಸುತ್ತದೆ. ಸಾಮಾನ್ಯವಾಗಿ ಊಟದ ಮೆನುವಾಗಿ ಹೊಟೆಲ್​ ಅಥವಾ ಮದುವೆಗಳಲ್ಲಿ  ಮೆನು ಪುಸ್ತಕವನ್ನು ನೀಡುತ್ತಾರೆ. ಆದರೆ ಇಲ್ಲೊಂದು ಮದುವೆಯ ಊಟದ ಮೆನುವನ್ನು ನೋಡಿದರೆ ತಯಾರಕರ ಕ್ರಿಯೇಟಿವಿಟಿಗೆ ಮೆಚ್ಚಲೇಬೇಕು. ಹೌದು ಬೆಂಗಾಲಿ ಮದುವೆಯೊಂದರ ಊಟದ ಮೆನುವನ್ನು ಮರದ ಸ್ಕೇಲಿನಲ್ಲಿ ಬರೆದು ನೀಡಲಾಗಿದೆ. ಇದರ ಫೋಟೋಗಳು ಇದೀಗ ವೈರಲ್​ ಆಗಿವೆ.

2013ರಲ್ಲಿ ನಡೆದ ಮದುವೆಯ ಮೆನು ಕಾರ್ಡ್​ ಇದಾಗಿದೆ. ಬೆಂಗಾಲಿ ಕುಟುಂಬದ ಸುಶ್ಮಿತಾ ಹಾಗೂ ಅನಿಮೇಶ್​ ಎನ್ನವವರ ಮದುವೆಯಲ್ಲಿ ಈ ರೀತಿ ಮೆನು ಕಾರ್ಡ್​ ತಯಾರಿಸಲಾಗಿದೆ. 30 ಸೆಂ ಮೀ ಉದ್ದದ ಸ್ಕೇಲ್​ನಲ್ಲಿ ಊಟದ ಮೆನುವನ್ನು ಬರೆಯಲಾಗಿದೆ. ಮೆನುವುನಲ್ಲಿ ಫ್ರೈಡ್​ ರೈಸ್​, ಮಟನ್​ ಮಸಾಲಾ, ಫಿಶ್​ ಕಲಿಯಾ ಸೇರದಂತೆ ವಿವಿಧ ರೀತಿಯ ಖಾದ್ಯಗಳನ್ನು ಪಟ್ಟಿ ಮಾಡಲಾಗಿದೆ.  ಸ್ಟೀರಿಯೋ ಟೈಪ್​ರೈಟರ್​ ಎನ್ನುವ ಟ್ವಿಟರ್​ ಖಾತೆಯಲ್ಲಿ ಈ ಸ್ಕೆಲ್​ ಮೆನುವಿನ ಫೋಟೋವನ್ನು ಹಂಚಿಕೊಳ್ಳಲಾಗಿದೆ.

ಈ ಫೋಟೊವನ್ನು ನೋಡಿ ಫುಡ್​ ಪ್ರಿಯರು ವಿವಿಧ ರೀತಿಯಲ್ಲಿ ಕಾಮೆಂಟ್​ ಮಾಡಿದ್ದಾರೆ. ಇದನ್ನು ನೋಡಿ ಬಳಕೆದಾರರೊಬ್ಬರು, ಹೆಚ್ಚು ಆಹಾರ ತಿಂದಿದ್ದಕ್ಕೆ ಇದೇ ಸ್ಕೇಲಿನಿಂದ ತಿರುಗಿಸಿ ಹೊಡೆಯಬೇಡಿ ಎಂದು ಕಾಮೆಂಟ್​ ಮಾಡಿದ್ದಾರೆ. ಟ್ರೆಡೀಷನಲ್​ ವೆಡ್ಡಿಂಗ್​ ಮೆನು ಎಂದು ಹ್ಯಾಷ್​ಟ್ಯಾಗ್​ ಮೂಲಕ  ಸ್ಕೇಲ್​ ಮೆನುವನ್ನು ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ:

ಈ ಊರಿನ ಪಾರಿವಾಳಗಳ ಹೆಸರಿನಲ್ಲಿದೆ ಕೋಟ್ಯಾಂತರ ರೂ.ಮೌಲ್ಯದ ಆಸ್ತಿ !

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ