AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇಟ್​ಲಿಫ್ಟಿಂಗ್​ ಮಾಡಿದ ಪುಟ್ಟ ಬಾಲಕಿ! ಮೀರಾಬಾಯಿ ಚಾನು ಅವರ ಪ್ರತಿಕ್ರಿಯೆ ಏನಿತ್ತು ನೋಡಿ

ಬಾಲಕಿಯ ತಂದೆ ವೇಟ್ಲಿಫ್ಟರ್. ಹಾಗಿರುವಾಗ ವೇಟ್​ಲಿಫ್ಟಿಂಗ್​ ಕಲೆ ಅವಳ ರಕ್ತದಲ್ಲಿಯೇ ಬಂದಿದೆ. ಮೀರಾಬಾಯಿ ಚಾನು ಅವರೂ ಸಹ ಈ ಪುಟ್ಟ ಬಾಲಕಿಯ ವಿಡಿಯೋ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವೇಟ್​ಲಿಫ್ಟಿಂಗ್​ ಮಾಡಿದ ಪುಟ್ಟ ಬಾಲಕಿ! ಮೀರಾಬಾಯಿ ಚಾನು ಅವರ ಪ್ರತಿಕ್ರಿಯೆ ಏನಿತ್ತು ನೋಡಿ
TV9 Web
| Edited By: |

Updated on:Jul 27, 2021 | 12:18 PM

Share

ಟೋಕಿಯೊ ಒಲಂಪಿಕ್ಸ್​ನಲ್ಲಿ ಗೆದ್ದ ಭಾರತದ ವೇಟ್​ಲಿಫ್ಟರ್​ ಮೀರಾಬಾಯಿ ಚಾನು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮುಂದಿನ ಪೀಳಿಗೆಗೆ ಮಾದರಿ ವ್ಯಕ್ತಿಯಾಗಿ ಹೊರಹೊಮ್ಮಿದ ಇವರ ಸಾಧನೆಯನ್ನು ನೋಡಿ ಪುಟ್ಟ ಮಕ್ಕಳೂ ಸಹ ಇವರಂತೆಯೇ ಆಗಲು ಇಚ್ಛಿಸುತ್ತಿದ್ದಾರೆ. ಇಲ್ಲೋರ್ವ ಪುಟ್ಟ ಬಾಲಕಿ ವೇಟ್​ಲಿಫ್ಟ್​ ಹಿಡಿದು ಮೀರಾಬಾಯಿ ಚಾನು ಅವರ ಹಾಗೆ ವೇಟ್​ಲಿಫ್ಟಿಂಗ್​ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ವಿಡಿಯೋ ಗಮನಿಸುವಂತೆ ಪುಟ್ಟ ಬಾಲಕಿ ವೇಟ್​ಲಿಫ್ಟಿಂಗ್​ ಮಾಡುತ್ತಿದ್ದಾಳೆ. ಅವಳ ಹಿಂದಿರುವ ಟಿವಿಯಲ್ಲಿ ಮೀರಾಬಾಯಿ ಚಾನು ವೇಟ್​ಲಿಫ್ಟಿಂಗ್ ಮಾಡುತ್ತಿರುವ ದೃಶ್ಯ ಕಾಣಬಹುದು. ಪದಕ ಗೆದ್ದು ಖುಷಿಯಂತೆಯೇ, ಬಾಲಕಿಯೂ ಸಹ ಅಭಿನಯಿಸುತ್ತಿದ್ದಾಳೆ. ಮೀರಾಬಾಯಿ ಚಾನು ಅವರಂತೆಯೇ ಆಗುವ ಬಾಲಕಿಯ ಕನಸಿಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಾಲಕಿಯ ತಂದೆ ವೇಟ್​ಲಿಫ್ಟರ್​. ಹಾಗಿರುವಾಗ ವೇಟ್​ಲಿಫ್ಟಿಂಗ್ ಕಲೆ ಅವಳ ರಕ್ತದಲ್ಲಿಯೇ ಬಂದಿದೆ. ಮೀರಾಬಾಯಿ ಚಾನು ಅವರೂ ಸಹ ಈ ಪುಟ್ಟ ಬಾಲಕಿಯ ವಿಡಿಯೋ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಸೋ.. ಕ್ಯೂಟ್. ಜಸ್ಟ್ ಲವ್ ದಿಸ್ ಎಂದು ಬರೆದುಕೊಂಡಿದ್ದಾರೆ.

ವೇಟ್ಲಿಫ್ಟರ್ ಸತೀಶ್ ಅವರು ವಿಡಿಯೋ ಹಂಚಿಕೊಂಡಿದ್ದು ಜೂನಿಯರ್ ಮೀರಾಬಾಯಿ ಚಾನು. ಇವರು ಎಲ್ಲರಿಗೆ ಸ್ಪೂರ್ತಿ  ಎಂದು ಶೀರ್ಷಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಅಭಿಪ್ರಾಯಗಳ ಸುರಿಮಳೆಯೇ ಬಂದಿದೆ. ಪುಟ್ಟ ಬಾಲಕಿಯು ಮೀರಾಬಾಯಿ ಅವರಂತೆ ಆಗಲು ಕನಸು ಕಾಣುತ್ತಿರುವುದು ಹೆಮ್ಮೆಯ ವಿಷಯ ಎಂದು ಹೇಳಿದ್ದಾರೆ. ಇನ್ನು ಕೆಲವರು ವೀರಾಬಾಯಿ ಚಾನು ಅವರಿಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ವಿಡಿಯೋ 2 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. 21 ಸಾವಿರಕ್ಕೂ ಹೆಚ್ಚು ಲೈಕ್ಸ್​ಗಳು ಬಂದಿವೆ.

ಇದನ್ನೂ ಓದಿ:

Tokyo Olympics 2020: ಸರ್ಕಾರದ ಬೆಂಬಲವಿಲ್ಲದೇ ಹೋಗಿದ್ದರೆ ನನಗೆ ಪದಕ ಗೆಲ್ಲುವುದು ಸಾಧ್ಯವಾಗುತ್ತಿರಲಿಲ್ಲ: ಮೀರಾಬಾಯಿ ಚಾನು

PHOTOS: ಭಾರತಕ್ಕೆ ವಾಪಸ್ಸಾದ ಬೆಳ್ಳಿ ಹುಡುಗಿ ಮೀರಾಬಾಯಿ ಚಾನು; ಡಿವೈಎಸ್​ಪಿ ಹುದ್ದೆ ನೀಡಿ ಗೌರವಿಸಿದ ಮಣಿಪುರ ಸರ್ಕಾರ

Published On - 12:17 pm, Tue, 27 July 21

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್