AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weird News: ಬ್ರಿಟನ್ ದೇಶದಲ್ಲಿ ಈ ನಿರ್ದಿಷ್ಟ ದಿನದಂದು ಹೆಚ್ಚಿನ ಸಾವು ಸಂಭವಿಸುತ್ತದೆ: ಅಧ್ಯಯನ

ನಾವು ಯಾವಾಗ ಸಾವಿನ ಕದ ತಟ್ಟುತ್ತೇವೆ, ಸಾವು ಯಾವಾಗ ಸಂಭವಿಸುತ್ತದೆ ಎಂದು ಯಾರಿಗೂ ಹೇಳಲು ಸಾಧ್ಯವಿಲ್ಲ. ಆದರೆ ಬ್ರಿಟನ್ನಲ್ಲಿ ನಡೆದ ಇತ್ತೀಚಿನ ಅಧ್ಯಯನವೊಂದು ಬ್ರಿಟನ್ ದೇಶದಲ್ಲಿ ಡಿಸೆಂಬರ್ 30 ರಿಂದ ಜನವರಿ 9 ರ ನಡುವೆ ಹೆಚ್ಚು ಸಾವುಗಳು ಸಂಭವಿಸುತ್ತದೆ ಎಂಬ ಆಘಾತಕಾರಿ ಸಂಗತಿಯನ್ನು ಬಹಿರಂಗಪಡಿಸಿದೆ.

Weird News: ಬ್ರಿಟನ್ ದೇಶದಲ್ಲಿ ಈ  ನಿರ್ದಿಷ್ಟ ದಿನದಂದು ಹೆಚ್ಚಿನ ಸಾವು ಸಂಭವಿಸುತ್ತದೆ: ಅಧ್ಯಯನ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Oct 24, 2023 | 4:55 PM

Share

ಈ ಪ್ರಪಂಚವು ಹಲವಾರು ರಹಸ್ಯಗಳಿಂದ ತುಂಬಿದೆ. ಅದರಲ್ಲಿ ಒಂದು ದೊಡ್ಡ ರಹಸ್ಯವೆಂದರೆ ಸಾವು. ಸಾವು ಯಾವಾಗ ಸಂಭವಿಸುತ್ತದೆ ಇದರ ಬಗ್ಗೆ ಯಾರಿಗೂ ತಿಳಿದಿಲ್ಲ. ಯಾರು ಯಾವಾಗ, ಯಾವ ದಿನ ಸಾಯುತ್ತಾರೆ ಎಂಬುದನ್ನು ಯಾರಿಂದಲೂ ಊಹಿಸಲು ಸಾಧ್ಯವಿಲ್ಲ. ಈ ವಿಷಯ ಇನ್ನೂ ನಿಗೂಢವಾಗಿದೆ. ಹೀಗಿದ್ದರೂ ಸಾವಿಗೆ ಸಂಬಂಧಿಸಿದ ರಹಸ್ಯಗಳನ್ನು ತಿಳಿದುಕೊಳ್ಳಲು ಜನರು ಹೆಚ್ಚು ಉತ್ಸುಹಕರಾಗಿರುತ್ತಾರೆ. ನಿರ್ಧಿಷ್ಟವಾಗಿ ಯಾವ ದಿನದಂದು ಜನರು ಸಾವನ್ನಪ್ಪುತ್ತಾರೆ ಎಂಬುದು ಯಾರಿಗೂ ತಿಳಿದಿಲ್ಲ. ಆದರೆ ಬ್ರಿಟನ್ನಲ್ಲಿ ನಡೆದ ಸಂಶೋಧನೆಯೊಂದು ಬ್ರಿಟನ್ ದೇಶದಲ್ಲಿ ಡಿಸೆಂಬರ್ 30 ರಿಂದ ಜನವರಿ 9 ರ ನಡುವೆ ಅತೀ ಹೆಚ್ಚು ಜನರು ಸಾವನ್ನಪ್ಪುತ್ತಾರೆ ಎಂಬ ಆಘಾತಕಾರಿ ಸಂಗತಿಯನ್ನು ಬಹಿರಂಗಪಡಿಸಿದೆ.

ಬ್ರಿಟನ್ನಲ್ಲಿ ನಡೆದ ಇತ್ತೀಚಿನ ಅಧ್ಯಯನವು ನಿರ್ಧಿಷ್ಟವಾಗಿ ಯಾವ ದಿನದಂದು ಅತೀ ಹೆಚ್ಚು ಸಾವುಗಳು ಸಂಭವಿಸುತ್ತದೆ ಎಂಬುದನ್ನು ಬಹಿರಂಗ ಪಡಿಸಿದೆ. ʼಆಫ್ಟರ್ ಲೈಫ್ ಸರ್ವೀಸ್ ಸೈಟ್ ಬಿಯಾಂಡ್ʼ ಅಧ್ಯಯನದ ಪ್ರಕಾರ, ಬ್ರಿಟನ್ನಲ್ಲಿ ಅತೀ ಹೆಚ್ಚು ಸಾವುಗಳು ಸಂಭವಿಸುವ ದಿನವೆಂದರೆ ಜನವರಿ 6 ನೇ ತಾರೀಕು. ಅಲ್ಲದೆ ಕ್ರಿಸ್ಮಸ್ ನಂತರದ ಸಮಯವು ಅಂದರೆ ಡಿಸೆಂಬರ್ 30 ರಿಂದ ಜನವರಿ 9 ರ ನಡುವಿನ ದಿನಗಳು ಸಾವಿಗೆ ಸಂಬಂಧಿಸಿದ ದೃಷ್ಟಿಕೋನದಿಂದ ಅತ್ಯಂತ ಅಪಾಯಕಾರಿ ದಿನಗಳೆಂದು ಈ ಅಧ್ಯಯನ ಹೇಳಿದೆ.

ಅಧ್ಯಯನ ಏನು ಹೇಳುತ್ತದೆ?

ಈ ಸಂಶೋಧನೆಯ ಪ್ರಕಾರ 2005 ರಿಂದ ಬ್ರಿಟನ್ನಲ್ಲಿ ಪ್ರತಿದಿನ 1387 ಸಾವುಗಳು ಸಂಭವಿಸುತ್ತಿವೆ. ಆದರೆ ಇಲ್ಲಿ ಅತ್ಯಂತ ಆಶ್ಚರ್ಯಕರ ಸಂಗತಿಯೆಂದರೆ ಜನವರಿ 6 ರಂದು ಮಾತ್ರ 1732 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ ಬ್ರಿಟನ್ನಲ್ಲಿ ಡಿಸೆಂಬರ್ 30 ರಿಂದ ಜನವರಿ 9 ರ ನಡುವಿನ ದಿನಗಳನ್ನು ಸಾವಿನ ದೃಷ್ಟಿಕೋನದಿಂದ ಅತ್ಯಂತ ಅಪಾಯಕಾರಿ ದಿನಗಳೆಂದು ಪರಿಗಣಿಸಲಾಗಿದೆ.

ಇದನ್ನೂ ಓದಿ:  ವಿಶ್ವದ ಅತ್ಯಂತ ಹಿರಿಯ ವಯಸ್ಸಿನ ಶ್ವಾನ ಬಾಬಿ ಇನ್ನಿಲ್ಲ

ಅಷ್ಟಕ್ಕೂ ಈ ನಿರ್ಧಿಷ್ಟ ದಿನದಂದು ಅತೀ ಹೆಚ್ಚು ಸಾವುಗಳು ಏಕೆ ಸಂಭವಿಸುತ್ತದೆ ಎಂಬುದನ್ನು ನೋಡುವುದಾದರೆ, ಈ ಅವಧಿಯಲ್ಲಿನ ಸಾವುಗಳಿಗೆ ತೀವ್ರ ಶೀತ ವಾತಾವರಣ ಕಾರಣವಾಗಿದೆ. ಬ್ರಿಟನ್ನಲ್ಲಿ ಡಿಸೆಂಬರ್ ತಿಂಗಳಿಂದ ಜನವರಿ ವರೆಗೆ ಹೆಚ್ಚು ಚಳಿ ಇರುತ್ತದೆ. ಈ ಶೀತ ವಾತವರಣದ ಕಾರಣದಿಂದಾಗಿ ಜನರ ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುತ್ತದೆ, ಇದರಿಂದಾಗಿ ಜನರು ಸುಲಭವಾಗಿ ರೋಗಗಳ ಸಂಪರ್ಕಕ್ಕೆ ಬರುತ್ತಾರೆ. ಇದರಿಂದಾಗಿ ಈ ದಿನದಂದು ಹೆಚ್ಚು ಸಾವುಗಳು ಸಂಭವಿಸುತ್ತದೆ. ಅಷ್ಟೇ ಅಲ್ಲದೆ ಬ್ರಿಟನ್ನಲ್ಲಿ ಜುಲೈ 30 ರಂದು ಅತೀ ಕಡಿಮೆ ಸಾವುಗಳು ಸಂಭವಿಸುತ್ತದೆ. ಏಕೆಂದರೆ ಆಗ ವಾತವರಣ ಬಿಸಿಯಾಗಿರುತ್ತದೆ ಎಂಬುದನ್ನು ಕೂಡಾ ಈ ಅಧ್ಯಯನ ಹೇಳಿದೆ. ಆದರೂ ಕೆಲವು ಸಂಶೋಧಕರು ಬೇಸಿಗೆಯಲ್ಲಿ ಸಾವಿನ ಸಂಖ್ಯೆ ಚಳಿಗಾಲಕ್ಕಿಂತ ಹೆಚ್ಚು ಎಂದು ನಂಬುತ್ತಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!