AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಗಲ್​ ಮೀಟ್​ನಲ್ಲಿ ಸಂಬಂಧಿಗಳಿಗೆ ಆಹ್ವಾನ; ಜೊಮಾಟೋ ಮೂಲಕ ಊಟ: ಇದು ಕೊರೋನಾ ಕಾಲದ ವಿಭಿನ್ನ ಮದುವೆ

ಪಶ್ಚಿಮ ಬಂಗಾಳದಲ್ಲಿ ಕೊರೋನಾ ಗಣನೀಯ ಏರಿಕೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಮದುವೆ ಹಾಗೂ ಇನ್ನಿತರ ಸಮಾರಂಭಗಳಿಗೆ 200 ಜನರ ಮಿತಿಯನ್ನು ನಿಗದಿಪಡಿಸಿದೆ. ಹೀಗಾಗಿ ಸಂದೀಪನ್​ ಹಾಗೂ ಅಧಿತಿ  ಗೂಗಲ್​ ಮೀಟ್​ನಲ್ಲಿ ಮದುವೆಯಾಗಲು ನಿರ್ಧರಿಸಿದ್ದಾರೆ.

ಗೂಗಲ್​ ಮೀಟ್​ನಲ್ಲಿ ಸಂಬಂಧಿಗಳಿಗೆ ಆಹ್ವಾನ; ಜೊಮಾಟೋ ಮೂಲಕ ಊಟ: ಇದು ಕೊರೋನಾ ಕಾಲದ ವಿಭಿನ್ನ ಮದುವೆ
ಗಾಯಕ ಸುರೋಜಿತ್​ ಚಟರ್ಜಿ ಜೊತೆ ಅಧಿತಿ ಹಾಗೂ ಸಂದೀಪನ್​
TV9 Web
| Edited By: |

Updated on:Jan 18, 2022 | 11:27 AM

Share

ಕೊರೋನಾ (Corona) ಎಲ್ಲೆಡೆ ಹರಡುತ್ತಿದೆ. ಜನ ಕಾಯಿಲೆಯಿಂದ ಪಾರಾಗಲು ವ್ಯಾಕ್ಸಿನ್​ಗಳನ್ನು ಪಡೆದುಕೊಂಡಿದ್ದರೂ ರೋಗಕ್ಕೆ ತುತ್ತಾಗುತ್ತಿದ್ದರೆ. ಇದರಿಂದ ಮದುವೆ ಹಾಗೂ ಇನ್ನಿತರ ಸಮಾರಂಭಗಳಿಗೆ ಜನ ಹೋಗದಂತಹ ಪರಿಸ್ಥಿತಿ ಎದುರಾಗಿದೆ. ಈ ನಡುವೆ ಪಶ್ಚಿಮ ಬಂಗಾಳದ ಜೋಡಿಯೊಂದು ಮದುವೆಯನ್ನು ವರ್ಚುವಲ್​ ಆಗಿ ಆಗಲು ನಿರ್ಧರಿಸಿದ್ದಾರೆ. ಹೌದು, ಗೂಗಲ್​ ಮೀಟ್ (Google Meet)​ ಮೂಲಕ ಸಂಬಂಧಿಕರನ್ನು ಆಹ್ವಾನಿಸಿ, ಊಟವನ್ನು ಜೊಮಾಟೋ (Zomato) ಮೂಲಕ ಅವರ ಮನೆಗೆ ಕಳುಹಿಸುವ ವ್ಯವಸ್ಥೆ ಮಾಡಿದ್ದಾರೆ. ಸಂದೀಪನ್​ ಸರ್ಕಾರ್​ ಮತ್ತು ಅಧಿತಿ ದಾಸ್​ ಎನ್ನುವ ಜೋಡಿ ಇದೇ ಜನವರ 24ರಂದು ಹಸೆಮಣೆ ಏರಲು ನಿರ್ಧರಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕೊರೋನಾ ಗಣನೀಯ ಏರಿಕೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಮದುವೆ ಹಾಗೂ ಇನ್ನಿತರ ಸಮಾರಂಭಗಳಿಗೆ 200 ಜನರ ಮಿತಿಯನ್ನು ನಿಗದಿಪಡಿಸಿದೆ. ಹೀಗಾಗಿ ಸಂದೀಪನ್​ ಹಾಗೂ ಅಧಿತಿ  ಗೂಗಲ್​ ಮೀಟ್​ನಲ್ಲಿ ಮದುವೆಯಾಗಲು ನಿರ್ಧರಿಸಿದ್ದಾರೆ.

ಸದ್ಯ ಇವರ ನಿರ್ಧಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.  ಈ ಕುರಿತು ನ್ಯೂಸ್​ 18 ಸುದ್ದಿ ಸಂಸ್ಥೆ ವರದಿ ಮಾಡಿದೆ. ಈ ಬಗ್ಗೆ ಮಾತನಾಡಿದ ವರ ಸಂದೀಪನ್​ ಕಳೆದ ವರ್ಷವೇ ಮದುವೆಯಾಗಲು ನಿರ್ಧರಿಸಿದ್ದೆವು. ಆದರೆ ಕೊರೋನಾ ಕಾರಣದಿಂದ ಸಾಧ್ಯವಾಗಿರಲಿಲ್ಲ. ಅಲ್ಲದೇ  ಸ್ವತಃ ನಾನೇ ಸೋಂಕಿಗೆ ತುತ್ತಾದ ಕಾರಣ ಹಲವು ದಿನ ಐಸೋಲೇಷನ್​ನಲ್ಲಿದ್ದೆ. ಈ ಬಾರಿಯೂ ಕೊರೋನಾ ಕಾಡುತ್ತಿದೆ. ಹೀಗಾಗಿ ವರ್ಚುವಲ್​ ಮೂಲಕ ಮದುವೆಯಾಗಲು ನಿರ್ಧರಿಸದ್ದೇವೆ. ಮದುವೆಗೆ 450 ಜನರಿಗೆ ಗೂಗಲ್​ ಮೀಟ್​ ಲಿಂಕ್​ಅನ್ನು ಕಳುಹಿಸಲಾಗುವುದು. ಊಟವನ್ನು ಜೊಮಾಟೋ ಮೂಲಕ ಸಂಬಂಧಿಕರ ಮನೆಗಳಿಗೇ ತಲುಪಿಸುವ ವ್ಯಸವಸ್ಥೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇದೇ ಪದ್ಧತಿ ಜಾರಿಗೆ ಬಂದರೂ ಆಶ್ಚರ್ಯವಿಲ್ಲ ಎಂದು ಹೇಳಿದ್ದಾರೆ.

ಮದುವೆಯನ್ನು ಗೂಗಲ್​ ಮೀಟ್​ನಲ್ಲಿ ಪ್ರಸಾರ ಮಾಡಲು ಅಧಿತಿ ಹಾಗೂ ಸಂದೀಪ್​ ಟೆಕ್ನಿಕಲ್​ ಟೀಮ್​ ಅನ್ನು ನೇಮಿಸಿದ್ದಾರೆ. ಅಧಿತಿ ಹಾಗೂ ಸಂದೀಪನ್​ಗೆ ಫ್ಯಾಮಿಲಿ ಫ್ರೆಂಡ್​ ಆಗಿರುವ ಗಾಯಕ ಸುರೋಜಿತ್​ ಚಟರ್ಜಿ ಮಾತನಾಡಿ, ಇದು ಎಲ್ಲರೂ ಅನುಸರಿಬೇಕಾದ ಕ್ರಮವಾಗಿದೆ. ಸಾಂಕ್ರಾಮಿಕ ರೋಗ ಹರಡುವ ಈ ಸಂದರ್ಭದಲ್ಲಿ ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದಿದ್ದಾರೆ. ಕೊರೋನಾ ಸಾಂಕ್ರಾಮಿಕ ವರ್ಕ್​ ಫ್ರಾಮ್​ ಹೋಮ್​ ಎನ್ನುವ ಹೊಸ ಕಾನ್ಸೆಪ್ಟ್​ಅನ್ನು ಜಾರಿಗೆ ತಂದಿದೆ. ಇನ್ನು ಮದುವೆ, ಸಮಾರಂಭಗಳನ್ನೂ ವರ್ಚುವಲ್​ ಮೂಲಕ ನಡೆಸುವಂತಹ ದಿನಗಳು ಬಂದರೂ ಅಚ್ಚರಿಯಿಲ್ಲ.

ಇದನ್ನೂ ಓದಿ:

ಅಡ್ವಾನ್ಸ್​ ಹಣ ಹಿಂತಿರುಗಿಸದ ಮಾಲೀಕ: ಸಿಟ್ಟಿನಲ್ಲಿ ಅಂಗಡಿಯಲ್ಲಿದ್ದ 32 ವೆಡ್ಡಿಂಗ್ ಗೌನ್​ಗಳನ್ನು ಕತ್ತರಿಸಿದ ಮಹಿಳೆ

Published On - 11:25 am, Tue, 18 January 22

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ