AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪಶ್ಚಿಮ ಬಂಗಾಳದ ಕಲಾಶಿಕ್ಷಕಿಯ ಕೈಚಳವನ್ನೊಮ್ಮೆ ನೋಡಿ

3D Art : ಹೆಣ್ಣುಮಕ್ಕಳಿಗೆ ಹೊರಿಸಿದ ಅಕಾರಣ ಭಾರಗಳನ್ನು ಇಳಿಸಿದರೆ ಅವರು ಲೀಲಾಜಾಲವಾಗಿ ತಮ್ಮಿಷ್ಟದ  ಕಲೆ, ಕೌಶಲಗಳಲ್ಲಿ ಹೇಗೆ ಹರಿಯುತ್ತಾರೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿ.

Viral Video: ಪಶ್ಚಿಮ ಬಂಗಾಳದ ಕಲಾಶಿಕ್ಷಕಿಯ ಕೈಚಳವನ್ನೊಮ್ಮೆ ನೋಡಿ
ಪಶ್ಚಿಮ ಬಂಗಾಳದ ಕಲಾ ಶಿಕ್ಷಕಿಯ 3D ಆರ್ಟ್​ ಮ್ಯಾಜಿಕ್​!
TV9 Web
| Edited By: |

Updated on: Jun 06, 2023 | 1:47 PM

Share

Street Art: ಬೀದಿ ಕಲೆ, ತ್ರೀಡಿ ಕಲೆ ಎಂದಾಗ ನಮಗೆ ಥಟ್ಟನೆ ನೆನಪಾಗುವುದು ಮೈಸೂರಿನ ಪ್ರತಿಭಾವಂತ ಕಲಾವಿದ ಬಾದಲ್​ ನಂಜುಂಡಸ್ವಾಮಿ.  ಮೈಸೂರು ಬೆಂಗಳೂರಿನ ಹಾಳಾದ ರಸ್ತೆಗಳಿಗೆ, ತೆರೆದ ರಸ್ತೆಗುಂಡಿಗಳಿಗೆ ಕಲಾತ್ಮಕ ಸ್ಪರ್ಶ ಕೊಟ್ಟು ಅಧಿಕಾರಿಗಳ ಗಮನ ಸೆಳೆದ ಆರ್ಟ್​ ಆ್ಯಕ್ಟಿವಿಸ್ಟ್​. ಈ ಕೆಳಗಿನ ವಿಡಿಯೋ ಕೂಡ ಬೀದಿಕಲೆಗೆ ಸಂಬಂಧಿಸಿದ್ದು. ಆದರೆ ವಿಡಿಯೋದ ಆರಂಭದಲ್ಲಿ ಈ ಹೆಣ್ಣುಮಗಳು ನಡೆದು ಬರುವ ರೀತಿ ಖಂಡಿತ ನಿಮಗೆ ಮುಂದಿನ ಸುಳಿವನ್ನು ಬಿಟ್ಟುಕೊಡಲಾರದು!

ಹೆಣ್ಣುಮಕ್ಕಳಿಗೆ ಹೊರಿಸಿದ ಅಕಾರಣ ಭಾರಗಳನ್ನು ಇಳಿಸಿದರೆ ಅವರು ಲೀಲಾಜಾಲವಾಗಿ ತಮ್ಮಿಷ್ಟದ  ಕಲೆ, ಕೌಶಲಗಳಲ್ಲಿ ಹೇಗೆ ಹರಿಯುತ್ತಾರೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿ. ತಲೆಯ ಮೇಲೆ ಸೆರಗು ಹೊದ್ದು ಬರುವ ಈಕೆ ಇದ್ದಕ್ಕಿದ್ದಂತೆ ರಸ್ತೆಯಲ್ಲಿ ಬಂದು ಗೆರೆಗಳನ್ನು ಬರೆಯಲಾರಂಭಿಸುತ್ತಾರೆ. ರಂಗೋಲಿ ಹಾಕುತ್ತಾರೆಯೇ ಎಂದು ಮೊದಲಿಗೆ ಅನ್ನಿಸಿದರೂ ಅದೂ ಅಲ್ಲ. ನೋಡನೋಡುತ್ತಿದ್ದಂತೆ ರಸ್ತೆಯನ್ನು ಸೀಳಿ ಹೆಬ್ಬಾವಿನಂತೆ ಕಾಣುವ ಕಲ್ಲುಗೋಡೆ ಧುತ್ತೆಂದು ನಿಂತುಬಿಡುತ್ತದೆ.

ಇದನ್ನೂ ಓದಿ : Viral Video: ಎಚ್​ಡಿಎಫ್​ಸಿ ಆನ್​ಲೈನ್​ ಮೀಟಿಂಗ್​ನಲ್ಲಿ ಉದ್ಯೋಗಿ ನಿಂದನೆ; ಅಧಿಕಾರಿ ಅಮಾನತು

ಈ ವಿಡಿಯೋ ನೋಡಿದ ನೆಟ್ಟಿಗರು ಅಚ್ಚರಿಗೆ ಒಳಗಾಗಿದ್ದಾರೆ. ಈಕೆಯ ನೈಪುಣ್ಯತೆಯನ್ನು ಶ್ಲಾಘಿಸುತ್ತಿದ್ದಾರೆ. ನೋಡಲು ಸಾಮಾನ್ಯ ಗೃಹಿಣಿಯಂತೆ ಕಾಣುವ ಈಕೆಯೊಳಗೆ ಇಂಥ ಅದ್ಭುತ ಕಲಾವಿದೆ ಅಡಗಿದ್ದಾಳೆ ಎನ್ನುವುದು ತಿಳಿಯುವುದೇ ಇಲ್ಲ ಎಂದು ಅಚ್ಚರಿಗೆ ಒಳಗಾಗಿದ್ದಾರೆ. ಇವರ ಕಲಾಭವಿಷ್ಯಕ್ಕೆ ಶುಭವಾಗಲಿ ಎಂದು ಹಾರೈಸಿದ್ದಾರೆ.

ಇದನ್ನೂ ಓದಿ : Viral Video: ಬನ್ನೇರುಘಟ್ಟದಲ್ಲಿ ಚಿರತೆಮರಿಗಳಿಗೆ ಮರುಜೀವ ಕೊಡುತ್ತಿರುವ ಸಾವಿತ್ರಮ್ಮ

ಆದರೆ ಈಕೆ ಪಶ್ಚಿಮ ಬಂಗಾಳದ ಕಲಾ ಶಿಕ್ಷಕಿ. ತ್ರೀಡಿ ಆರ್ಟ್ (3D)​ ಅನ್ನು ಕರಗತ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಪ್​ಲೋಡ್ ಮಾಡಿ ಈಗಾಗಲೇ ಜನರ ಮನಸೂರೆಗೊಂಡಿರುವಾಕೆ. ಯೋಚನಾಶಕ್ತಿ ಮತ್ತು ಆಸಕ್ತಿ ಇದ್ದರೆ ಇದ್ದ ಅವಕಾಶದಲ್ಲಿಯೇ ಹೇಗೆ ಕಾಲು ಚಾಚಬೇಕು ಎನ್ನುವುದನ್ನು ಕರಗತ ಮಾಡಿಕೊಂಡಿರುವ ದಿಟ್ಟೆ ಇವರು.

ನೀವೇನಂತೀರಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ