AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪಶ್ಚಿಮ ಬಂಗಾಳದ ಕಲಾಶಿಕ್ಷಕಿಯ ಕೈಚಳವನ್ನೊಮ್ಮೆ ನೋಡಿ

3D Art : ಹೆಣ್ಣುಮಕ್ಕಳಿಗೆ ಹೊರಿಸಿದ ಅಕಾರಣ ಭಾರಗಳನ್ನು ಇಳಿಸಿದರೆ ಅವರು ಲೀಲಾಜಾಲವಾಗಿ ತಮ್ಮಿಷ್ಟದ  ಕಲೆ, ಕೌಶಲಗಳಲ್ಲಿ ಹೇಗೆ ಹರಿಯುತ್ತಾರೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿ.

Viral Video: ಪಶ್ಚಿಮ ಬಂಗಾಳದ ಕಲಾಶಿಕ್ಷಕಿಯ ಕೈಚಳವನ್ನೊಮ್ಮೆ ನೋಡಿ
ಪಶ್ಚಿಮ ಬಂಗಾಳದ ಕಲಾ ಶಿಕ್ಷಕಿಯ 3D ಆರ್ಟ್​ ಮ್ಯಾಜಿಕ್​!
TV9 Web
| Edited By: ಶ್ರೀದೇವಿ ಕಳಸದ|

Updated on: Jun 06, 2023 | 1:47 PM

Share

Street Art: ಬೀದಿ ಕಲೆ, ತ್ರೀಡಿ ಕಲೆ ಎಂದಾಗ ನಮಗೆ ಥಟ್ಟನೆ ನೆನಪಾಗುವುದು ಮೈಸೂರಿನ ಪ್ರತಿಭಾವಂತ ಕಲಾವಿದ ಬಾದಲ್​ ನಂಜುಂಡಸ್ವಾಮಿ.  ಮೈಸೂರು ಬೆಂಗಳೂರಿನ ಹಾಳಾದ ರಸ್ತೆಗಳಿಗೆ, ತೆರೆದ ರಸ್ತೆಗುಂಡಿಗಳಿಗೆ ಕಲಾತ್ಮಕ ಸ್ಪರ್ಶ ಕೊಟ್ಟು ಅಧಿಕಾರಿಗಳ ಗಮನ ಸೆಳೆದ ಆರ್ಟ್​ ಆ್ಯಕ್ಟಿವಿಸ್ಟ್​. ಈ ಕೆಳಗಿನ ವಿಡಿಯೋ ಕೂಡ ಬೀದಿಕಲೆಗೆ ಸಂಬಂಧಿಸಿದ್ದು. ಆದರೆ ವಿಡಿಯೋದ ಆರಂಭದಲ್ಲಿ ಈ ಹೆಣ್ಣುಮಗಳು ನಡೆದು ಬರುವ ರೀತಿ ಖಂಡಿತ ನಿಮಗೆ ಮುಂದಿನ ಸುಳಿವನ್ನು ಬಿಟ್ಟುಕೊಡಲಾರದು!

ಹೆಣ್ಣುಮಕ್ಕಳಿಗೆ ಹೊರಿಸಿದ ಅಕಾರಣ ಭಾರಗಳನ್ನು ಇಳಿಸಿದರೆ ಅವರು ಲೀಲಾಜಾಲವಾಗಿ ತಮ್ಮಿಷ್ಟದ  ಕಲೆ, ಕೌಶಲಗಳಲ್ಲಿ ಹೇಗೆ ಹರಿಯುತ್ತಾರೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿ. ತಲೆಯ ಮೇಲೆ ಸೆರಗು ಹೊದ್ದು ಬರುವ ಈಕೆ ಇದ್ದಕ್ಕಿದ್ದಂತೆ ರಸ್ತೆಯಲ್ಲಿ ಬಂದು ಗೆರೆಗಳನ್ನು ಬರೆಯಲಾರಂಭಿಸುತ್ತಾರೆ. ರಂಗೋಲಿ ಹಾಕುತ್ತಾರೆಯೇ ಎಂದು ಮೊದಲಿಗೆ ಅನ್ನಿಸಿದರೂ ಅದೂ ಅಲ್ಲ. ನೋಡನೋಡುತ್ತಿದ್ದಂತೆ ರಸ್ತೆಯನ್ನು ಸೀಳಿ ಹೆಬ್ಬಾವಿನಂತೆ ಕಾಣುವ ಕಲ್ಲುಗೋಡೆ ಧುತ್ತೆಂದು ನಿಂತುಬಿಡುತ್ತದೆ.

ಇದನ್ನೂ ಓದಿ : Viral Video: ಎಚ್​ಡಿಎಫ್​ಸಿ ಆನ್​ಲೈನ್​ ಮೀಟಿಂಗ್​ನಲ್ಲಿ ಉದ್ಯೋಗಿ ನಿಂದನೆ; ಅಧಿಕಾರಿ ಅಮಾನತು

ಈ ವಿಡಿಯೋ ನೋಡಿದ ನೆಟ್ಟಿಗರು ಅಚ್ಚರಿಗೆ ಒಳಗಾಗಿದ್ದಾರೆ. ಈಕೆಯ ನೈಪುಣ್ಯತೆಯನ್ನು ಶ್ಲಾಘಿಸುತ್ತಿದ್ದಾರೆ. ನೋಡಲು ಸಾಮಾನ್ಯ ಗೃಹಿಣಿಯಂತೆ ಕಾಣುವ ಈಕೆಯೊಳಗೆ ಇಂಥ ಅದ್ಭುತ ಕಲಾವಿದೆ ಅಡಗಿದ್ದಾಳೆ ಎನ್ನುವುದು ತಿಳಿಯುವುದೇ ಇಲ್ಲ ಎಂದು ಅಚ್ಚರಿಗೆ ಒಳಗಾಗಿದ್ದಾರೆ. ಇವರ ಕಲಾಭವಿಷ್ಯಕ್ಕೆ ಶುಭವಾಗಲಿ ಎಂದು ಹಾರೈಸಿದ್ದಾರೆ.

ಇದನ್ನೂ ಓದಿ : Viral Video: ಬನ್ನೇರುಘಟ್ಟದಲ್ಲಿ ಚಿರತೆಮರಿಗಳಿಗೆ ಮರುಜೀವ ಕೊಡುತ್ತಿರುವ ಸಾವಿತ್ರಮ್ಮ

ಆದರೆ ಈಕೆ ಪಶ್ಚಿಮ ಬಂಗಾಳದ ಕಲಾ ಶಿಕ್ಷಕಿ. ತ್ರೀಡಿ ಆರ್ಟ್ (3D)​ ಅನ್ನು ಕರಗತ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಪ್​ಲೋಡ್ ಮಾಡಿ ಈಗಾಗಲೇ ಜನರ ಮನಸೂರೆಗೊಂಡಿರುವಾಕೆ. ಯೋಚನಾಶಕ್ತಿ ಮತ್ತು ಆಸಕ್ತಿ ಇದ್ದರೆ ಇದ್ದ ಅವಕಾಶದಲ್ಲಿಯೇ ಹೇಗೆ ಕಾಲು ಚಾಚಬೇಕು ಎನ್ನುವುದನ್ನು ಕರಗತ ಮಾಡಿಕೊಂಡಿರುವ ದಿಟ್ಟೆ ಇವರು.

ನೀವೇನಂತೀರಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ