AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending : ನಿದ್ರಾಸ್ಪರ್ಧೆಯಲ್ಲಿ ರೂ. 6 ಲಕ್ಷ ಬಹುಮಾನ ಪಡೆದ ಪಶ್ಚಿಮ ಬಂಗಾಳದ ಈ ತರುಣಿ

Sleeping Competition : 100 ದಿನಗಳ ಕಾಲ ನಡೆದ ಈ ಸ್ಪರ್ಧೆಯಲ್ಲಿ, ಸ್ಪರ್ಧಾರ್ಥಿಗಳಿಗೆ ಹಾಸಿಗೆ ಮತ್ತು ಸ್ಲೀಪ್ ಟ್ರ್ಯಾಕರ್ ಕೊಟ್ಟು ಮಲಗುವ ನಿಮ್ಮ ಕೌಶಲವನ್ನು ಪ್ರದರ್ಶಿಸಬೇಕೆಂದು ಹೇಳಲಾಗಿತ್ತು.

Trending : ನಿದ್ರಾಸ್ಪರ್ಧೆಯಲ್ಲಿ ರೂ. 6 ಲಕ್ಷ ಬಹುಮಾನ ಪಡೆದ ಪಶ್ಚಿಮ ಬಂಗಾಳದ ಈ ತರುಣಿ
ವಿಜೇತೆ ತ್ರಿಪರ್ಣ ಚಕ್ರವರ್ತಿ
TV9 Web
| Updated By: ಶ್ರೀದೇವಿ ಕಳಸದ|

Updated on:Sep 08, 2022 | 11:00 AM

Share

Trending : ಹವ್ಯಾಸ ಎನ್ನುವುದು ಪ್ರತಿಯೊಬ್ಬರ ಜೀವನದಲ್ಲಿ ಬಹಳ ಮುಖ್ಯ. ಹವ್ಯಾಸಗಳೇ ನಮ್ಮ ವ್ಯಕ್ತಿತ್ವವನ್ನು ರೂಪಿಸುತ್ತವೆ. ಆದರೆ ಯಾವ ಹವ್ಯಾಸವನ್ನು ರೂಢಿಸಿಕೊಳ್ಳುತ್ತೇವೆ ಎನ್ನುವುದರ ಮೇಲೆ ನಮ್ಮ ಬದುಕು ನಿಲ್ಲುತ್ತದೆ. ಇಲ್ಲೊಬ್ಬಳು ವಿಚಿತ್ರವಾದ ಹವ್ಯಾಸವನ್ನು ರೂಢಿಸಿಕೊಂಡು ಅಪರೂಪದ ದಾಖಲೆ ನಿರ್ಮಿಸಿ ಜೊತೆಗೆ 6 ಲಕ್ಷ ರೂಪಾಯಿ ಬಹುಮಾನ ಪಡೆದಿದ್ದಾಳೆ. ಪಶ್ಚಿಮ ಬಂಗಾಳದ ಹೂಗ್ಲಿಯ ಶ್ರೀರಾಂಪುರದ ತ್ರಿಪರ್ಣ ಚಕ್ರವರ್ತಿ ಎಂಬ ತರುಣಿಯೇ ಬಹುಮಾನಿತೆ. 100 ದಿನಗಳ ಕಾಲ ಸತತ 9 ಗಂಟೆ ನಿದ್ದೆ ಮಾಡಿ ದಾಖಲೆ ನಿರ್ಮಿಸಿದ್ದಾಳೆ. ರಾಷ್ಟ್ರಮಟ್ಟದಲ್ಲಿ ಈ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಭಾಗವಹಿಸಲು 4.5 ಲಕ್ಷ ಜನರು ಅರ್ಜಿ ಸಲ್ಲಿಸಿದ್ದರು. ಈ ಪೈಕಿ 15 ಸ್ಪರ್ಧಿಗಳು ಆಯ್ಕೆಯಾಗಿದ್ದರು. ಕೊನೆಗೆ ನಾಲ್ಕು ಸ್ಪರ್ಧಿಗಳು ಅಂತಿಮ ಹಂತ ತಲುಪಿದರು.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಸ್ಪರ್ಧಿಗಳು ವೆಬ್​ಸೈಟ್​ ಮೂಲಕ ಈ ಸ್ಪರ್ಧೆಯ ಕುರಿತು ಮಾಹಿತಿ ತಿಳಿದುಕೊಂಡಿದ್ದರು. ಎಲ್ಲ ಸ್ಪರ್ಧಿಗಳಿಗೂ ಹಾಸಿಗೆ ಮತ್ತು ಸ್ಲೀಪ್ ಟ್ರ್ಯಾಕರ್ ಕೊಟ್ಟು ಮಲಗುವ ನಿಮ್ಮ ಕೌಶಲವನ್ನು ನೀವು ಪ್ರದರ್ಶಿಸಬೇಕು ಎಂದು ಹೇಳಲಾಗಿತ್ತು. ವಿಜೇತೆ ತ್ರಿಪರ್ಣ ಬಹುಮಾನದ ಹಣದಲ್ಲಿ ತನಗೆ ಅಗತ್ಯವಿರುವ ವಸ್ತುಗಳನ್ನು ಖರೀದಿಸಬೇಕೆಂಬ ಆಲೋಚನೆ ಇದೆ ಎಂದು ಹೇಳಿಕೊಂಡಿದ್ದಾಳೆ. ಅಮೆರಿಕ ಮೂಲದ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಈಕೆ ಸದ್ಯ ವರ್ಕ್​ ಫ್ರಾಂ ಹೋಮ್​ನಲ್ಲಿದ್ದಾಳೆ. ಈ ಕಾರಣದಿಂದಾಗಿ, ಅವಳು ರಾತ್ರಿಯೂ ಎಚ್ಚರವಾಗಿರಬೇರಬೇಕಾದ ಅನಿವಾರ್ಯತೆ ಇತ್ತು. ಅಂತೂ ಈ ಸ್ಪರ್ಧೆಯ ಮೂಲಕ ಎಲ್ಲ ನಿದ್ದೆಯನ್ನು ವಾಪಾಸು ಪಡೆದುಕೊಂಡಿದ್ದಾಳೆ ಎನ್ನಬಹುದೆ?

ದಿ ಲ್ಯಾನ್ಸೆಟ್ ಚೈಲ್ಡ್ ಅಂಡ್ ಅಡೋಲೆಸೆಂಟ್ ಹೆಲ್ತ್ ಜರ್ನಲ್‌ನಲ್ಲಿ ಪ್ರಕಟವಾದ ಸಂಶೋಧನಾ ವರದಿಯ ಪ್ರಕಾರ, ಮಕ್ಕಳು ಒಂಬತ್ತು ಗಂಟೆಗಿಂತ ಕಡಿಮೆ ಅವಧಿ ನಿದ್ರಿಸಿದರೆ ಮೆದುಳಿನ ಕಾರ್ಯವಿಧಾನದಲ್ಲಿ ಕೆಲ ಬದಲಾವಣೆಗಳಾಗಿ ಸ್ಮರಣಶಕ್ತಿ, ಬೌದ್ಧಿಕ ಶಕ್ತಿ, ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಮಕ್ಕಳು ಪ್ರತೀ ರಾತ್ರಿ 9ರಿಂದ 12 ಗಂಟೆಗಳ ಕಡ್ಡಾಯವಾಗಿ ಮಲಗಬೇಕು.

ಇನ್ನು ವಯಸ್ಕರ ನಿದ್ರಾಹೀನತೆಗೆ ಮಾನಸಿಕ ಸಮಸ್ಯೆಗಳೂ ಕಾರಣ. ಖಿನ್ನತೆ, ಆತಂಕ ಇರುವವರಲ್ಲಿ ನಿದ್ರೆಯಲ್ಲಿ ಏರುಪೇರು ಉಂಟಾಗುತ್ತಿರುತ್ತದೆ. ಆಗ ಸ್ಮರಣಶಕ್ತಿ, ನಿರ್ಧಾರ ತೆಗೆದುಕೊಳ್ಳುವುದು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ವಿಷಯವಾಗಿ ಅವರಿಗೆ ಗೊಂದಲ ಉಂಟಾಗುತ್ತಿರುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಒಟ್ಟಿನಲ್ಲಿ ಸರಿಯಾಗಿ ನಿದ್ರೆ ಮಾಡಿ ಆರೋಗ್ಯ ಚೆನ್ನಾಗಿಟ್ಟುಕೊಳ್ಳಿ. ಇಲ್ಲವಾದರೆ ಹೀಗೆ ಸ್ಲೀಪಿಂಗ್​ ಇಂಟರ್ನ್​ಶಿಪ್​ಗಳಿಗೆ ಹೋಗಿ ನಿದ್ರೆ ಮಾಡುವುದನ್ನು ಕಲಿಯಬೇಕಾಗುತ್ತದೆ. ಬಹುಮಾನ ಸಿಗುವುದು ಮಾತ್ರ ಒಬ್ಬರಿಗೆ!

ಮತ್ತಷ್ಟು ಟ್ರೆಂಡಿಂಗ್​ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

Published On - 10:47 am, Thu, 8 September 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?