AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನಿಮ್ಮ ಕಾಮ ತೃಷೆ ತೀರಿಸಲು ನಾವಿದ್ದೇವೆ, ದಯವಿಟ್ಟು ಅಮಾಯಕ ಹೆಣ್ಮಕ್ಕಳ ಬಾಳು ಹಾಳು ಮಾಡಬೇಡಿ; ಲೈಂಗಿಕ ಕಾರ್ಯಕರ್ತೆ

ವೇಶ್ಯೆಯರು ಅಥವಾ ಲೈಂಗಿಕ ಕಾರ್ಯಕರ್ತೆಯರನ್ನು ಜನರು ಕೀಳಾಗಿ ಕಾಣುತ್ತಾರೆ. ಮತ್ತು ದುಡ್ಡಿಗಾಗಿ ದೇಹ ಮಾರಿಕೊಂಡವಳು ಎಂದು ತುಚ್ಯವಾಗಿ ಮಾತನಾಡುತ್ತಾರೆ. ಆದ್ರೆ ಇದೀಗ ಕೊಲ್ಕತ್ತಾ ರೇಪ್ ಕೇಸ್ ಗೆ ಸಂಬಂಧಪಟ್ಟಂತೆ ಮಾತನಾಡಿದ ಲೈಂಗಿಕ ಕಾರ್ಯಕರ್ತೆಯೊಬ್ಬರ ಮಾತು ಎಲ್ಲರ ಮನ ಗೆದ್ದಿದೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ನಿಮ್ಮ ಕಾಮ ತೃಷೆ ತೀರಿಸಲು ನಮ್ಮ ಬಳಿ ಬನ್ನಿ ಆದ್ರೆ ದಯವಿಟ್ಟು ಅಮಾಯಕ ಹೆಣ್ಣುಮಕ್ಕಳ ಜೀವ, ಜೀವನ ಹಾಳು ಮಾಡಬೇಡಿ ಎಂಬ ಸಂದೇಶವನ್ನು ಕೊಡುವ ಮೂಲಕ ಅವರು ಕೋಟ್ಯಾಂತರ ಜನರ ಹೃದಯ ಗೆದ್ದಿದ್ದಾರೆ.

Video: ನಿಮ್ಮ ಕಾಮ ತೃಷೆ ತೀರಿಸಲು ನಾವಿದ್ದೇವೆ, ದಯವಿಟ್ಟು ಅಮಾಯಕ ಹೆಣ್ಮಕ್ಕಳ ಬಾಳು ಹಾಳು ಮಾಡಬೇಡಿ; ಲೈಂಗಿಕ ಕಾರ್ಯಕರ್ತೆ
ವೈರಲ್​​​ ವಿಡಿಯೋ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Aug 23, 2024 | 3:32 PM

Share

ಕೋಲ್ಕತ್ತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಮಹಿಳಾ ಟ್ರೈನಿ ವೈದ್ಯೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿ ಭೀಕರವಾಗಿ ಕೊಲೆ ಮಾಡಿದ ಸುದ್ದಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ಆರೋಪಿಗೆ ಸರಿಯಾದ ಶಿಕ್ಷೆನೀಡುವಂತೆ ಹಾಗೂ ಈ ಪ್ರಕರಣದ ಕುರಿತು ಬೇಜವಾಬ್ದಾರಿ ತೋರಿದ ಇಲ್ಲಿನ ಸರ್ಕಾರದ ಬಗ್ಗೆ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಈ ನಡುವೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ಕಾರ್ಯಕರ್ತೆಯೊಬ್ಬರು ಮಾತನಾಡಿದ್ದು, ನಿಮ್ಮ ಕಾಮ ತೃಷೆ ತೀರಿಸಲು ನಮ್ಮ ಬಳಿ ಬನ್ನಿ ಆದ್ರೆ ದಯವಿಟ್ಟು ಅಮಾಯಕ ಹೆಣ್ಣುಮಕ್ಕಳ ಜೀವ, ಜೀವನ ಹಾಳು ಮಾಡಬೇಡಿ ಎಂದು ಕಾಮುಕ ವ್ಯಕ್ತಿಗಳಿಗೆ ಉತ್ತಮ ಸಂದೇಶವನ್ನು ಕೊಟ್ಟಿದ್ದಾರೆ. ಇವರ ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಇವರ ಈ ಮಾತುಗಳು ಕೋಟ್ಯಾಂತರ ಜನರ ಹೃದಯ ಗೆದ್ದಿದೆ.

ಈ ಕುರಿತ ಪೋಸ್ಟ್ ಒಂದನ್ನು Lamist ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ರೆಸ್ಪೆಕ್ಟ್” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ವೈರಲ್​​​​ ವಿಡಿಯೋ ಇಲ್ಲಿದೆ ನೋಡಿ:

ವೈರಲ್ ವಿಡಿಯೋದಲ್ಲಿ ಲೈಂಗಿಕ ಕಾರ್ಯಕರ್ತೆಯೊಬ್ಬರು ನಿಮಗೆ ಹೆಣ್ಣಿನ ಮೇಲೆ ಅಷ್ಟೊಂದು ಕಾಮವಿದ್ದರೆ ನಮ್ಮ ಬಳಿಗೆ ಬನ್ನಿ, ದಯವಿಟ್ಟು ಅಮಾಯಕ ಹೆಣ್ಣಿನ ಬದುಕನ್ನು ಹಾಳು ಮಾಡಬೇಡಿ ಎಂಬ ಉತ್ತಮ ಸಂದೇಶ ಕೊಡುವ ದೃಶ್ಯವನ್ನು ಕಾಣಬಹುದು. ಕೊಲ್ಕತ್ತಾ ರೇಪ್ ಕೇಸ್ ಬಗ್ಗೆ ರಿಪೋರ್ಟರ್ ಒಬ್ಬರ ಬಳಿ ಮಾತನಾಡುವಾಗ ಲೈಂಗಿಕ ಕಾರ್ಯಕರ್ತೆಯೊಬ್ಬರು ನಿಮ್ಮ ಕಾಮ ತೃಷೆಯನ್ನು ನಮ್ಮಂಥವರ ಬಳಿಗೆ ಬನ್ನಿ ಆದ್ರೆ ದಯವಿಟ್ಟು ಅಮಾಯಕ ಹೆಣ್ಣುಮಕ್ಕಳನ್ನು ಅತ್ಯಾಚಾರದ ಮೂಲಕ ಅವರ ಜೀವ, ಜೀವನವನ್ನು ಹಾಳು ಮಾಡಬೇಡಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಡೇಟಿಂಗ್ ನೈಟ್ ಕ್ಲಬ್ ಜತೆ ಸೇರಿ ಅಮಾಯಕ ಪುರುಷರನ್ನು ವಂಚಿಸುತ್ತಾರೆ ಈ ಯುವತಿಯರು

ಆಗಸ್ಟ್ 21 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಒಂದುವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ಹಾಗಾದ್ರೆ ವೇಶ್ಯಾವಾಟಿಕೆ ಮಾತ್ರ ಅತ್ಯಾಚಾರ ತಡೆಗಟ್ಟಲಿರುವ ಮಾರ್ಗವೇ?’ ಎಂಬ ಪ್ರಶ್ನೆ ಕೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ‘ಇಂತಹ ಹೇಳಿಕೆಯನ್ನು ಸಾರ್ವಜನಿಕವಾಗಿ ನೀಡಲು ಸಾಕಷ್ಟು ಧೈರ್ಯ ಬೇಕು. ಈ ಮಹಿಳೆಗೆ ನನ್ನದೊಂದು ಸೆಲ್ಯೂಟ್’ ಎಂದು ಹೇಳಿದ್ದಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?