AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳದ ರೈಲ್ವೆ ಕೋಚ್​ಗಳಲ್ಲಿ ಅರಳಿದ ಭಿತ್ತಿಚಿತ್ರ; ಅಸಂತುಷ್ಟಗೊಂಡ ನೆಟ್ಟಿಗರು

Indian Railways : ಹೀಗೆ ಕೋಚ್​ಗಳನ್ನು ಬಣ್ಣಬೆಳಕಿನಿಂದ ಅಲಂಕರಿಸಿ ಗಮನ ಸೆಳೆಯುವುದಕ್ಕಿಂತ ಇಲಾಖೆಯ ಸೇವೆಗಳಲ್ಲಿರುವ ಕುಂದು ಕೊರತೆಗಳನ್ನು ಸರಿಪಡಿಸಿ ಎಂದು ಪುರಾವೆ ಸಮೇತ ರೀಟ್ವೀಟ್ ಮಾಡಿದ್ದಾರೆ ನೆಟ್ಟಿಗರು.

ಪಶ್ಚಿಮ ಬಂಗಾಳದ ರೈಲ್ವೆ ಕೋಚ್​ಗಳಲ್ಲಿ ಅರಳಿದ ಭಿತ್ತಿಚಿತ್ರ; ಅಸಂತುಷ್ಟಗೊಂಡ ನೆಟ್ಟಿಗರು
ಭಿತ್ತಿಚಿತ್ರಗಳಿಂದ ಅಲಂಕೃತಗೊಂಡ ಪಶ್ಚಿಮ ಬಂಗಾಳದ ರೈಲು
TV9 Web
| Edited By: |

Updated on:Dec 29, 2022 | 10:53 AM

Share

Viral Video : ಪ್ರಯಾಣಿಕರ ಯಾನ ಪ್ರಶಾಂತವಾಗಿ ಸಾಗಲಿ, ಕಲಾತ್ಮಕ ಪರಿಸರದಿಂದ ಸ್ಫೂರ್ತಿಗೊಳ್ಳಲಿ ಎಂಬ ಉದ್ದೇಶದಿಂದ ಕೇಂದ್ರ ರೈಲ್ವೆ ಇಲಾಖೆಯು ಪಶ್ಚಿಮ ಬಂಗಾಳದ ಲೋಕಲ್​ ರೈಲಿನ ಕೋಚ್​ಗಳನ್ನು ಹೀಗೆ ಭಿತ್ತಿಚಿತ್ರಗಳ ಮೂಲಕ ಅಲಂಕರಿಸಿದೆ. ಈ ವಿಡಿಯೋ ಇದೀಗ ವೈರಲ್ ಆಗಿದೆ ನಿಜ. ಆದರೆ ನೆಟ್ಟಿಗರು ಮಾತ್ರ ಮಿಶ್ರ ಅಭಿಪ್ರಾಯಗಳನ್ನು ಹೊಮ್ಮಿಸುತ್ತಿದ್ದಾರೆ. ಯಾಕಿರಬಹುದು? ಓದಿ.

ಸೀಲ್ದಾ- ಬಂಗಾವ್​ಗೆ ಚಲಿಸುವ ರೈಲ್ವೇಯ ಕೋಚ್​ಗಳೊಳಗೆ ಹಳ್ಳಿಯ ಜನಜೀವವನ್ನು ಬಿಂಬಿಸುವ ಭಿತ್ತಿಚಿತ್ರಗಳನ್ನು ರಚಿಸಿ ನವೀಕರಿಸಲಾಗಿದೆ. ಈ ಮೂಲಕ ಸ್ಥಳೀಯ ರೈಲುಗಳನ್ನು ಆಕರ್ಷಕವಾಗಿ ಅಲಂಕರಿಸಿ ಪ್ರಯಾಣಿಕರ ಗಮನ ಸೆಳೆಯುವುದು ಇಲಾಖೆಯ ಉದ್ದೇಶವಾಗಿದೆ. ಬಾಗಿಲು ಮತ್ತು ಕಿಟಕಿಗಳಿಗೆ ಎಲ್​ಇಡಿ ಲೈಟ್​ಗಳನ್ನು ಅಳವಡಿಸಲಾಗಿದ್ದು ರೈಲು ದೀಪಾಲಂಕಾರದಿಂದ ಕಂಗೊಳಿಸುತ್ತಿದೆ.

ಇದನ್ನೂ ಓದಿ : 9 ಗಂಟೆ ತಡವಾಗಿ ಬಂದ ರೈಲು; ಪ್ರಯಾಣಿಕರು ಸಂಭ್ರಮಿಸಿದ ವಿಡಿಯೋ ವೈರಲ್

ಈ ವಿಡಿಯೋ ಅನ್ನು ಈತನಕ ಸುಮಾರು 75,000ಕ್ಕೂ ಹೆಚ್ಚು ಜನರು ನೋಡಿದ್ದಾರೆ. 1,000ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ರೈಲ್ವೆ ಇಲಾಖೆಯು ಹೀಗೆ ಬಣ್ಣ, ಲೈಟಿನಿಂದ ಅಲಂಕರಿಸುವುದಕ್ಕಿಂತ ನಿತ್ಯಪ್ರಯಾಣಿಕರು ಸರಿಯಾದ ಸಮಯಕ್ಕೆ ತಲುಪುವಂತೆ ಕಾರ್ಯ ನಿರ್ವಹಿಸಬೇಕು. ಇಲಾಖೆಯ ಇತರೇ ಸೇವೆಗಳು ಸೂಕ್ತ ರೀತಿಯಲ್ಲಿ ಅರ್ಹರಿಗೆ ತಲುಪಬೇಕು. ಈ ವಿಷಯವಾಗಿ ಇಲಾಖೆಯು ಗಮನ ಕೊಡುವುದು ಅತ್ಯವಶ್ಯವಾಗಿದೆ ಎಂದಿದ್ದಾರೆ ಅನೇಕರು.

ಆಹಾರ ಪೂರೈಕೆ, ವಿಳಂಬ ಪ್ರಯಾಣ, ಸ್ವಚ್ಛತೆ ಇತ್ಯಾದಿ ವಿಷಯವಾಗಿ ಇಲಾಖೆಯ ಸೇವೆಯಲ್ಲಿ ಕಂಡುಬಂದಿರುವ ಕುಂದುಕೊರತೆಗಳನ್ನು ದಾಖಲೆ ಸಮೇತ ರೀಟ್ವೀಟ್ ಮಾಡಿ ಇಲಾಖೆಯ ಗಮನ ಸೆಳೆದಿದ್ದಾರೆ ಹಲವರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:50 am, Thu, 29 December 22

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ