AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾರು ಚಾಲಕನ ಸಣ್ಣ ತಪ್ಪು, ಸ್ಕೂಟಿ ಚಾಲಕನ ಪ್ರಾಣಕ್ಕೆ ಕುತ್ತು ತಂತು; ವಿಡಿಯೋ ವೈರಲ್​​

ರಸ್ತೆ ಅಪಘಾತದ ಹೃದಯ ವಿದ್ರಾವಕ ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋ ಒಂದು ಕ್ಷಣಕ್ಕೆ ನಿಮಗೆ ನಡುಕ ಹುಟ್ಟಿಸುವುದಂತೂ ಖಂಡಿತಾ. ವೈರಲ್​ ವಿಡಿಯೋ ಇಲ್ಲಿದೆ ನೋಡಿ.

Viral Video: ಕಾರು ಚಾಲಕನ ಸಣ್ಣ ತಪ್ಪು, ಸ್ಕೂಟಿ ಚಾಲಕನ ಪ್ರಾಣಕ್ಕೆ ಕುತ್ತು ತಂತು; ವಿಡಿಯೋ ವೈರಲ್​​
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on: Nov 08, 2023 | 11:46 AM

Share

ರಸ್ತೆಗಳಲ್ಲಿ ವಾಹನ ಚಲಾಯಿಸುವಾಗ ಎಷ್ಟು ಜಾಗರೂಕತೆಯಿಂದ ಇದ್ದರೂ ಸಾಲದು. ಕೆಲವೊಮ್ಮೆ ನೀವು ಮಾಡುವ ಸಣ್ಣ ತಪ್ಪು ಇಲ್ಲೊಬ್ಬರ ಜೀವಕ್ಕೆ ಕುತ್ತು ತರಬಹುದು. ಅಂತದ್ದೇ ವಿಡಿಯೋ ಒಂದು ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಎಲ್ಲೆಂದರಲ್ಲಿ ಕಾರು ನಿಲ್ಲಿಸಿ, ಕೆಲವೊಮ್ಮೆ ರಸ್ತೆಬದಿಯಲ್ಲಿ ನಿಲ್ಲಿಸಿ ಹಿಂದಿನಿಂದ ಬರುವ ವಾಹನಗಳತ್ತ ಕಣ್ಣು ಹಾಯಿಸದೆ, ಕಾರು ಬಾಗಿಲು ತೆರೆದು ಕೆಳಗಿಳಿಯಲು ಯತ್ನಿಸುವ ಕೆಲವರನ್ನು ನೀವು ಗಮನಿಸಿರಬಹುದು. ಇದು ಎಷ್ಟು ಅಪಾಯಕಾರಿ ಎಂಬುದನ್ನು ಈ ವೈರಲ್ ವೀಡಿಯೊದಲ್ಲಿ ಕಾಣಬಹುದು.

ವಿಡಿಯೋದಲ್ಲಿ ರಸ್ತೆಬದಿಯಲ್ಲಿ ಕಾರು ನಿಂತಿರುವುದನ್ನು ಕಾಣಬಹುದು. ಈ ಸಮಯದಲ್ಲಿ, ಒಬ್ಬ ಸ್ಕೂಟಿಯಲ್ಲಿ ಹಿಂದಿನಿಂದ ಬರುತ್ತಾನೆ. ಆದರೆ ಕಾರಿನಲ್ಲಿ ಕುಳಿತವನು ಯಾರು ಬರುತ್ತಿದ್ದಾರೆಂದು ಹಿಂದೆ ನೋಡದೆ ಕಾರು ಡೋರ್​​​ ತೆಗೆದು ಹೊರಗೆ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕೂಡಲೇ ಹಿಂದಿನಿಂದ ಬಂದ ಸ್ಕೂಟಿ ಚಾಲಕ ಕಾರಿನ ಡೋರ್​​ ತಾಗಿ ರಸ್ತೆಗೆ ಬೀಳುತ್ತಾನೆ. ಆಗಲೇ ಮುಂದಿನಿಂದ ವೇಗವಾಗಿ ಬಂದ ವಾಹನ ಸ್ಕೂಟಿ ಚಾಲಕ ಮೈ ಮೇಲೆ ಹಾದು ಹೋಗುವುದನ್ನು ವಿಡಿಯೋದಲ್ಲಿ ಕಾಣಬಹುದು.

ಎದೆ ನಡುಕ ಹುಟ್ಟಿಸುವ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ  ಓದಿ: ಮದುವೆಯಾದ 6 ತಿಂಗಳಿಗೆ ಪತಿಗೆ ವಿಚ್ಛೇದನ ನೀಡಿದ ಪತ್ನಿ; ಕಾರಣ ತಿಳಿದರೆ ನೀವು ಶಾಕ್​​ ಆಗುದಂತೂ ಖಂಡಿತಾ

ಟ್ವಿಟರ್‌ನಲ್ಲಿ @1000waystod1e ಎಂಬ ಖಾತೆಯಲ್ಲಿ ಈ ವಿಡಿಯೋ ನಿನ್ನೆ(ನ.07) ಹಂಚಿಕೊಂಡಿದ್ದು, ಇದೀಗಾಗಲೇ 7.6 ಮಿಲಿಯನ್ ಅಂದರೆ 76 ಲಕ್ಷ ಜನರು ವೀಕ್ಷಿಸಿದ್ದಾರೆ. ಇದಲ್ಲದೇ 10 ಸಾವಿರಕ್ಕೂ ಹೆಚ್ಚು ಮಂದಿ ಈ ವಿಡಿಯೋವನ್ನು ಲೈಕ್ ಮಾಡಿದ್ದಾರೆ.ಅದೇ ಸಮಯದಲ್ಲಿ, ವೀಡಿಯೊವನ್ನು ನೋಡಿದ ನಂತರ, ಹಲವು ಜನರು ವಿಭಿನ್ನ ರೀತಿಯಲ್ಲಿ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ‘ಸ್ಕೂಟರ್ ಓಡಿಸುತ್ತಿದ್ದವರು ಬದುಕಿದ್ದಾರಾ?’ ಎಂದು ಕೆಲವರು ಪ್ರಶ್ನೆ ಮಾಡಿದರೆ, ಇನ್ನೂ ಕೆಲವರು ‘ಈ ವಿಡಿಯೋ ನಕಲಿ’ ಎಂದು ಕಾಮೆಂಟ್​ ಮಾಡಿದ್ದಾರೆ. ಆದರೆ ಈ ವಿಡಿಯೋದಲ್ಲಿ ತೋರಿಸಿರುವ ಅಪಘಾತ ಅಸಲಿಯೋ, ನಕಲಿಯೋ ಎಂಬುದು ತಿಳಿದಿಲ್ಲ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ