AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾರು ಚಾಲಕನ ಸಣ್ಣ ತಪ್ಪು, ಸ್ಕೂಟಿ ಚಾಲಕನ ಪ್ರಾಣಕ್ಕೆ ಕುತ್ತು ತಂತು; ವಿಡಿಯೋ ವೈರಲ್​​

ರಸ್ತೆ ಅಪಘಾತದ ಹೃದಯ ವಿದ್ರಾವಕ ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋ ಒಂದು ಕ್ಷಣಕ್ಕೆ ನಿಮಗೆ ನಡುಕ ಹುಟ್ಟಿಸುವುದಂತೂ ಖಂಡಿತಾ. ವೈರಲ್​ ವಿಡಿಯೋ ಇಲ್ಲಿದೆ ನೋಡಿ.

Viral Video: ಕಾರು ಚಾಲಕನ ಸಣ್ಣ ತಪ್ಪು, ಸ್ಕೂಟಿ ಚಾಲಕನ ಪ್ರಾಣಕ್ಕೆ ಕುತ್ತು ತಂತು; ವಿಡಿಯೋ ವೈರಲ್​​
ಸಾಂದರ್ಭಿಕ ಚಿತ್ರ
Follow us
ಅಕ್ಷತಾ ವರ್ಕಾಡಿ
|

Updated on: Nov 08, 2023 | 11:46 AM

ರಸ್ತೆಗಳಲ್ಲಿ ವಾಹನ ಚಲಾಯಿಸುವಾಗ ಎಷ್ಟು ಜಾಗರೂಕತೆಯಿಂದ ಇದ್ದರೂ ಸಾಲದು. ಕೆಲವೊಮ್ಮೆ ನೀವು ಮಾಡುವ ಸಣ್ಣ ತಪ್ಪು ಇಲ್ಲೊಬ್ಬರ ಜೀವಕ್ಕೆ ಕುತ್ತು ತರಬಹುದು. ಅಂತದ್ದೇ ವಿಡಿಯೋ ಒಂದು ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಎಲ್ಲೆಂದರಲ್ಲಿ ಕಾರು ನಿಲ್ಲಿಸಿ, ಕೆಲವೊಮ್ಮೆ ರಸ್ತೆಬದಿಯಲ್ಲಿ ನಿಲ್ಲಿಸಿ ಹಿಂದಿನಿಂದ ಬರುವ ವಾಹನಗಳತ್ತ ಕಣ್ಣು ಹಾಯಿಸದೆ, ಕಾರು ಬಾಗಿಲು ತೆರೆದು ಕೆಳಗಿಳಿಯಲು ಯತ್ನಿಸುವ ಕೆಲವರನ್ನು ನೀವು ಗಮನಿಸಿರಬಹುದು. ಇದು ಎಷ್ಟು ಅಪಾಯಕಾರಿ ಎಂಬುದನ್ನು ಈ ವೈರಲ್ ವೀಡಿಯೊದಲ್ಲಿ ಕಾಣಬಹುದು.

ವಿಡಿಯೋದಲ್ಲಿ ರಸ್ತೆಬದಿಯಲ್ಲಿ ಕಾರು ನಿಂತಿರುವುದನ್ನು ಕಾಣಬಹುದು. ಈ ಸಮಯದಲ್ಲಿ, ಒಬ್ಬ ಸ್ಕೂಟಿಯಲ್ಲಿ ಹಿಂದಿನಿಂದ ಬರುತ್ತಾನೆ. ಆದರೆ ಕಾರಿನಲ್ಲಿ ಕುಳಿತವನು ಯಾರು ಬರುತ್ತಿದ್ದಾರೆಂದು ಹಿಂದೆ ನೋಡದೆ ಕಾರು ಡೋರ್​​​ ತೆಗೆದು ಹೊರಗೆ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕೂಡಲೇ ಹಿಂದಿನಿಂದ ಬಂದ ಸ್ಕೂಟಿ ಚಾಲಕ ಕಾರಿನ ಡೋರ್​​ ತಾಗಿ ರಸ್ತೆಗೆ ಬೀಳುತ್ತಾನೆ. ಆಗಲೇ ಮುಂದಿನಿಂದ ವೇಗವಾಗಿ ಬಂದ ವಾಹನ ಸ್ಕೂಟಿ ಚಾಲಕ ಮೈ ಮೇಲೆ ಹಾದು ಹೋಗುವುದನ್ನು ವಿಡಿಯೋದಲ್ಲಿ ಕಾಣಬಹುದು.

ಎದೆ ನಡುಕ ಹುಟ್ಟಿಸುವ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ  ಓದಿ: ಮದುವೆಯಾದ 6 ತಿಂಗಳಿಗೆ ಪತಿಗೆ ವಿಚ್ಛೇದನ ನೀಡಿದ ಪತ್ನಿ; ಕಾರಣ ತಿಳಿದರೆ ನೀವು ಶಾಕ್​​ ಆಗುದಂತೂ ಖಂಡಿತಾ

ಟ್ವಿಟರ್‌ನಲ್ಲಿ @1000waystod1e ಎಂಬ ಖಾತೆಯಲ್ಲಿ ಈ ವಿಡಿಯೋ ನಿನ್ನೆ(ನ.07) ಹಂಚಿಕೊಂಡಿದ್ದು, ಇದೀಗಾಗಲೇ 7.6 ಮಿಲಿಯನ್ ಅಂದರೆ 76 ಲಕ್ಷ ಜನರು ವೀಕ್ಷಿಸಿದ್ದಾರೆ. ಇದಲ್ಲದೇ 10 ಸಾವಿರಕ್ಕೂ ಹೆಚ್ಚು ಮಂದಿ ಈ ವಿಡಿಯೋವನ್ನು ಲೈಕ್ ಮಾಡಿದ್ದಾರೆ.ಅದೇ ಸಮಯದಲ್ಲಿ, ವೀಡಿಯೊವನ್ನು ನೋಡಿದ ನಂತರ, ಹಲವು ಜನರು ವಿಭಿನ್ನ ರೀತಿಯಲ್ಲಿ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ‘ಸ್ಕೂಟರ್ ಓಡಿಸುತ್ತಿದ್ದವರು ಬದುಕಿದ್ದಾರಾ?’ ಎಂದು ಕೆಲವರು ಪ್ರಶ್ನೆ ಮಾಡಿದರೆ, ಇನ್ನೂ ಕೆಲವರು ‘ಈ ವಿಡಿಯೋ ನಕಲಿ’ ಎಂದು ಕಾಮೆಂಟ್​ ಮಾಡಿದ್ದಾರೆ. ಆದರೆ ಈ ವಿಡಿಯೋದಲ್ಲಿ ತೋರಿಸಿರುವ ಅಪಘಾತ ಅಸಲಿಯೋ, ನಕಲಿಯೋ ಎಂಬುದು ತಿಳಿದಿಲ್ಲ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ