AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾರು ಚಾಲಕನ ಸಣ್ಣ ತಪ್ಪು, ಸ್ಕೂಟಿ ಚಾಲಕನ ಪ್ರಾಣಕ್ಕೆ ಕುತ್ತು ತಂತು; ವಿಡಿಯೋ ವೈರಲ್​​

ರಸ್ತೆ ಅಪಘಾತದ ಹೃದಯ ವಿದ್ರಾವಕ ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋ ಒಂದು ಕ್ಷಣಕ್ಕೆ ನಿಮಗೆ ನಡುಕ ಹುಟ್ಟಿಸುವುದಂತೂ ಖಂಡಿತಾ. ವೈರಲ್​ ವಿಡಿಯೋ ಇಲ್ಲಿದೆ ನೋಡಿ.

Viral Video: ಕಾರು ಚಾಲಕನ ಸಣ್ಣ ತಪ್ಪು, ಸ್ಕೂಟಿ ಚಾಲಕನ ಪ್ರಾಣಕ್ಕೆ ಕುತ್ತು ತಂತು; ವಿಡಿಯೋ ವೈರಲ್​​
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on: Nov 08, 2023 | 11:46 AM

Share

ರಸ್ತೆಗಳಲ್ಲಿ ವಾಹನ ಚಲಾಯಿಸುವಾಗ ಎಷ್ಟು ಜಾಗರೂಕತೆಯಿಂದ ಇದ್ದರೂ ಸಾಲದು. ಕೆಲವೊಮ್ಮೆ ನೀವು ಮಾಡುವ ಸಣ್ಣ ತಪ್ಪು ಇಲ್ಲೊಬ್ಬರ ಜೀವಕ್ಕೆ ಕುತ್ತು ತರಬಹುದು. ಅಂತದ್ದೇ ವಿಡಿಯೋ ಒಂದು ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಎಲ್ಲೆಂದರಲ್ಲಿ ಕಾರು ನಿಲ್ಲಿಸಿ, ಕೆಲವೊಮ್ಮೆ ರಸ್ತೆಬದಿಯಲ್ಲಿ ನಿಲ್ಲಿಸಿ ಹಿಂದಿನಿಂದ ಬರುವ ವಾಹನಗಳತ್ತ ಕಣ್ಣು ಹಾಯಿಸದೆ, ಕಾರು ಬಾಗಿಲು ತೆರೆದು ಕೆಳಗಿಳಿಯಲು ಯತ್ನಿಸುವ ಕೆಲವರನ್ನು ನೀವು ಗಮನಿಸಿರಬಹುದು. ಇದು ಎಷ್ಟು ಅಪಾಯಕಾರಿ ಎಂಬುದನ್ನು ಈ ವೈರಲ್ ವೀಡಿಯೊದಲ್ಲಿ ಕಾಣಬಹುದು.

ವಿಡಿಯೋದಲ್ಲಿ ರಸ್ತೆಬದಿಯಲ್ಲಿ ಕಾರು ನಿಂತಿರುವುದನ್ನು ಕಾಣಬಹುದು. ಈ ಸಮಯದಲ್ಲಿ, ಒಬ್ಬ ಸ್ಕೂಟಿಯಲ್ಲಿ ಹಿಂದಿನಿಂದ ಬರುತ್ತಾನೆ. ಆದರೆ ಕಾರಿನಲ್ಲಿ ಕುಳಿತವನು ಯಾರು ಬರುತ್ತಿದ್ದಾರೆಂದು ಹಿಂದೆ ನೋಡದೆ ಕಾರು ಡೋರ್​​​ ತೆಗೆದು ಹೊರಗೆ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕೂಡಲೇ ಹಿಂದಿನಿಂದ ಬಂದ ಸ್ಕೂಟಿ ಚಾಲಕ ಕಾರಿನ ಡೋರ್​​ ತಾಗಿ ರಸ್ತೆಗೆ ಬೀಳುತ್ತಾನೆ. ಆಗಲೇ ಮುಂದಿನಿಂದ ವೇಗವಾಗಿ ಬಂದ ವಾಹನ ಸ್ಕೂಟಿ ಚಾಲಕ ಮೈ ಮೇಲೆ ಹಾದು ಹೋಗುವುದನ್ನು ವಿಡಿಯೋದಲ್ಲಿ ಕಾಣಬಹುದು.

ಎದೆ ನಡುಕ ಹುಟ್ಟಿಸುವ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ  ಓದಿ: ಮದುವೆಯಾದ 6 ತಿಂಗಳಿಗೆ ಪತಿಗೆ ವಿಚ್ಛೇದನ ನೀಡಿದ ಪತ್ನಿ; ಕಾರಣ ತಿಳಿದರೆ ನೀವು ಶಾಕ್​​ ಆಗುದಂತೂ ಖಂಡಿತಾ

ಟ್ವಿಟರ್‌ನಲ್ಲಿ @1000waystod1e ಎಂಬ ಖಾತೆಯಲ್ಲಿ ಈ ವಿಡಿಯೋ ನಿನ್ನೆ(ನ.07) ಹಂಚಿಕೊಂಡಿದ್ದು, ಇದೀಗಾಗಲೇ 7.6 ಮಿಲಿಯನ್ ಅಂದರೆ 76 ಲಕ್ಷ ಜನರು ವೀಕ್ಷಿಸಿದ್ದಾರೆ. ಇದಲ್ಲದೇ 10 ಸಾವಿರಕ್ಕೂ ಹೆಚ್ಚು ಮಂದಿ ಈ ವಿಡಿಯೋವನ್ನು ಲೈಕ್ ಮಾಡಿದ್ದಾರೆ.ಅದೇ ಸಮಯದಲ್ಲಿ, ವೀಡಿಯೊವನ್ನು ನೋಡಿದ ನಂತರ, ಹಲವು ಜನರು ವಿಭಿನ್ನ ರೀತಿಯಲ್ಲಿ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ‘ಸ್ಕೂಟರ್ ಓಡಿಸುತ್ತಿದ್ದವರು ಬದುಕಿದ್ದಾರಾ?’ ಎಂದು ಕೆಲವರು ಪ್ರಶ್ನೆ ಮಾಡಿದರೆ, ಇನ್ನೂ ಕೆಲವರು ‘ಈ ವಿಡಿಯೋ ನಕಲಿ’ ಎಂದು ಕಾಮೆಂಟ್​ ಮಾಡಿದ್ದಾರೆ. ಆದರೆ ಈ ವಿಡಿಯೋದಲ್ಲಿ ತೋರಿಸಿರುವ ಅಪಘಾತ ಅಸಲಿಯೋ, ನಕಲಿಯೋ ಎಂಬುದು ತಿಳಿದಿಲ್ಲ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Follow Us
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ