AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 5 ವರ್ಷಗಳ ಬಳಿಕ ಜೈಲಿನಿಂದ ಹೊರ ಬಂದ ಮೊಮ್ಮಗನನ್ನು ಕಂಡು ಅಜ್ಜಿ ಭಾವುಕ

ಅಜ್ಜ-ಅಜ್ಜಿಯಂದಿರಿಗೆ ತಮ್ಮ ಮೊಮ್ಮಕ್ಕಳೆಂದರೆ ಎಲ್ಲಿಲ್ಲದ ಪ್ರೀತಿ. ಮೊಮ್ಮಕ್ಕಳು ಏನೇ ತಪ್ಪು ಮಾಡಿದ್ರೂ ಅದನ್ನು ಕ್ಷಮಿಸಿ ಪ್ರೀತಿಯಿಂದ ಮುದ್ದಾಡುತ್ತಾರೆ. ಇದಕ್ಕೆ ಉತ್ತಮ ನಿದರ್ಶನದಂತಿರುವ ವಿಡಿಯೋವೊಂದು ಇದೀಗ ವೈರಲ್‌ ಆಗಿದ್ದು, ಐದು ವರ್ಷಗಳ ಬಳಿಕ ತಿಹಾರ್‌ ಜೈಲಿನಿಂದ ಹೊರ ಬಂದ ಮೊಮ್ಮಗನನ್ನು ಕಂಡು ಆತ ಜೈಲಿಗೆ ಹೋಗಿ ಬಂದವನು ಎಂದು ಕೋಪ ಮಾಡಿಕೊಳ್ಳದೆ, ಅಜ್ಜಿಯು ತನ್ನ ಪ್ರೀತಿಯ ಮೊಮ್ಮಗನ್ನು ಮುದ್ದಾಡಿದ್ದಾರೆ. ಈ ದೃಶ್ಯವನ್ನು ಕಂಡು ಜೈಲಿನಿಂದ ಹೊರ ಬಂದ್ರೂ ವಿಡಿಯೋ ಮಾಡಬೇಕೆ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

Viral Video: 5 ವರ್ಷಗಳ ಬಳಿಕ ಜೈಲಿನಿಂದ ಹೊರ ಬಂದ ಮೊಮ್ಮಗನನ್ನು ಕಂಡು ಅಜ್ಜಿ ಭಾವುಕ
ಮಾಲಾಶ್ರೀ ಅಂಚನ್​
| Edited By: |

Updated on: Jun 23, 2024 | 2:31 PM

Share

ಮನೆ ಮಕ್ಕಳು ಸಣ್ಣ ಪುಟ್ಟ ತಪ್ಪುಗಳನ್ನು ಮಾಡಿದ್ರೂ ಸರಿ ಹೆತ್ತವರು ಕೆಂಡಾಮಂಡಲವಾಗುತ್ತಾರೆ. ನಂತರ ಕಠಿಣ ಶಿಕ್ಷೆ ನೀಡಿ ಬೈದು ಬುದ್ಧಿ ಹೇಳುತ್ತಾರೆ. ಆದ್ರೆ ಅಜ್ಜ-ಅಜ್ಜಿಯಂದಿರು ಹಾಗಲ್ಲ, ತಮ್ಮ ಮೊಮ್ಮಕ್ಕಳು ಎಷ್ಟೇ ದೊಡ್ಡ ತಪ್ಪು ಮಾಡಿದ್ರೂ ಸರಿ ಅದನ್ನು ಕ್ಷಮಿಸಿ ನನ್ನ ಮೊಮ್ಮಗ ಮುತ್ತು ರತ್ನ ಎನ್ನುತ್ತಾ ಮೊಮ್ಮಕ್ಕಳನ್ನು ಮುದ್ದಾಡುತ್ತಾರೆ. ಇದೇ ಕಾರಣಕ್ಕೆ ಮೊಮ್ಮಕ್ಕಳಿಗೆ ತಮ್ಮ ಅಜ್ಜ ಅಜ್ಜಿಯರೆಂದರೆ ಪಂಚಪ್ರಾಣ. ಇದೀಗ ಅಜ್ಜಿ-ಮೊಮ್ಮಗನ ಪ್ರೀತಿ ಬಾಂಧವ್ಯಕ್ಕೆ ಸಂಬಂಧಿಸಿದ ವಿಡಿಯೋವೊಂದು ವೈರಲ್‌ ಆಗಿದ್ದು, 5 ವರ್ಷಗಳ ಬಳಿಕ ಜೈಲಿನಿಂದ ಮೊಮ್ಮಗನನ್ನು ಕಂಡು ಆತ ಜೈಲಿಗೆ ಹೋಗಿ ಬಂದವನು ಎಂದು ಕೋಪ ಮಾಡಿಕೊಳ್ಳದೆ, ವರ್ಷಗಳ ಬಳಿಕ ಬಂದ ಮೊಮ್ಮಗನ್ನು ಬಿಗಿದಪ್ಪಿ ಮುದ್ದಾಡಿದ್ದಾರೆ.

ಹಿಮಾಂಶು (@himanshu_drall_01) ಎಂಬವರು ತಮ್ಮ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ 5 ವರ್ಷಗಳ ಬಳಿಕ ತಿಹಾರ್‌ ಜೈಲಿನಿಂದ ಹೊರ ಬಂದ ಮೊಮ್ಮಗನ್ನು ಕಂಡು ಅಜ್ಜಿ ಭಾವುಕರಾಗಿರುವ ದೃಶ್ಯವನ್ನು ಕಾಣಬಹುದು. ಯಾವುದೋ ತಪ್ಪಿಗೆ ಜೈಲು ಪಾಲಾಗಿದ್ದ ಯುವಕನೊಬ್ಬ ಶಿಕ್ಷೆಯನ್ನು ಮುಗಿಸಿ ಜೈಲಿನಿಂದ ಹೊರ ಬರುತ್ತಾರೆ. ನಂತರ ಮನೆಗೆ ಬಂದ ಆತ ಸೀದಾ ತಮ್ಮ ಪ್ರೀತಿಯ ಅಜ್ಜಿಯನ್ನು ಕಾಣಲು ಹೋಗುತ್ತಾನೆ. ಮಂಚದ ಮೇಲೆ ಮಲಗಿದ್ದ ಅಜ್ಜಿ ತನ್ನ ಮೊಮ್ಮಗನನ್ನು ಕಂಡು ಅಯ್ಯೋ ನನ್ನ ಬಂಗಾರ ಬಂದ್ಯಾ ಎಂದು ಖುಷಿಯಲ್ಲಿ ಮೊಮ್ಮಗನ್ನು ಮುದ್ದಾಡಿದ್ದಾರೆ.

ಇದನ್ನೂ ಓದಿ: ಸಾಕಿದ ಮಾಲಿಕನಿಗೆ ಯಮನಾದ ಗಜ; ಮಾವುತನನ್ನು ತುಳಿದು ಸಾಯಿಸಿದ ಆನೆ

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ಪೋಸ್ಟ್‌ 7.6 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದ್ದು, ಕೆಲವರು ಇದೇನು ಮೊಮ್ಮಗ ವಿದೇಶದಲ್ಲಿದ್ದು ಏನೋ ಸಾಧನೆ ಮಾಡಿ ಬಂದಂತೆ ಖುಷಿ ಪಡುತ್ತಿದ್ದಾರೆ ಎಂದು ಕಾಮೆಂಟ್ಸ್‌ ಮಾಡಿದರೆ, ಇನ್ನೂ ಅನೇಕರು ಅಜ್ಜಿ ಮೊಮ್ಮಗನ ಈ ಸುಂದರ ಬಾಂಧವ್ಯವನ್ನು ಕಂಡು ಭಾವುಕರಾಗಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ