AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಬಿಎಂಟಿಸಿಯ ಎಲೆಕ್ಟ್ರಿಕ್​ ಬಸ್​​ನ ವಿಶೇಷ ಸೌಲಭ್ಯ ಕಂಡು ಕಂಡಕ್ಟರ್​ಗೆ ಕೈಮುಗಿದ ವಿದೇಶಿ ಪ್ರಜೆ

ಬಿಎಂಟಿಸಿಯ ಎಲೆಕ್ಟ್ರಿಕ್​ ಬಸ್​ ಗಾಲಿಕುರ್ಚಿ-ಲಿಫ್ಟಿಂಗ್ ಪ್ಲಾಟ್​ಫಾರಂ​ ಸೌಲಭ್ಯ ಹೊಂದಿದ್ದು, ಇದರಿಂದ ವಿಕಲಚೇತನರು ಸಂಚರಿಸಲು ಅನುಕೂಲವಾಗಿದೆ.

Video Viral: ಬಿಎಂಟಿಸಿಯ ಎಲೆಕ್ಟ್ರಿಕ್​ ಬಸ್​​ನ ವಿಶೇಷ ಸೌಲಭ್ಯ ಕಂಡು ಕಂಡಕ್ಟರ್​ಗೆ ಕೈಮುಗಿದ ವಿದೇಶಿ ಪ್ರಜೆ
ಬಿಎಂಟಿಸಿ ಗಾಲಿಕುರ್ಚಿ-ಲಿಫ್ಟಿಂಗ್​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Mar 18, 2023 | 6:13 AM

Share

ಬೆಂಗಳೂರು: ಸಿಲಿಕಾನ್​ ಸಿಟಿ ಜನರ ಜೀವನಾಡಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನಗರದ ಎಲ್ಲ ಮೂಲಗಳಿಗು ಜನರನ್ನು ತಲುಪಿಸುತ್ತದೆ. ಬಿಎಂಟಿಸಿಯಲ್ಲಿ ನಿತ್ಯ ಲಕ್ಷಾಂತರ ಜನರು ಸುರಕ್ಷಿತವಾಗಿ ಸಂಚರಿಸುತ್ತಾರೆ. ಆರಾಮದಾಯಕ ಪ್ರಯಾಣಕ್ಕೆ ಬಸ್​ಗಳು ಅನುಕೂಲವಾಗಿದೆ. ಬಿಎಂಟಿಸಿ ಹೊಸ ಹೊಸ ಬಸ್​ಗಳನ್ನು ಪರಿಚಯಿಸುತ್ತಿದೆ. ಪರಿಸರ ಸ್ನೇಹಿ ಎಲೆಕ್ಟ್ರಿಕ್​ ಬಸ್​, ಎಂಡಿ 15 ( ಶೇ 15 ರಷ್ಟು ಮಿಥೈಲ್​-ಡಿಸೇಲ್ ಮಿಶ್ರಿತ) ಬಸ್​ ಹೀಗೆ ಹೊಸ ಹೊಸ ಬಸ್​ಗಳನ್ನು ರಸ್ತೆಗೆ ಇಳಿಸುತ್ತದೆ.​ ಎಲೆಕ್ಟ್ರಿಕ್​ ಬಸ್​ನಲ್ಲಿ ವಿಕಲಚೇತನರು ವೀಲ್​​ಚೇರ್​ ಸಮೇತ ಬಸ್​ ಹತ್ತಲು ಗಾಲಿಕುರ್ಚಿ-ಲಿಫ್ಟಿಂಗ್ ಪ್ಲಾಟ್​ಫಾರಂ ಸೌಲಭ್ಯ ಇದೆ. ವಿಕಲಚೇತನ ವಿದೇಶಿ ಪ್ರಜೆಯೊಬ್ಬರು ವೀಲ್​ ಚೇರ್​ ಸಮೇತ ಬಸ್​ ಹತ್ತಿದ್ದು, ಗಾಲಿಕುರ್ಚಿ-ಲಿಫ್ಟಿಂಗ್ ಪ್ಲಾಟ್​ಫಾರಂ​ ಸೌಲಭ್ಯ ಕಂಡು ಆ ಪ್ರಜೆ ಕಂಡೆಕ್ಟ್​​ರಗೆ ಕೈ ಮುಗಿದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ವಿಡಿಯೋದಲ್ಲಿ ಇಬ್ಬರು ವಿದೇಶಿ ಪ್ರಯಾಣಿಕರು ಬಸ್​ಗಾಗಿ ಕಾಯುತ್ತಿರುತ್ತಾರೆ. ಈ ವೇಳೆ 226N ಎಲೆಕ್ಟ್ರಿಕ್​ ಬಸ್​​ ಬರುತ್ತದೆ. ಇಬ್ಬರು ವಿದೇಶಿ ಪ್ರಯಾಣಿಕರಲ್ಲಿ ಓರ್ವ ವಿಕಲಚೇತನ ವ್ಯಕ್ತಿಯಾಗಿದ್ದು, ವೀಲ್​ಚೇರ್​​ನಲ್ಲಿ ಕುಳಿತಿರುತ್ತಾರೆ. ವಿಕಲಚೇತನ ವ್ಯಕ್ತಿ ವೀಲ್​ಚೇರ್​ ಸಮೇತ ಬಸ್​ ಹತ್ತಲು ಚಾಲಕ ರಿಮೋಟ್​ ಮೂಲಕ ಗಾಲಿಕುರ್ಚಿ-ಲಿಫ್ಟಿಂಗ್ ಪ್ಲಾಟ್​ಫಾರಂನ್ನು ಹೊರತೆಗೆಯುತ್ತಾರೆ. ಅದು ನೆಲದ ಸಮಾನಂತರವಾಗಿ ಹಾಸಿಕೊಳ್ಳುತ್ತದೆ. ನಂತರ ಅದರ ಮೇಲೆ ವೀಲ್​ಚೇರ್​ ಸಮೇತ ವ್ಯಕ್ತಿಯನ್ನು ಕೂರಿಸಲಾಗುತ್ತದೆ. ನಂತರ ನಿಧಾನವಾಗಿ ಲಿಫ್ಟರ್​ ಮೇಲೆ ಹೋಗಿ ಬಸ್​ನ​​ ಸಮಾನಾಂತರವಾಗಿ ನಿಲ್ಲುತ್ತದೆ. ಬಳಿಕ ವಿಕಲಚೇತನ ವ್ಯಕ್ತಿ ಒಳಗೆ ಹೋಗುತ್ತಾನೆ. ಇದನ್ನು ಕಂಡ ಮತ್ತೊಬ್ಬ ವಿದೇಶಿ ಪ್ರಯಾಣಿಕ ಕಂಡಕ್ಟರ್​ಗೆ ಕೈಮುಗಿಯುತ್ತಾರೆ.

ವಿಕಲಚೇತನರಿಗೆ ಪ್ರಯಾಣವನ್ನು ಸುಲಭಗೊಳಿಸಲು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮೊದಲ ಬಾರಿಗೆ ಗಾಲಿಕುರ್ಚಿ-ಲಿಫ್ಟಿಂಗ್ ಸೌಲಭ್ಯವನ್ನು ಹೊಂದಿರುವ ಬಸ್‌ಗಳನ್ನು ಕಳೆದ ವರ್ಷ ಪರಿಚಯಿಸಿದೆ. ಇದನ್ನು ಬಸ್ ಸಿಬ್ಬಂದಿ ನಿರ್ವಹಿಸುತ್ತಾರೆ. ಬಿಎಂಟಿಸಿ ವಿಡಿಯೋ ಟ್ವೀಟ್​ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:00 am, Sat, 18 March 23

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!