AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಗಡ್ಡೆಯೆಂದು ವ್ಯಕ್ತಿಗೆ ಶಸ್ತ್ರಚಿಕಿತ್ಸೆ ಮಾಡಿದ್ರೆ ಹೊಟ್ಟೆಯೊಳಗೆ ಅವಳಿ ಮೃತ ಭ್ರೂಣ ಪತ್ತೆ

ಹೊಟ್ಟೆ ಊದಿಗೊಂಡು ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ದಾಖಲಾದಾಗ ಹೊಟ್ಟೆಯಲ್ಲಿ ಗಡ್ಡೆಯಿರಬಹುದು ಎಂದು ವೈದ್ಯರು ಆತನನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸುತ್ತಾರೆ. ಆದರೆ ಆ ವ್ಯಕ್ತಿಯ ಹೊಟ್ಟೆಯಲ್ಲಿ ಗಡ್ಡೆಯ ಬದಲಿಗೆ ಅವಳಿ ಮೃತ ಭ್ರೂಣಗಳಿದ್ದವು. ಈ ಘಟನೆ ವೈದ್ಯಕೀಯ ಲೋಕವನ್ನೇ ದಿಗ್ಬ್ರಾಂತಗೊಳಿಸಿದೆ.

Viral News: ಗಡ್ಡೆಯೆಂದು ವ್ಯಕ್ತಿಗೆ ಶಸ್ತ್ರಚಿಕಿತ್ಸೆ ಮಾಡಿದ್ರೆ ಹೊಟ್ಟೆಯೊಳಗೆ ಅವಳಿ ಮೃತ ಭ್ರೂಣ ಪತ್ತೆ
ವೈರಲ್ ನ್ಯೂಸ್​​
ಅಕ್ಷಯ್​ ಪಲ್ಲಮಜಲು​​
|

Updated on: Jun 22, 2023 | 6:31 PM

Share

ವಿಶ್ವದಲ್ಲಿ ಹಲವಾರು ನಿಗೂಢ ಹಾಗೂ ಆಶ್ಚರ್ಯಕರ ವೈದ್ಯಕೀಯ ಸಂಬಂಧಿತ ಪ್ರಕರಣಗಳು ಬೆಳಕಿಗೆ ಬಂದಿವೆ. ವೈದ್ಯಕೀಯ ಲೋಕಕ್ಕೆ ಸವಾಲು ಹಾಕುವಂತಹ ಇಂತಹ ಪ್ರಕರಣಗಳ ಸುದ್ದಿಗಳು ಜನರನ್ನು ಬೆಚ್ಚಿ ಬೀಳಿಸುತ್ತವೆ. ಅಂತಹದ್ದೆ ಒಂದು ವೈದ್ಯಕೀಯ ಲೋಕಕ್ಕೆ ಸವಾಲೊಡ್ಡುವ ಪ್ರಕರಣವೊಂದು ಭಾರತದ ನಾಗ್ಪುರದಲ್ಲಿ ಬೆಳಕಿಗೆ ಬಂದಿದೆ. ಹೊಟ್ಟೆಯಲ್ಲಿ ಗಡ್ಡೆ ಬೆಳೆದಿರಬಹುದು ಎಂದು ವ್ಯಕ್ತಿಯನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿದಾಗ ಆತನ ಹೊಟ್ಟೆಯಲ್ಲಿ ಅವಳಿ ಭ್ರೂಣಗಳು ಪತ್ತೆಯಾಗಿದೆ.

ವರದಿಗಳ ಪ್ರಕಾರ ಈ ಘಟನೆಯು 1999ರಲ್ಲಿ ನಡೆದಿದ್ದು, ನಾಗ್ಪುರದ ಸಂಜು ಭಗತ್ ಎಂಬ ವ್ಯಕ್ತಿಯಲ್ಲಿ ಈ ಸಮಸ್ಯೆ ಕಂಡುಬಂದಿದೆ. ಸಂಜು ಭಗತ್ ಅವರು ಬಾಲ್ಯದಿಂದಲೇ ಉಬ್ಬಿದ ಹೊಟ್ಟೆಯ ಸಮಸ್ಯೆಯನ್ನು ಎದುರಿಸುತ್ತಿದ್ದು, ಇತರ ಮಕ್ಕಳಿಗಿಂದ ಹೆಚ್ಚಿನ ಉಬ್ಬಿದ ಹೊಟ್ಟೆಯನ್ನು ಹೊಂದಿದ್ದರು. ಆದರೆ ಇದರ ಬಗ್ಗೆ ಅವರು ಅಷ್ಟಾಗಿ ಗಮನವನ್ನು ಹರಿಸಲಿಲ್ಲ. ಆದರೆ ಈ ಹೊಟ್ಟೆ ಉಬ್ಬುವಿಕೆ ಕ್ರಮೇಣ ಹೆಚ್ಚಾದಾದ, ಕುಟುಂಬದ ಸದಸ್ಯರು ಇದರ ಬಗ್ಗೆ ಚಿಂತಿಸತೊಡಗಿದರು. ಸಂಜುವಿನ ಬೆಳೆಯುತ್ತಿರುವ ಹೊಟ್ಟೆಯನ್ನು ನೋಡಿದ ಜನ ಅವರನ್ನು ‘ಗರ್ಭಿಣಿ’ ಎಂದು ಚುಡಾಯಿಸುತ್ತಿದ್ದರು.

ಸಂಜು ಭಗತ್​​​ಗೆ 36 ವರ್ಷ ವಯಸ್ಸಾಗುವಾಗ ಅಂದರೆ ಸುಮಾರು 1999ರ ವೇಳೆಯಲ್ಲಿ ಒಂದು ದಿನ ಅವರಿಗೆ ಉಸಿರಾಟದ ಸಮಸ್ಯೆ ಮತ್ತು ಹೊಟ್ಟೆನೋವು ಕಾಣಿಸಿಕೊಳ್ಳುತ್ತದೆ. ಆ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ನೀಡಿದ ವೈದ್ಯರು ಆರಂಭದಲ್ಲಿ ಸಂಜು ಹೊಟ್ಟೆಯಲ್ಲಿ ದೊಡ್ಡ ಗಡ್ಡೆ ಇದೆಯೆಂದು ಭಾವಿಸಿದ್ದರು. ಗಡ್ಡೆಯನ್ನು ತೆಗೆಯುವ ಸಲುವಾಗಿ ಡಾ. ಅಜಯ್ ಮೆಹ್ತಾ ಮತ್ತು ಇನ್ನಿತರ ವೈದ್ಯರ ತಂಡದಿಂದ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗುತ್ತದೆ. ಹೊಟ್ಟೆಯನ್ನು ಸೀಳಿ ಗಡ್ಡೆಯನ್ನು ಹೊರ ತೆಗೆಯಬೇಕು ಎಂದುಕೊಂಡಿದ್ದ ವೈದ್ಯರಿಗೆ ಅಲ್ಲಿ ಶಾಕ್ ಕಾದಿತ್ತು. ಸಂಜು ಹೊಟ್ಟೆಯಲ್ಲಿ ಗೆಡ್ಡೆಯ ಬದಲಿಗೆ ಭ್ರೂಣದ ಅಂಗಾಗಳು ಪತ್ತೆಯಾದವು. ಹಾಗೂ ಹೊಟ್ಟೆಯೊಳಗೆ ಕೈಹಾಕಿದಾದ ಅನೇಕ ಮೂಳೆಗಳು, ಕೈ, ಕಾಲು, ಕೂದಲು ಕಂಡುಬಂದಿವೆ. ಮೂಲತಃ ಭ್ರೂಣಗಳ ಅಂಗಾಗಳು ಅವರ ಅವಳಿಯದ್ದಾಗಿದೆ. ಈ ಕಾರಣದಿಂದಾಗಿ ಅವರ ಹೊಟ್ಟೆಯ ಗಾತ್ರವು ಹೆಚ್ಚಾಗತೊಡಗಿದ್ದು. ಸದ್ಯ ಯಶಸ್ವಿ ಶಸ್ತ್ರಚಿಕಿತ್ಸೆಯ ಮೂಲಕ ವೈದ್ಯರ ತಂಡ 36 ವರ್ಷಗಳ ಕಾಲ ಸಂಜು ಅವರ ಹೊಟ್ಟೆಯಲ್ಲಿದ್ದ ಮೃತ ಭ್ರೂಣಗಳನ್ನು ಹೊರತೆಗೆದಿದ್ದಾರೆ. ಹಾಗೂ ಸಂಜು ಆರೋಗ್ಯವಂತರಾಗಿ ಎಲ್ಲರಂತೆ ಜೀವನ ನಡೆಸುತ್ತಿದ್ದಾರೆ.

ಇದನ್ನೂ ಓದಿ: Viral Post: ಅಂತರಾಷ್ಟ್ರೀಯ ಯೋಗದಿನದಂದು ಅಂತರಿಕ್ಷದಲ್ಲಿ ಯೋಗಾಭ್ಯಾಸ ಮಾಡಿದ ಗಗನಯಾತ್ರಿ

ವೈದ್ಯರು ಈ ಪ್ರಕರಣವನ್ನು ‘ವ್ಯಾನಿಶಿಂಗ್ ಟ್ವಿನ್ ಸಿಂಡ್ರೋಮ್’ ಎಂದು ಕರೆದಿದ್ದಾರೆ. ಅಂದರೆ ತಾಯಿಯ ಹೊಟ್ಟೆಯಲ್ಲಿ ಒಂದಕ್ಕಿಂತ ಹೆಚ್ಚು ಮಕ್ಕಳ ಬೆಳೆಯುತ್ತಿರುವಾಗ, ಕೆಲವು ಸಂದರ್ಭಗಳಲ್ಲಿ ಒಂದು ಭ್ರೂಣವು ಇನ್ನೊಂದು ಮಗುವಿನೊಳಗೆ ಬೆಳೆಯಲು ಪ್ರಾರಂಭಿಸುತ್ತದೆ. ಒಂದು ಭ್ರೂಣದ ಹೊಟ್ಟೆಯೊಳಗೆ ಬೆಳೆಯುತ್ತಿರುವ ಇನ್ನೊಂದು ಭ್ರೂಣ ವಾಸ್ತವವಾಗಿ ಅದರ ಅವಳಿಯಾಗಿರುತ್ತದೆ. ವೈದ್ಯಕೀಯ ತಜ್ಞರ ಪ್ರಕಾರ, ಇದು ಅತ್ಯಂತ ಅಪರೂಪದ ವೈದ್ಯಕೀಯ ಪರಿಸ್ಥಿತಿಯಾಗಿದ್ದು, ಇದು ಐದು ಲಕ್ಷ ಜನರಲ್ಲಿ ಒಬ್ಬರಲ್ಲಿ ಕಂಡುಬರುತ್ತದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!