AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುರಸ್ತೆಯಲ್ಲಿ ಬಸ್​ ನಿಲ್ಲಿಸಿ ಚಹಾ ಕುಡಿಯಲು ಹೋಗಿದ್ದ ದೆಹಲಿ ಡ್ರೈವರ್ ವಿಡಿಯೋ ವೈರಲ್

Viral Video : ಡ್ರೈವರ್​ಗೆ ಚಹಾ ಕುಡಿಯಲೇಬೇಕೆಂದು ತೀವ್ರವಾಗಿ ಅನ್ನಿಸಿದೆ. ಹಿಂದೂಮುಂದೂ ನೋಡದೆ ದಟ್ಟಣೆಯಿಂದ ಕೂಡಿದ ರಸ್ತೆಯ ಮಧ್ಯೆ ಹೀಗೆ ಬಸ್​ ನಿಲ್ಲಿಸಿ ಇಳಿದುಬಿಟ್ಟಿದ್ಧಾರೆ. ಆಮೇಲೆ?

ನಡುರಸ್ತೆಯಲ್ಲಿ ಬಸ್​ ನಿಲ್ಲಿಸಿ ಚಹಾ ಕುಡಿಯಲು ಹೋಗಿದ್ದ ದೆಹಲಿ ಡ್ರೈವರ್ ವಿಡಿಯೋ ವೈರಲ್
ರಸ್ತೆ ಮಧ್ಯೆ ಬಸ್ ನಿಲ್ಲಿಸಿ ಚಹಾ ಕುಡಿಯಲು ಹೋಗಿದ್ದ ಬಸ್ ಡ್ರೈವರ್
TV9 Web
| Edited By: |

Updated on:Jan 05, 2023 | 3:06 PM

Share

Viral Video: ಚಹಾ! ಅನೇಕರ ಚೈತನ್ಯದ ಮೂಲವೇ ಇದರಲ್ಲಿದೆ. ಮಳೆಗಾಲಕ್ಕೆ, ಚಳಿಗಾಲಕ್ಕೆ ಚಹಾ ಇಲ್ಲದೆ ಕೈಕಾಲಷ್ಟೇ ಅಲ್ಲ ತಲೆಯೂ ಓಡದು ಎಂಬಂಥ  ಸ್ಥಿತಿ ನಿರ್ಮಾಣವಾಗುತ್ತದೆ. ಈಗಲಂತೂ ಚಳಿಗಾಲ. ಬೆಚ್ಚಗೆ, ಹಿತವಾದ ಚಹಾವನ್ನು ಆಸ್ವಾದಿಸಬೇಕೆಂದು ಯಾರಿಗೂ ತೀವ್ರವಾಗಿ ಅನ್ನಿಸುತ್ತದೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ಗಮನಿಸಿ. ದೆಹಲಿಯ ಸಾರಿಗೆ ಸಂಸ್ಥೆಯ ಬಸ್ ಚಾಲಕರೊಬ್ಬರು ರಸ್ತೆಯ ಮಧ್ಯೆಯೇ ಬಸ್ ನಿಲ್ಲಿಸಿ ಚಹಾ ಕುಡಿಯಲು ಹೋಗಿದ್ದಾರೆ.

ಚಹಾ ಕುಡಿಯಲೇಬೇಕೆಂದು ಅವರಿಗೆ ತೀವ್ರವಾಗಿ ಅನ್ನಿಸಿದೆ. ದಟ್ಟಣೆಯಿಂದ ಕೂಡಿದ ರಸ್ತೆಯ ಮಧ್ಯೆ ಹೀಗೆ ಧೈರ್ಯದಿಂದ ಬಸ್​ ನಿಲ್ಲಿಸಿಬಿಟ್ಟಿದ್ದಾರೆ. ಮುಂದೆ ಏನಾಗಬೇಕೋ ಅದೇ ಆಗಿದೆ. ರಸ್ತೆ ಪೂರ್ತಿ ಜಾಮ್ ಆಗಿಬಿಟ್ಟಿದೆ. ಜನರು ಕೋಪದಿಂದ ಒಂದೇ ಸಮ ಹಾರ್ನ್​ ಮಾಡಿದ್ಧಾರೆ. ಆದರೂ ಡ್ರೈವರ್​ಗೆ ಚಹಾ ಕುಡಿಯುವುದು ಮುಖ್ಯ. ಚಹಾ ಅಂಗಡಿಗೆ ಹೋಗಿದ್ದಾರೆ. ಬೆನ್ನ ಹಿಂದೆ ನಡೆಯುತ್ತಿರುವುದೆಲ್ಲ ಕಿವಿಗೆ ತಲುಪುತ್ತಿದ್ದಂತೆ ತಪ್ಪಿನ ಅರಿವಾಗಿ ಕೈಯಲ್ಲಿ ಕಪ್​ ಹಿಡಿದುಕೊಂಡೇ ಬಸ್ಸಿನೆಡೆ ಓಡಿದ್ದಾರೆ.

ಇದನ್ನೂ ಓದಿ : ಸರ್ಕಸ್​ ನಡೆಯುತ್ತಿದ್ದಾಗ ಹುಲಿಯ ದಾಳಿಗೆ ಈಡಾದ ಇಟಾಲಿಯನ್​ ತರಬೇತುದಾರ; ವಿಡಿಯೋ ವೈರಲ್

ಈ ವಿಡಿಯೋ ಅನ್ನು ಟ್ವಿಟರ್​ನಲ್ಲಿ ಶುಭ್​ ಎನ್ನುವವರು ಜನವರಿ 2ರಂದು ಪೋಸ್ಟ್ ಮಾಡಿದ್ದಾರೆ.  ದೆಹಲಿಯ ವಿಶ್ವವಿದ್ಯಾಲಯದ ಕ್ಯಾಂಪಸ್​ ಬಳಿ ಇರುವ ಸುಧಾಮ ಟೀ ಸ್ಟಾಲ್​ ಬಳಿ ಈ ವಿಡಿಯೋ ಚಿತ್ರೀಕರಿಸಲಾಗಿದೆ. ಈತನಕ 1,36,000 ಜನರು ಈ ವಿಡಿಯೋ ನೋಡಿದ್ದಾರೆ. ನೂರಾರು ಜನರು ಪ್ರತಿಕ್ರಿಯಿಸಿದ್ದಾರೆ.

ಅರೆ ಪಾಪ ಅವನದು ತಪ್ಪಿಲ್ಲ. ಸುಧಾಮ ಚಹಾ ಅಷ್ಟೊಂದು ಚೆನ್ನಾಗಿದೆ ಎಂದರ್ಥ ಎಂದಿದ್ದಾರೆ ಒಬ್ಬರು. ಇದು ಚಹಾದ ಮಹಿಮೆ ಮತ್ತು ಶ್ರೇಷ್ಠತೆ ಎಂದಿದ್ಧಾರೆ ಮತ್ತೊಬ್ಬರು.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:06 pm, Thu, 5 January 23

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್