AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುರಸ್ತೆಯಲ್ಲಿ ಬಸ್​ ನಿಲ್ಲಿಸಿ ಚಹಾ ಕುಡಿಯಲು ಹೋಗಿದ್ದ ದೆಹಲಿ ಡ್ರೈವರ್ ವಿಡಿಯೋ ವೈರಲ್

Viral Video : ಡ್ರೈವರ್​ಗೆ ಚಹಾ ಕುಡಿಯಲೇಬೇಕೆಂದು ತೀವ್ರವಾಗಿ ಅನ್ನಿಸಿದೆ. ಹಿಂದೂಮುಂದೂ ನೋಡದೆ ದಟ್ಟಣೆಯಿಂದ ಕೂಡಿದ ರಸ್ತೆಯ ಮಧ್ಯೆ ಹೀಗೆ ಬಸ್​ ನಿಲ್ಲಿಸಿ ಇಳಿದುಬಿಟ್ಟಿದ್ಧಾರೆ. ಆಮೇಲೆ?

ನಡುರಸ್ತೆಯಲ್ಲಿ ಬಸ್​ ನಿಲ್ಲಿಸಿ ಚಹಾ ಕುಡಿಯಲು ಹೋಗಿದ್ದ ದೆಹಲಿ ಡ್ರೈವರ್ ವಿಡಿಯೋ ವೈರಲ್
ರಸ್ತೆ ಮಧ್ಯೆ ಬಸ್ ನಿಲ್ಲಿಸಿ ಚಹಾ ಕುಡಿಯಲು ಹೋಗಿದ್ದ ಬಸ್ ಡ್ರೈವರ್
TV9 Web
| Edited By: |

Updated on:Jan 05, 2023 | 3:06 PM

Share

Viral Video: ಚಹಾ! ಅನೇಕರ ಚೈತನ್ಯದ ಮೂಲವೇ ಇದರಲ್ಲಿದೆ. ಮಳೆಗಾಲಕ್ಕೆ, ಚಳಿಗಾಲಕ್ಕೆ ಚಹಾ ಇಲ್ಲದೆ ಕೈಕಾಲಷ್ಟೇ ಅಲ್ಲ ತಲೆಯೂ ಓಡದು ಎಂಬಂಥ  ಸ್ಥಿತಿ ನಿರ್ಮಾಣವಾಗುತ್ತದೆ. ಈಗಲಂತೂ ಚಳಿಗಾಲ. ಬೆಚ್ಚಗೆ, ಹಿತವಾದ ಚಹಾವನ್ನು ಆಸ್ವಾದಿಸಬೇಕೆಂದು ಯಾರಿಗೂ ತೀವ್ರವಾಗಿ ಅನ್ನಿಸುತ್ತದೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ಗಮನಿಸಿ. ದೆಹಲಿಯ ಸಾರಿಗೆ ಸಂಸ್ಥೆಯ ಬಸ್ ಚಾಲಕರೊಬ್ಬರು ರಸ್ತೆಯ ಮಧ್ಯೆಯೇ ಬಸ್ ನಿಲ್ಲಿಸಿ ಚಹಾ ಕುಡಿಯಲು ಹೋಗಿದ್ದಾರೆ.

ಚಹಾ ಕುಡಿಯಲೇಬೇಕೆಂದು ಅವರಿಗೆ ತೀವ್ರವಾಗಿ ಅನ್ನಿಸಿದೆ. ದಟ್ಟಣೆಯಿಂದ ಕೂಡಿದ ರಸ್ತೆಯ ಮಧ್ಯೆ ಹೀಗೆ ಧೈರ್ಯದಿಂದ ಬಸ್​ ನಿಲ್ಲಿಸಿಬಿಟ್ಟಿದ್ದಾರೆ. ಮುಂದೆ ಏನಾಗಬೇಕೋ ಅದೇ ಆಗಿದೆ. ರಸ್ತೆ ಪೂರ್ತಿ ಜಾಮ್ ಆಗಿಬಿಟ್ಟಿದೆ. ಜನರು ಕೋಪದಿಂದ ಒಂದೇ ಸಮ ಹಾರ್ನ್​ ಮಾಡಿದ್ಧಾರೆ. ಆದರೂ ಡ್ರೈವರ್​ಗೆ ಚಹಾ ಕುಡಿಯುವುದು ಮುಖ್ಯ. ಚಹಾ ಅಂಗಡಿಗೆ ಹೋಗಿದ್ದಾರೆ. ಬೆನ್ನ ಹಿಂದೆ ನಡೆಯುತ್ತಿರುವುದೆಲ್ಲ ಕಿವಿಗೆ ತಲುಪುತ್ತಿದ್ದಂತೆ ತಪ್ಪಿನ ಅರಿವಾಗಿ ಕೈಯಲ್ಲಿ ಕಪ್​ ಹಿಡಿದುಕೊಂಡೇ ಬಸ್ಸಿನೆಡೆ ಓಡಿದ್ದಾರೆ.

ಇದನ್ನೂ ಓದಿ : ಸರ್ಕಸ್​ ನಡೆಯುತ್ತಿದ್ದಾಗ ಹುಲಿಯ ದಾಳಿಗೆ ಈಡಾದ ಇಟಾಲಿಯನ್​ ತರಬೇತುದಾರ; ವಿಡಿಯೋ ವೈರಲ್

ಈ ವಿಡಿಯೋ ಅನ್ನು ಟ್ವಿಟರ್​ನಲ್ಲಿ ಶುಭ್​ ಎನ್ನುವವರು ಜನವರಿ 2ರಂದು ಪೋಸ್ಟ್ ಮಾಡಿದ್ದಾರೆ.  ದೆಹಲಿಯ ವಿಶ್ವವಿದ್ಯಾಲಯದ ಕ್ಯಾಂಪಸ್​ ಬಳಿ ಇರುವ ಸುಧಾಮ ಟೀ ಸ್ಟಾಲ್​ ಬಳಿ ಈ ವಿಡಿಯೋ ಚಿತ್ರೀಕರಿಸಲಾಗಿದೆ. ಈತನಕ 1,36,000 ಜನರು ಈ ವಿಡಿಯೋ ನೋಡಿದ್ದಾರೆ. ನೂರಾರು ಜನರು ಪ್ರತಿಕ್ರಿಯಿಸಿದ್ದಾರೆ.

ಅರೆ ಪಾಪ ಅವನದು ತಪ್ಪಿಲ್ಲ. ಸುಧಾಮ ಚಹಾ ಅಷ್ಟೊಂದು ಚೆನ್ನಾಗಿದೆ ಎಂದರ್ಥ ಎಂದಿದ್ದಾರೆ ಒಬ್ಬರು. ಇದು ಚಹಾದ ಮಹಿಮೆ ಮತ್ತು ಶ್ರೇಷ್ಠತೆ ಎಂದಿದ್ಧಾರೆ ಮತ್ತೊಬ್ಬರು.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:06 pm, Thu, 5 January 23

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ