AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುರಸ್ತೆಯಲ್ಲಿ ಬಸ್​ ನಿಲ್ಲಿಸಿ ಚಹಾ ಕುಡಿಯಲು ಹೋಗಿದ್ದ ದೆಹಲಿ ಡ್ರೈವರ್ ವಿಡಿಯೋ ವೈರಲ್

Viral Video : ಡ್ರೈವರ್​ಗೆ ಚಹಾ ಕುಡಿಯಲೇಬೇಕೆಂದು ತೀವ್ರವಾಗಿ ಅನ್ನಿಸಿದೆ. ಹಿಂದೂಮುಂದೂ ನೋಡದೆ ದಟ್ಟಣೆಯಿಂದ ಕೂಡಿದ ರಸ್ತೆಯ ಮಧ್ಯೆ ಹೀಗೆ ಬಸ್​ ನಿಲ್ಲಿಸಿ ಇಳಿದುಬಿಟ್ಟಿದ್ಧಾರೆ. ಆಮೇಲೆ?

ನಡುರಸ್ತೆಯಲ್ಲಿ ಬಸ್​ ನಿಲ್ಲಿಸಿ ಚಹಾ ಕುಡಿಯಲು ಹೋಗಿದ್ದ ದೆಹಲಿ ಡ್ರೈವರ್ ವಿಡಿಯೋ ವೈರಲ್
ರಸ್ತೆ ಮಧ್ಯೆ ಬಸ್ ನಿಲ್ಲಿಸಿ ಚಹಾ ಕುಡಿಯಲು ಹೋಗಿದ್ದ ಬಸ್ ಡ್ರೈವರ್
TV9 Web
| Edited By: ಶ್ರೀದೇವಿ ಕಳಸದ|

Updated on:Jan 05, 2023 | 3:06 PM

Share

Viral Video: ಚಹಾ! ಅನೇಕರ ಚೈತನ್ಯದ ಮೂಲವೇ ಇದರಲ್ಲಿದೆ. ಮಳೆಗಾಲಕ್ಕೆ, ಚಳಿಗಾಲಕ್ಕೆ ಚಹಾ ಇಲ್ಲದೆ ಕೈಕಾಲಷ್ಟೇ ಅಲ್ಲ ತಲೆಯೂ ಓಡದು ಎಂಬಂಥ  ಸ್ಥಿತಿ ನಿರ್ಮಾಣವಾಗುತ್ತದೆ. ಈಗಲಂತೂ ಚಳಿಗಾಲ. ಬೆಚ್ಚಗೆ, ಹಿತವಾದ ಚಹಾವನ್ನು ಆಸ್ವಾದಿಸಬೇಕೆಂದು ಯಾರಿಗೂ ತೀವ್ರವಾಗಿ ಅನ್ನಿಸುತ್ತದೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ಗಮನಿಸಿ. ದೆಹಲಿಯ ಸಾರಿಗೆ ಸಂಸ್ಥೆಯ ಬಸ್ ಚಾಲಕರೊಬ್ಬರು ರಸ್ತೆಯ ಮಧ್ಯೆಯೇ ಬಸ್ ನಿಲ್ಲಿಸಿ ಚಹಾ ಕುಡಿಯಲು ಹೋಗಿದ್ದಾರೆ.

ಚಹಾ ಕುಡಿಯಲೇಬೇಕೆಂದು ಅವರಿಗೆ ತೀವ್ರವಾಗಿ ಅನ್ನಿಸಿದೆ. ದಟ್ಟಣೆಯಿಂದ ಕೂಡಿದ ರಸ್ತೆಯ ಮಧ್ಯೆ ಹೀಗೆ ಧೈರ್ಯದಿಂದ ಬಸ್​ ನಿಲ್ಲಿಸಿಬಿಟ್ಟಿದ್ದಾರೆ. ಮುಂದೆ ಏನಾಗಬೇಕೋ ಅದೇ ಆಗಿದೆ. ರಸ್ತೆ ಪೂರ್ತಿ ಜಾಮ್ ಆಗಿಬಿಟ್ಟಿದೆ. ಜನರು ಕೋಪದಿಂದ ಒಂದೇ ಸಮ ಹಾರ್ನ್​ ಮಾಡಿದ್ಧಾರೆ. ಆದರೂ ಡ್ರೈವರ್​ಗೆ ಚಹಾ ಕುಡಿಯುವುದು ಮುಖ್ಯ. ಚಹಾ ಅಂಗಡಿಗೆ ಹೋಗಿದ್ದಾರೆ. ಬೆನ್ನ ಹಿಂದೆ ನಡೆಯುತ್ತಿರುವುದೆಲ್ಲ ಕಿವಿಗೆ ತಲುಪುತ್ತಿದ್ದಂತೆ ತಪ್ಪಿನ ಅರಿವಾಗಿ ಕೈಯಲ್ಲಿ ಕಪ್​ ಹಿಡಿದುಕೊಂಡೇ ಬಸ್ಸಿನೆಡೆ ಓಡಿದ್ದಾರೆ.

ಇದನ್ನೂ ಓದಿ : ಸರ್ಕಸ್​ ನಡೆಯುತ್ತಿದ್ದಾಗ ಹುಲಿಯ ದಾಳಿಗೆ ಈಡಾದ ಇಟಾಲಿಯನ್​ ತರಬೇತುದಾರ; ವಿಡಿಯೋ ವೈರಲ್

ಈ ವಿಡಿಯೋ ಅನ್ನು ಟ್ವಿಟರ್​ನಲ್ಲಿ ಶುಭ್​ ಎನ್ನುವವರು ಜನವರಿ 2ರಂದು ಪೋಸ್ಟ್ ಮಾಡಿದ್ದಾರೆ.  ದೆಹಲಿಯ ವಿಶ್ವವಿದ್ಯಾಲಯದ ಕ್ಯಾಂಪಸ್​ ಬಳಿ ಇರುವ ಸುಧಾಮ ಟೀ ಸ್ಟಾಲ್​ ಬಳಿ ಈ ವಿಡಿಯೋ ಚಿತ್ರೀಕರಿಸಲಾಗಿದೆ. ಈತನಕ 1,36,000 ಜನರು ಈ ವಿಡಿಯೋ ನೋಡಿದ್ದಾರೆ. ನೂರಾರು ಜನರು ಪ್ರತಿಕ್ರಿಯಿಸಿದ್ದಾರೆ.

ಅರೆ ಪಾಪ ಅವನದು ತಪ್ಪಿಲ್ಲ. ಸುಧಾಮ ಚಹಾ ಅಷ್ಟೊಂದು ಚೆನ್ನಾಗಿದೆ ಎಂದರ್ಥ ಎಂದಿದ್ದಾರೆ ಒಬ್ಬರು. ಇದು ಚಹಾದ ಮಹಿಮೆ ಮತ್ತು ಶ್ರೇಷ್ಠತೆ ಎಂದಿದ್ಧಾರೆ ಮತ್ತೊಬ್ಬರು.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:06 pm, Thu, 5 January 23

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ