AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುರಸ್ತೆಯಲ್ಲಿ ಬಸ್​ ನಿಲ್ಲಿಸಿ ಚಹಾ ಕುಡಿಯಲು ಹೋಗಿದ್ದ ದೆಹಲಿ ಡ್ರೈವರ್ ವಿಡಿಯೋ ವೈರಲ್

Viral Video : ಡ್ರೈವರ್​ಗೆ ಚಹಾ ಕುಡಿಯಲೇಬೇಕೆಂದು ತೀವ್ರವಾಗಿ ಅನ್ನಿಸಿದೆ. ಹಿಂದೂಮುಂದೂ ನೋಡದೆ ದಟ್ಟಣೆಯಿಂದ ಕೂಡಿದ ರಸ್ತೆಯ ಮಧ್ಯೆ ಹೀಗೆ ಬಸ್​ ನಿಲ್ಲಿಸಿ ಇಳಿದುಬಿಟ್ಟಿದ್ಧಾರೆ. ಆಮೇಲೆ?

ನಡುರಸ್ತೆಯಲ್ಲಿ ಬಸ್​ ನಿಲ್ಲಿಸಿ ಚಹಾ ಕುಡಿಯಲು ಹೋಗಿದ್ದ ದೆಹಲಿ ಡ್ರೈವರ್ ವಿಡಿಯೋ ವೈರಲ್
ರಸ್ತೆ ಮಧ್ಯೆ ಬಸ್ ನಿಲ್ಲಿಸಿ ಚಹಾ ಕುಡಿಯಲು ಹೋಗಿದ್ದ ಬಸ್ ಡ್ರೈವರ್
Follow us
TV9 Web
| Updated By: ಶ್ರೀದೇವಿ ಕಳಸದ

Updated on:Jan 05, 2023 | 3:06 PM

Viral Video: ಚಹಾ! ಅನೇಕರ ಚೈತನ್ಯದ ಮೂಲವೇ ಇದರಲ್ಲಿದೆ. ಮಳೆಗಾಲಕ್ಕೆ, ಚಳಿಗಾಲಕ್ಕೆ ಚಹಾ ಇಲ್ಲದೆ ಕೈಕಾಲಷ್ಟೇ ಅಲ್ಲ ತಲೆಯೂ ಓಡದು ಎಂಬಂಥ  ಸ್ಥಿತಿ ನಿರ್ಮಾಣವಾಗುತ್ತದೆ. ಈಗಲಂತೂ ಚಳಿಗಾಲ. ಬೆಚ್ಚಗೆ, ಹಿತವಾದ ಚಹಾವನ್ನು ಆಸ್ವಾದಿಸಬೇಕೆಂದು ಯಾರಿಗೂ ತೀವ್ರವಾಗಿ ಅನ್ನಿಸುತ್ತದೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ಗಮನಿಸಿ. ದೆಹಲಿಯ ಸಾರಿಗೆ ಸಂಸ್ಥೆಯ ಬಸ್ ಚಾಲಕರೊಬ್ಬರು ರಸ್ತೆಯ ಮಧ್ಯೆಯೇ ಬಸ್ ನಿಲ್ಲಿಸಿ ಚಹಾ ಕುಡಿಯಲು ಹೋಗಿದ್ದಾರೆ.

ಚಹಾ ಕುಡಿಯಲೇಬೇಕೆಂದು ಅವರಿಗೆ ತೀವ್ರವಾಗಿ ಅನ್ನಿಸಿದೆ. ದಟ್ಟಣೆಯಿಂದ ಕೂಡಿದ ರಸ್ತೆಯ ಮಧ್ಯೆ ಹೀಗೆ ಧೈರ್ಯದಿಂದ ಬಸ್​ ನಿಲ್ಲಿಸಿಬಿಟ್ಟಿದ್ದಾರೆ. ಮುಂದೆ ಏನಾಗಬೇಕೋ ಅದೇ ಆಗಿದೆ. ರಸ್ತೆ ಪೂರ್ತಿ ಜಾಮ್ ಆಗಿಬಿಟ್ಟಿದೆ. ಜನರು ಕೋಪದಿಂದ ಒಂದೇ ಸಮ ಹಾರ್ನ್​ ಮಾಡಿದ್ಧಾರೆ. ಆದರೂ ಡ್ರೈವರ್​ಗೆ ಚಹಾ ಕುಡಿಯುವುದು ಮುಖ್ಯ. ಚಹಾ ಅಂಗಡಿಗೆ ಹೋಗಿದ್ದಾರೆ. ಬೆನ್ನ ಹಿಂದೆ ನಡೆಯುತ್ತಿರುವುದೆಲ್ಲ ಕಿವಿಗೆ ತಲುಪುತ್ತಿದ್ದಂತೆ ತಪ್ಪಿನ ಅರಿವಾಗಿ ಕೈಯಲ್ಲಿ ಕಪ್​ ಹಿಡಿದುಕೊಂಡೇ ಬಸ್ಸಿನೆಡೆ ಓಡಿದ್ದಾರೆ.

ಇದನ್ನೂ ಓದಿ : ಸರ್ಕಸ್​ ನಡೆಯುತ್ತಿದ್ದಾಗ ಹುಲಿಯ ದಾಳಿಗೆ ಈಡಾದ ಇಟಾಲಿಯನ್​ ತರಬೇತುದಾರ; ವಿಡಿಯೋ ವೈರಲ್

ಈ ವಿಡಿಯೋ ಅನ್ನು ಟ್ವಿಟರ್​ನಲ್ಲಿ ಶುಭ್​ ಎನ್ನುವವರು ಜನವರಿ 2ರಂದು ಪೋಸ್ಟ್ ಮಾಡಿದ್ದಾರೆ.  ದೆಹಲಿಯ ವಿಶ್ವವಿದ್ಯಾಲಯದ ಕ್ಯಾಂಪಸ್​ ಬಳಿ ಇರುವ ಸುಧಾಮ ಟೀ ಸ್ಟಾಲ್​ ಬಳಿ ಈ ವಿಡಿಯೋ ಚಿತ್ರೀಕರಿಸಲಾಗಿದೆ. ಈತನಕ 1,36,000 ಜನರು ಈ ವಿಡಿಯೋ ನೋಡಿದ್ದಾರೆ. ನೂರಾರು ಜನರು ಪ್ರತಿಕ್ರಿಯಿಸಿದ್ದಾರೆ.

ಅರೆ ಪಾಪ ಅವನದು ತಪ್ಪಿಲ್ಲ. ಸುಧಾಮ ಚಹಾ ಅಷ್ಟೊಂದು ಚೆನ್ನಾಗಿದೆ ಎಂದರ್ಥ ಎಂದಿದ್ದಾರೆ ಒಬ್ಬರು. ಇದು ಚಹಾದ ಮಹಿಮೆ ಮತ್ತು ಶ್ರೇಷ್ಠತೆ ಎಂದಿದ್ಧಾರೆ ಮತ್ತೊಬ್ಬರು.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:06 pm, Thu, 5 January 23

ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?