AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುರಸ್ತೆಯಲ್ಲಿ ಬಸ್​ ನಿಲ್ಲಿಸಿ ಚಹಾ ಕುಡಿಯಲು ಹೋಗಿದ್ದ ದೆಹಲಿ ಡ್ರೈವರ್ ವಿಡಿಯೋ ವೈರಲ್

Viral Video : ಡ್ರೈವರ್​ಗೆ ಚಹಾ ಕುಡಿಯಲೇಬೇಕೆಂದು ತೀವ್ರವಾಗಿ ಅನ್ನಿಸಿದೆ. ಹಿಂದೂಮುಂದೂ ನೋಡದೆ ದಟ್ಟಣೆಯಿಂದ ಕೂಡಿದ ರಸ್ತೆಯ ಮಧ್ಯೆ ಹೀಗೆ ಬಸ್​ ನಿಲ್ಲಿಸಿ ಇಳಿದುಬಿಟ್ಟಿದ್ಧಾರೆ. ಆಮೇಲೆ?

ನಡುರಸ್ತೆಯಲ್ಲಿ ಬಸ್​ ನಿಲ್ಲಿಸಿ ಚಹಾ ಕುಡಿಯಲು ಹೋಗಿದ್ದ ದೆಹಲಿ ಡ್ರೈವರ್ ವಿಡಿಯೋ ವೈರಲ್
ರಸ್ತೆ ಮಧ್ಯೆ ಬಸ್ ನಿಲ್ಲಿಸಿ ಚಹಾ ಕುಡಿಯಲು ಹೋಗಿದ್ದ ಬಸ್ ಡ್ರೈವರ್
TV9 Web
| Edited By: |

Updated on:Jan 05, 2023 | 3:06 PM

Share

Viral Video: ಚಹಾ! ಅನೇಕರ ಚೈತನ್ಯದ ಮೂಲವೇ ಇದರಲ್ಲಿದೆ. ಮಳೆಗಾಲಕ್ಕೆ, ಚಳಿಗಾಲಕ್ಕೆ ಚಹಾ ಇಲ್ಲದೆ ಕೈಕಾಲಷ್ಟೇ ಅಲ್ಲ ತಲೆಯೂ ಓಡದು ಎಂಬಂಥ  ಸ್ಥಿತಿ ನಿರ್ಮಾಣವಾಗುತ್ತದೆ. ಈಗಲಂತೂ ಚಳಿಗಾಲ. ಬೆಚ್ಚಗೆ, ಹಿತವಾದ ಚಹಾವನ್ನು ಆಸ್ವಾದಿಸಬೇಕೆಂದು ಯಾರಿಗೂ ತೀವ್ರವಾಗಿ ಅನ್ನಿಸುತ್ತದೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ಗಮನಿಸಿ. ದೆಹಲಿಯ ಸಾರಿಗೆ ಸಂಸ್ಥೆಯ ಬಸ್ ಚಾಲಕರೊಬ್ಬರು ರಸ್ತೆಯ ಮಧ್ಯೆಯೇ ಬಸ್ ನಿಲ್ಲಿಸಿ ಚಹಾ ಕುಡಿಯಲು ಹೋಗಿದ್ದಾರೆ.

ಚಹಾ ಕುಡಿಯಲೇಬೇಕೆಂದು ಅವರಿಗೆ ತೀವ್ರವಾಗಿ ಅನ್ನಿಸಿದೆ. ದಟ್ಟಣೆಯಿಂದ ಕೂಡಿದ ರಸ್ತೆಯ ಮಧ್ಯೆ ಹೀಗೆ ಧೈರ್ಯದಿಂದ ಬಸ್​ ನಿಲ್ಲಿಸಿಬಿಟ್ಟಿದ್ದಾರೆ. ಮುಂದೆ ಏನಾಗಬೇಕೋ ಅದೇ ಆಗಿದೆ. ರಸ್ತೆ ಪೂರ್ತಿ ಜಾಮ್ ಆಗಿಬಿಟ್ಟಿದೆ. ಜನರು ಕೋಪದಿಂದ ಒಂದೇ ಸಮ ಹಾರ್ನ್​ ಮಾಡಿದ್ಧಾರೆ. ಆದರೂ ಡ್ರೈವರ್​ಗೆ ಚಹಾ ಕುಡಿಯುವುದು ಮುಖ್ಯ. ಚಹಾ ಅಂಗಡಿಗೆ ಹೋಗಿದ್ದಾರೆ. ಬೆನ್ನ ಹಿಂದೆ ನಡೆಯುತ್ತಿರುವುದೆಲ್ಲ ಕಿವಿಗೆ ತಲುಪುತ್ತಿದ್ದಂತೆ ತಪ್ಪಿನ ಅರಿವಾಗಿ ಕೈಯಲ್ಲಿ ಕಪ್​ ಹಿಡಿದುಕೊಂಡೇ ಬಸ್ಸಿನೆಡೆ ಓಡಿದ್ದಾರೆ.

ಇದನ್ನೂ ಓದಿ : ಸರ್ಕಸ್​ ನಡೆಯುತ್ತಿದ್ದಾಗ ಹುಲಿಯ ದಾಳಿಗೆ ಈಡಾದ ಇಟಾಲಿಯನ್​ ತರಬೇತುದಾರ; ವಿಡಿಯೋ ವೈರಲ್

ಈ ವಿಡಿಯೋ ಅನ್ನು ಟ್ವಿಟರ್​ನಲ್ಲಿ ಶುಭ್​ ಎನ್ನುವವರು ಜನವರಿ 2ರಂದು ಪೋಸ್ಟ್ ಮಾಡಿದ್ದಾರೆ.  ದೆಹಲಿಯ ವಿಶ್ವವಿದ್ಯಾಲಯದ ಕ್ಯಾಂಪಸ್​ ಬಳಿ ಇರುವ ಸುಧಾಮ ಟೀ ಸ್ಟಾಲ್​ ಬಳಿ ಈ ವಿಡಿಯೋ ಚಿತ್ರೀಕರಿಸಲಾಗಿದೆ. ಈತನಕ 1,36,000 ಜನರು ಈ ವಿಡಿಯೋ ನೋಡಿದ್ದಾರೆ. ನೂರಾರು ಜನರು ಪ್ರತಿಕ್ರಿಯಿಸಿದ್ದಾರೆ.

ಅರೆ ಪಾಪ ಅವನದು ತಪ್ಪಿಲ್ಲ. ಸುಧಾಮ ಚಹಾ ಅಷ್ಟೊಂದು ಚೆನ್ನಾಗಿದೆ ಎಂದರ್ಥ ಎಂದಿದ್ದಾರೆ ಒಬ್ಬರು. ಇದು ಚಹಾದ ಮಹಿಮೆ ಮತ್ತು ಶ್ರೇಷ್ಠತೆ ಎಂದಿದ್ಧಾರೆ ಮತ್ತೊಬ್ಬರು.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:06 pm, Thu, 5 January 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ