ನಡುರಸ್ತೆಯಲ್ಲಿ ಬಸ್​ ನಿಲ್ಲಿಸಿ ಚಹಾ ಕುಡಿಯಲು ಹೋಗಿದ್ದ ದೆಹಲಿ ಡ್ರೈವರ್ ವಿಡಿಯೋ ವೈರಲ್

Viral Video : ಡ್ರೈವರ್​ಗೆ ಚಹಾ ಕುಡಿಯಲೇಬೇಕೆಂದು ತೀವ್ರವಾಗಿ ಅನ್ನಿಸಿದೆ. ಹಿಂದೂಮುಂದೂ ನೋಡದೆ ದಟ್ಟಣೆಯಿಂದ ಕೂಡಿದ ರಸ್ತೆಯ ಮಧ್ಯೆ ಹೀಗೆ ಬಸ್​ ನಿಲ್ಲಿಸಿ ಇಳಿದುಬಿಟ್ಟಿದ್ಧಾರೆ. ಆಮೇಲೆ?

ನಡುರಸ್ತೆಯಲ್ಲಿ ಬಸ್​ ನಿಲ್ಲಿಸಿ ಚಹಾ ಕುಡಿಯಲು ಹೋಗಿದ್ದ ದೆಹಲಿ ಡ್ರೈವರ್ ವಿಡಿಯೋ ವೈರಲ್
ರಸ್ತೆ ಮಧ್ಯೆ ಬಸ್ ನಿಲ್ಲಿಸಿ ಚಹಾ ಕುಡಿಯಲು ಹೋಗಿದ್ದ ಬಸ್ ಡ್ರೈವರ್
Follow us
| Updated By: ಶ್ರೀದೇವಿ ಕಳಸದ

Updated on:Jan 05, 2023 | 3:06 PM

Viral Video: ಚಹಾ! ಅನೇಕರ ಚೈತನ್ಯದ ಮೂಲವೇ ಇದರಲ್ಲಿದೆ. ಮಳೆಗಾಲಕ್ಕೆ, ಚಳಿಗಾಲಕ್ಕೆ ಚಹಾ ಇಲ್ಲದೆ ಕೈಕಾಲಷ್ಟೇ ಅಲ್ಲ ತಲೆಯೂ ಓಡದು ಎಂಬಂಥ  ಸ್ಥಿತಿ ನಿರ್ಮಾಣವಾಗುತ್ತದೆ. ಈಗಲಂತೂ ಚಳಿಗಾಲ. ಬೆಚ್ಚಗೆ, ಹಿತವಾದ ಚಹಾವನ್ನು ಆಸ್ವಾದಿಸಬೇಕೆಂದು ಯಾರಿಗೂ ತೀವ್ರವಾಗಿ ಅನ್ನಿಸುತ್ತದೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ಗಮನಿಸಿ. ದೆಹಲಿಯ ಸಾರಿಗೆ ಸಂಸ್ಥೆಯ ಬಸ್ ಚಾಲಕರೊಬ್ಬರು ರಸ್ತೆಯ ಮಧ್ಯೆಯೇ ಬಸ್ ನಿಲ್ಲಿಸಿ ಚಹಾ ಕುಡಿಯಲು ಹೋಗಿದ್ದಾರೆ.

ಚಹಾ ಕುಡಿಯಲೇಬೇಕೆಂದು ಅವರಿಗೆ ತೀವ್ರವಾಗಿ ಅನ್ನಿಸಿದೆ. ದಟ್ಟಣೆಯಿಂದ ಕೂಡಿದ ರಸ್ತೆಯ ಮಧ್ಯೆ ಹೀಗೆ ಧೈರ್ಯದಿಂದ ಬಸ್​ ನಿಲ್ಲಿಸಿಬಿಟ್ಟಿದ್ದಾರೆ. ಮುಂದೆ ಏನಾಗಬೇಕೋ ಅದೇ ಆಗಿದೆ. ರಸ್ತೆ ಪೂರ್ತಿ ಜಾಮ್ ಆಗಿಬಿಟ್ಟಿದೆ. ಜನರು ಕೋಪದಿಂದ ಒಂದೇ ಸಮ ಹಾರ್ನ್​ ಮಾಡಿದ್ಧಾರೆ. ಆದರೂ ಡ್ರೈವರ್​ಗೆ ಚಹಾ ಕುಡಿಯುವುದು ಮುಖ್ಯ. ಚಹಾ ಅಂಗಡಿಗೆ ಹೋಗಿದ್ದಾರೆ. ಬೆನ್ನ ಹಿಂದೆ ನಡೆಯುತ್ತಿರುವುದೆಲ್ಲ ಕಿವಿಗೆ ತಲುಪುತ್ತಿದ್ದಂತೆ ತಪ್ಪಿನ ಅರಿವಾಗಿ ಕೈಯಲ್ಲಿ ಕಪ್​ ಹಿಡಿದುಕೊಂಡೇ ಬಸ್ಸಿನೆಡೆ ಓಡಿದ್ದಾರೆ.

ಇದನ್ನೂ ಓದಿ : ಸರ್ಕಸ್​ ನಡೆಯುತ್ತಿದ್ದಾಗ ಹುಲಿಯ ದಾಳಿಗೆ ಈಡಾದ ಇಟಾಲಿಯನ್​ ತರಬೇತುದಾರ; ವಿಡಿಯೋ ವೈರಲ್

ಈ ವಿಡಿಯೋ ಅನ್ನು ಟ್ವಿಟರ್​ನಲ್ಲಿ ಶುಭ್​ ಎನ್ನುವವರು ಜನವರಿ 2ರಂದು ಪೋಸ್ಟ್ ಮಾಡಿದ್ದಾರೆ.  ದೆಹಲಿಯ ವಿಶ್ವವಿದ್ಯಾಲಯದ ಕ್ಯಾಂಪಸ್​ ಬಳಿ ಇರುವ ಸುಧಾಮ ಟೀ ಸ್ಟಾಲ್​ ಬಳಿ ಈ ವಿಡಿಯೋ ಚಿತ್ರೀಕರಿಸಲಾಗಿದೆ. ಈತನಕ 1,36,000 ಜನರು ಈ ವಿಡಿಯೋ ನೋಡಿದ್ದಾರೆ. ನೂರಾರು ಜನರು ಪ್ರತಿಕ್ರಿಯಿಸಿದ್ದಾರೆ.

ಅರೆ ಪಾಪ ಅವನದು ತಪ್ಪಿಲ್ಲ. ಸುಧಾಮ ಚಹಾ ಅಷ್ಟೊಂದು ಚೆನ್ನಾಗಿದೆ ಎಂದರ್ಥ ಎಂದಿದ್ದಾರೆ ಒಬ್ಬರು. ಇದು ಚಹಾದ ಮಹಿಮೆ ಮತ್ತು ಶ್ರೇಷ್ಠತೆ ಎಂದಿದ್ಧಾರೆ ಮತ್ತೊಬ್ಬರು.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:06 pm, Thu, 5 January 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ