AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಗಲ್​ನ ಮಾಜಿ ಎಂಡಿ ಕ್ಯಾಬ್​ ಡ್ರೈವರ್​ಗೆ ಹಣ ಪಾವತಿಸಲು ಮರೆತಾಗ…

Cab Driver : ‘ಪರ್ವಾಗಿಲ್ಲ ಸರ್. ಮತ್ತೆ ಯಾವಾಗಲಾದರೂ ಬರುತ್ತೀರಲ್ಲ’ ಎಂದಿದ್ದಾನೆ. ಆದರೆ ನಾವು ಸ್ಥಳೀಯ ನಿವಾಸಿಗಳಲ್ಲ ಎಂದು ಅವನಿಗೆ ಗೊತ್ತಿತ್ತು, ಹಾಗೆಯೇ ಹಣ ಎಷ್ಟು ಎಂದು ಕೇಳಿದರೂ ಅವನು ಹೇಳಲೇ ಇಲ್ಲ. ನಂತರ...

ಗೂಗಲ್​ನ ಮಾಜಿ ಎಂಡಿ ಕ್ಯಾಬ್​ ಡ್ರೈವರ್​ಗೆ ಹಣ ಪಾವತಿಸಲು ಮರೆತಾಗ...
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 05, 2022 | 5:27 PM

Share

Viral Video : ಗೂಗಲ್​ನ ಮಾಜಿ ಎಂಡಿ ಪರ್ಮಿಂದರ್ ಸಿಂಗ್​ ದೆಹಲಿ ವಿಮಾನ ನಿಲ್ದಾಣಕ್ಕೆ ಕ್ಯಾಬ್​ನಲ್ಲಿ ಪ್ರಯಾಣಿಸಿದ್ದಾರೆ. ಆದರೆ ಕ್ಯಾಬ್​ ಡ್ರೈವರ್​ಗೆ ಹಣ ಪಾವತಿಸುವುದನ್ನೇ ಮರೆತಿದ್ದಾರೆ. ಇದ್ದಕ್ಕಿದ್ದಂತೆ ನೆನಪಾಗಿ ಹೇಗೆ ಹಣ ಪಾವತಿಸುವುದು ಎಂದು ವಾಪಸ್​ ಡ್ರೈವರ್​ಗೆ ಫೋನ್ ಮಾಡಿ ಕೇಳಿದಾಗ, ‘ಪರ್ವಾಗಿಲ್ಲ ಸರ್. ಮತ್ತೆ ಯಾವಾಗಲಾದರೂ ಬರುತ್ತೀರಲ್ಲ’ ಎಂದಿದ್ದಾನೆ. ಆದರೆ ನಾವು ಸ್ಥಳೀಯ ನಿವಾಸಿಗಳಲ್ಲ ಎಂದು ಅವನಿಗೆ ಗೊತ್ತಿತ್ತು, ಹಾಗೆಯೇ ಹಣ ಎಷ್ಟು ಎಂದು ಕೇಳಿದರೂ ಅವನು ಹೇಳಲೇ ಇಲ್ಲ. ಆದರೂ ನನಗೆ ಸುಮ್ಮನಿರಲಾಗಲಿಲ್ಲ, ಒಂದಿಷ್ಟು ಹಣ ಪಾವತಿಸಿದೆ. ಈ ಘಟನೆಯಿಂದ ಅರಿವಿಗೆ ಬಂದಿದ್ದೇನೆಂದರೆ ಇನ್ನೂ ವಿನಮ್ರತೆ, ವಿನಯಶೀಲತೆ ಜೀವಂತವಾಗಿದೆ ಎನ್ನುವುದು ಎಂದು ಟ್ವೀಟ್ ಮಾಡಿದ್ದಾರೆ ಪರ್ಮಿಂದರ್ ಸಿಂಗ್.

ಇದೇ ಟ್ವೀಟಿನ ಥ್ರೆಡ್​ನಲ್ಲಿ ಪ್ರತಿಕ್ರಿಯಿಸಿದ ಅವರು, ಡ್ರೈವರ್​ನ ವಿವರಗಳನ್ನು ಅನುಮತಿ ಇಲ್ಲದೆ ಹಂಚಿಕೊಳ್ಳಲಾರೆ. ಆದರೆ ದೆಹಲಿ ಸುತ್ತಮುತ್ತ ನೀವು ಒಳ್ಳೆಯ ಕ್ಯಾಬ್​ ಡ್ರೈವರ್​ನನ್ನು ಹುಡುಕುತ್ತಿದ್ದರೆ ದಯವಿಟ್ಟು ನನಗೆ ಮೆಸೇಜ್ ಮಾಡಿ ಎಂದಿದ್ದಾರೆ.

ಎರಡು ದಿನಗಳ ಹಿಂದೆ ಹಂಚಿಕೊಂಡ ಈ ಪೋಸ್ಟ್​ ಅನ್ನು ಸುಮಾರು 950 ಜನರು ಮೆಚ್ಚಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ. ‘ಭಾರತದಲ್ಲಿ ಪ್ರಯಾಣಿಸುವಾಗ ಅನೇಕ ಪ್ರಯಾಣಿಕರು ಉತ್ತಮವಾದ ಮತ್ತು ಕೆಟ್ಟ ಅನುಭವಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಆದರೆ ಇಂಥ ರೂಢಿಗತವಾದ ಅನುಭವಗಳನ್ನು ಮುರಿದು ಯೋಚಿಸುವಂತೆ ಕೂಡಿತ್ತು ಈ ಅನುಭವ’ ಎಂದಿದ್ದಾರೆ ಎಲೆನ್ ಕೆರಿಯರ್​ ಇನ್​ಸ್ಟಿಟ್ಯೂಟ್​ನ ನಿರ್ದೇಶಕ ನವೀನ್ ಮಹೇಶ್ವರಿ.

ಇದನ್ನೂ ಓದಿ : ಪ್ರಯಾಣಿಕರೊಂದಿಗೆ ಸಂಸ್ಕೃತದಲ್ಲಿ ಮಾತನಾಡುವ ಕ್ಯಾಬ್​ ಡ್ರೈವರ್​, ವಿಡಿಯೋ ವೈರಲ್

ದೆಹಲಿಯಲ್ಲಿ ಕ್ಯಾಬ್​ ಡ್ರೈವರ್​ಗಳು ಹೇಗೆ ಸುಲಿಗೆ ಮಾಡುತ್ತಾರೆ ಎಂದು ಅನುಭವಿಸಿದವರಿಗೇ ಗೊತ್ತು. ಧನ್ಯವಾದ ನಾನು ನಿಮಗೆ ಮೆಸೇಜ್ ಮಾಡಿ ಆ ಡ್ರೈವರ್ ನಂಬರ್ ಪಡೆದುಕೊಳ್ಳುತ್ತೇನೆ ಎಂದಿದ್ದಾರೆ ಮತ್ತೊಬ್ಬರು. ಸರಳ ಮನಸಿನವರು ನಿಜಕ್ಕೂ ಘನತೆಯುಳ್ಳ ಮನುಷ್ಯರು ಎಂದಿದ್ದಾರೆ ಇನ್ನೊಬ್ಬರು.

ನಿಮ್ಮ ಅಭಿಪ್ರಾಯವೇನು ಈ ವಿಷಯವಾಗಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:26 pm, Mon, 5 December 22

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?