AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಗಲ್​ನ ಮಾಜಿ ಎಂಡಿ ಕ್ಯಾಬ್​ ಡ್ರೈವರ್​ಗೆ ಹಣ ಪಾವತಿಸಲು ಮರೆತಾಗ…

Cab Driver : ‘ಪರ್ವಾಗಿಲ್ಲ ಸರ್. ಮತ್ತೆ ಯಾವಾಗಲಾದರೂ ಬರುತ್ತೀರಲ್ಲ’ ಎಂದಿದ್ದಾನೆ. ಆದರೆ ನಾವು ಸ್ಥಳೀಯ ನಿವಾಸಿಗಳಲ್ಲ ಎಂದು ಅವನಿಗೆ ಗೊತ್ತಿತ್ತು, ಹಾಗೆಯೇ ಹಣ ಎಷ್ಟು ಎಂದು ಕೇಳಿದರೂ ಅವನು ಹೇಳಲೇ ಇಲ್ಲ. ನಂತರ...

ಗೂಗಲ್​ನ ಮಾಜಿ ಎಂಡಿ ಕ್ಯಾಬ್​ ಡ್ರೈವರ್​ಗೆ ಹಣ ಪಾವತಿಸಲು ಮರೆತಾಗ...
ಪ್ರಾತಿನಿಧಿಕ ಚಿತ್ರ
TV9 Web
| Updated By: ಶ್ರೀದೇವಿ ಕಳಸದ|

Updated on:Dec 05, 2022 | 5:27 PM

Share

Viral Video : ಗೂಗಲ್​ನ ಮಾಜಿ ಎಂಡಿ ಪರ್ಮಿಂದರ್ ಸಿಂಗ್​ ದೆಹಲಿ ವಿಮಾನ ನಿಲ್ದಾಣಕ್ಕೆ ಕ್ಯಾಬ್​ನಲ್ಲಿ ಪ್ರಯಾಣಿಸಿದ್ದಾರೆ. ಆದರೆ ಕ್ಯಾಬ್​ ಡ್ರೈವರ್​ಗೆ ಹಣ ಪಾವತಿಸುವುದನ್ನೇ ಮರೆತಿದ್ದಾರೆ. ಇದ್ದಕ್ಕಿದ್ದಂತೆ ನೆನಪಾಗಿ ಹೇಗೆ ಹಣ ಪಾವತಿಸುವುದು ಎಂದು ವಾಪಸ್​ ಡ್ರೈವರ್​ಗೆ ಫೋನ್ ಮಾಡಿ ಕೇಳಿದಾಗ, ‘ಪರ್ವಾಗಿಲ್ಲ ಸರ್. ಮತ್ತೆ ಯಾವಾಗಲಾದರೂ ಬರುತ್ತೀರಲ್ಲ’ ಎಂದಿದ್ದಾನೆ. ಆದರೆ ನಾವು ಸ್ಥಳೀಯ ನಿವಾಸಿಗಳಲ್ಲ ಎಂದು ಅವನಿಗೆ ಗೊತ್ತಿತ್ತು, ಹಾಗೆಯೇ ಹಣ ಎಷ್ಟು ಎಂದು ಕೇಳಿದರೂ ಅವನು ಹೇಳಲೇ ಇಲ್ಲ. ಆದರೂ ನನಗೆ ಸುಮ್ಮನಿರಲಾಗಲಿಲ್ಲ, ಒಂದಿಷ್ಟು ಹಣ ಪಾವತಿಸಿದೆ. ಈ ಘಟನೆಯಿಂದ ಅರಿವಿಗೆ ಬಂದಿದ್ದೇನೆಂದರೆ ಇನ್ನೂ ವಿನಮ್ರತೆ, ವಿನಯಶೀಲತೆ ಜೀವಂತವಾಗಿದೆ ಎನ್ನುವುದು ಎಂದು ಟ್ವೀಟ್ ಮಾಡಿದ್ದಾರೆ ಪರ್ಮಿಂದರ್ ಸಿಂಗ್.

ಇದೇ ಟ್ವೀಟಿನ ಥ್ರೆಡ್​ನಲ್ಲಿ ಪ್ರತಿಕ್ರಿಯಿಸಿದ ಅವರು, ಡ್ರೈವರ್​ನ ವಿವರಗಳನ್ನು ಅನುಮತಿ ಇಲ್ಲದೆ ಹಂಚಿಕೊಳ್ಳಲಾರೆ. ಆದರೆ ದೆಹಲಿ ಸುತ್ತಮುತ್ತ ನೀವು ಒಳ್ಳೆಯ ಕ್ಯಾಬ್​ ಡ್ರೈವರ್​ನನ್ನು ಹುಡುಕುತ್ತಿದ್ದರೆ ದಯವಿಟ್ಟು ನನಗೆ ಮೆಸೇಜ್ ಮಾಡಿ ಎಂದಿದ್ದಾರೆ.

ಎರಡು ದಿನಗಳ ಹಿಂದೆ ಹಂಚಿಕೊಂಡ ಈ ಪೋಸ್ಟ್​ ಅನ್ನು ಸುಮಾರು 950 ಜನರು ಮೆಚ್ಚಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ. ‘ಭಾರತದಲ್ಲಿ ಪ್ರಯಾಣಿಸುವಾಗ ಅನೇಕ ಪ್ರಯಾಣಿಕರು ಉತ್ತಮವಾದ ಮತ್ತು ಕೆಟ್ಟ ಅನುಭವಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಆದರೆ ಇಂಥ ರೂಢಿಗತವಾದ ಅನುಭವಗಳನ್ನು ಮುರಿದು ಯೋಚಿಸುವಂತೆ ಕೂಡಿತ್ತು ಈ ಅನುಭವ’ ಎಂದಿದ್ದಾರೆ ಎಲೆನ್ ಕೆರಿಯರ್​ ಇನ್​ಸ್ಟಿಟ್ಯೂಟ್​ನ ನಿರ್ದೇಶಕ ನವೀನ್ ಮಹೇಶ್ವರಿ.

ಇದನ್ನೂ ಓದಿ : ಪ್ರಯಾಣಿಕರೊಂದಿಗೆ ಸಂಸ್ಕೃತದಲ್ಲಿ ಮಾತನಾಡುವ ಕ್ಯಾಬ್​ ಡ್ರೈವರ್​, ವಿಡಿಯೋ ವೈರಲ್

ದೆಹಲಿಯಲ್ಲಿ ಕ್ಯಾಬ್​ ಡ್ರೈವರ್​ಗಳು ಹೇಗೆ ಸುಲಿಗೆ ಮಾಡುತ್ತಾರೆ ಎಂದು ಅನುಭವಿಸಿದವರಿಗೇ ಗೊತ್ತು. ಧನ್ಯವಾದ ನಾನು ನಿಮಗೆ ಮೆಸೇಜ್ ಮಾಡಿ ಆ ಡ್ರೈವರ್ ನಂಬರ್ ಪಡೆದುಕೊಳ್ಳುತ್ತೇನೆ ಎಂದಿದ್ದಾರೆ ಮತ್ತೊಬ್ಬರು. ಸರಳ ಮನಸಿನವರು ನಿಜಕ್ಕೂ ಘನತೆಯುಳ್ಳ ಮನುಷ್ಯರು ಎಂದಿದ್ದಾರೆ ಇನ್ನೊಬ್ಬರು.

ನಿಮ್ಮ ಅಭಿಪ್ರಾಯವೇನು ಈ ವಿಷಯವಾಗಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:26 pm, Mon, 5 December 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?