AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವ್ಯಾತ್ಮಕ ಶೈಲಿಯಲ್ಲಿ ಪ್ರಯಾಣಿಕರನ್ನು ಸ್ವಾಗತಿಸಿದ ಪೈಲಟ್ ವಿಡಿಯೊ ವೈರಲ್

Viral Video of Pilot : ಸೌಂದರ್ಯವೂ ಬುದ್ಧಿಯೂ ಇಲ್ಲಿ ಮೇಳೈಸಿದೆ. ಯಾಕೆ ಬಾಲಿವುಡ್​ಗೆ ಬರಬಾರದು ಎನ್ನುತ್ತಿದ್ದಾರೆ ನೆಟ್ಟಿಗರು. ಈ ವಿಡಿಯೋ ನೋಡಿದ ನೀವೇನಂತೀರಿ?

ಕಾವ್ಯಾತ್ಮಕ ಶೈಲಿಯಲ್ಲಿ ಪ್ರಯಾಣಿಕರನ್ನು ಸ್ವಾಗತಿಸಿದ ಪೈಲಟ್ ವಿಡಿಯೊ ವೈರಲ್
ಸ್ಪೈಸ್​ಜೆಟ್​ ಪೈಲಟ್​ ಕಾವ್ಯಾತ್ಮಕ ಶೈಲಿಯಲ್ಲಿ ಪ್ರಯಾಣಿಕರನ್ನು ಸ್ವಾಗತಿಸುತ್ತಿರುವುದು
TV9 Web
| Edited By: |

Updated on:Dec 31, 2022 | 11:41 AM

Share

Viral Video : ವಿಮಾನ ಪ್ರಯಾಣಕ್ಕೆ ಸಂಬಂಧಿಸಿದಂತೆ ದಿನಕ್ಕೆ ಒಂದಿಲ್ಲಾ ಒಂದು ವಿಡಿಯೋ ವೈರಲ್ ಆಗುತ್ತಲೇ ಇರುತ್ತವೆ. ಈ ದಿನ ವೈರಲ್ ಆಗುತ್ತಿರುವ ವಿಡಿಯೋ ವಿಭಿನ್ನವಾಗಿದೆ. ವಾರಾಂತ್ಯದ ಜೊತೆಗೆ ವರ್ಷಾಂತ್ಯದ ಮೂಡ್​ನಲ್ಲಿರುವ ನಿಮಗೆ ಈ ವಿಡಿಯೋ ಖಂಡಿತ ಮನಸ್ಸನ್ನು ಉಲ್ಲಸಿತಗೊಳಿಸುತ್ತದೆ. ಪೈಲಟ್​ ತನ್ನ ಪ್ರಯಾಣಿಕರನ್ನು ವಿಮಾನಪ್ರಯಾಣಕ್ಕೆ ಸ್ವಾಗತಿಸುವ ಪರಿಯನ್ನು ಗಮನಿಸಿ. ಕಾವ್ಯಾತ್ಮಕ ಶೈಲಿಯಲ್ಲಿ ಘೋಷಣೆಯನ್ನು ಪ್ರಸ್ತಾಪಿಸುತ್ತಾನೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಸ್ಪೈಸ್ ಜೆಟ್ ಪೈಲಟ್ ಮೋಹಿತ್ ಕುಮಾರ್ ತಮ್ಮ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಅವರು ಪ್ರಯಾಣಿಕರನ್ನು ಹಿಂದಿಯಲ್ಲಿ ಕವಿತಾ ಶೈಲಿಯಲ್ಲಿ ಸ್ವಾಗತಿಸಿ ತಮ್ಮ ಸಹ ಪೈಲಟ್ ಮತ್ತು ವಿಮಾನ ಸಿಬ್ಬಂದಿಯ ಬಗ್ಗೆ ತಿಳಿಸುತ್ತಾ ಇವರೆಲ್ಲರು ನಿಮ್ಮ ಸಹಾಯ ಮತ್ತು ಕಾಳಜಿ ತೆಗೆದುಕೊಳ್ಳಲು ಸಿದ್ಧರಾಗಿದ್ದಾರೆ ಎಂದು ಹೇಳುತ್ತಾರೆ.

ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ ಅನ್ನು ಈತನಕ ಒಂದು ಲಕ್ಷಕಕ್ಕೂ ಹೆಚ್ಚು ಜನರು ನೋಡಿದ್ಧಾರೆ. 10,000ಕ್ಕೂ ಹೆಚ್ಚು ಜನರು ಮೆಚ್ಚಿದ್ದಾರೆ. ನೂರಾರು ಜನರು ಇವರ ಕಾವ್ಯಾತ್ಮಕ ಶೈಲಿಯ ಘೋಷಣೆಯನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ : Viral Video: ಮೊದಲ ಬಾರಿ ಅಮ್ಮನ ಪಕ್ಕ ಕುಳಿತು ವಿಮಾನ ಹಾರಿಸಿದ ಮಗ; ಪೈಲಟ್ ವಿಡಿಯೋ ವೈರಲ್

ನೀವು ಬಾಲಿವುಡ್​ಗೆ ಯಾಕೆ ಸೇರಬಾರದು ನಿಮಗೆ ಕಲೆಯ ಬಗ್ಗೆ ಒಂದು ಅಂದಾಜಿದೆ ನೋಡಲು ಸುಂದರವಾಗಿದ್ದೀರಿ ಎಂದಿದ್ದಾರೆ ಒಬ್ಬರು. ನೀವು ನೋಡಲೂ ಬಹಳ ಮುದ್ಧಾಗಿದ್ದೀರಿ ಹಾಗೆಯೇ ನಿಮ್ಮ ಧ್ವನಿಯೂ ಎಂದಿದ್ದಾರೆ ಮತ್ತೊಬ್ಬರು. ಸೌಂದರ್ಯ ಮತ್ತು ಬುದ್ಧಿವಂತಿಕೆಯ ಸಮಾಗಮ ಎಂದಿದ್ದಾರೆ ಮಗದೊಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:35 am, Sat, 31 December 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ