AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಈ ಪುಟ್ಟ ಪೋರನ ಪ್ರಕಾರ ಚಂದ್ರನಿಗಿಂತ ದೆಹಲಿಯೇ ಬಲು ದೂರವಂತೆ, ಅದು ಹೇಗೆಂದು ಅವನ ಮಾತಲ್ಲೇ ಕೇಳಿ

ಸೋಷಿಯಲ್ ಮೀಡಿಯಾದಲ್ಲಿ ಪ್ರತಿನಿತ್ಯ ಅನೇಕಾರು ವಿಡಿಯೋಗಳು ಹರಿದಾಡುತ್ತವೆ. ಅವುಗಳಲ್ಲಿ ಕೆಲವು ದೃಶ್ಯಗಳು ನಮ್ಮನ್ನು ಭಾವುಕರನ್ನಗಿಸಿದರೆ, ಇನ್ನೂ ಕೆಲವು ದೃಶ್ಯಗಳು ಹೊಟ್ಟೆ ಹುಣ್ಣಾಗಿಸುವಂತೆ ನಗಿಸುತ್ತವೆ. ಸದ್ಯ ಅಂತಹದೊಂದು ವಿಡಿಯೋ ಇದೀಗ ವೈರಲ್ ಆಗಿದ್ದು, ಚಂದ್ರ ಮತ್ತು ದೆಹಲಿ ಇವೆರಡರಲ್ಲಿ ಯಾವುದು ತುಂಬಾನೇ ದೂರ ಎಂದು ಮೇಷ್ಟ್ರು ಕೇಳಿದ ಪ್ರಶ್ನೆಗೆ ಪುಟ್ಟ ಪೋರನೊಬ್ಬ ತಮಾಷೆಯ ಉತ್ತರವನ್ನು ನೀಡಿದ್ದಾನೆ. ಈ ಬಾಲಕ ನೀಡಿದ ತರ್ಕ ಬದ್ಧ ಉತ್ತರಕ್ಕೆ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ.

Video: ಈ ಪುಟ್ಟ ಪೋರನ ಪ್ರಕಾರ ಚಂದ್ರನಿಗಿಂತ ದೆಹಲಿಯೇ ಬಲು ದೂರವಂತೆ, ಅದು ಹೇಗೆಂದು ಅವನ ಮಾತಲ್ಲೇ ಕೇಳಿ
ವೈರಲ್​​​ ವಿಡಿಯೋ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Aug 15, 2024 | 5:57 PM

Share

ಪುಟ್ಟ ಮಕ್ಕಳ ತರ್ಲೆ ಮಾತುಗಳನ್ನು ಕೇಳೋಕೆ ಬಲು ಚೆಂದ. ಪುಟಾಣಿಗಳ ತೊದಲು ಮಾತುಗಳು, ತಮಾಷೆಯ ಉತ್ತರಗಳು ಇವೆಲ್ಲಾ ನಮ್ಮನ್ನು ಹೊಟ್ಟೆ ಹುನ್ನಾಗಿಸುವಂತೆ ನಗಿಸುತ್ತವೆ. ಇದೀಗ ಅಂತಹದ್ದೇ ತಮಾಷೆಯ ವೀಡಿಯೊವೊಂದು ವೈರಲ್ ಆಗಿದ್ದು, ಶಾಲೆಯಲ್ಲಿ ಮೇಷ್ಟ್ರು ನಮಗೆ ದೆಹಲಿ ದೂರವೇ ಅಥವಾ ಚಂದ್ರ ದೂರವೇ ಎಂದು ಕೇಳಿದ ಪ್ರಶ್ನೆಗೆ ಬಾಲಕನೊಬ್ಬ ಚಂದ್ರನಿಗಿಂತ ದೆಹಲಿಯೇ ದೂರವೆಂದು ತಮಾಷೆಯ ಉತ್ತರವನ್ನು ನೀಡಿದ್ದಾನೆ. ಈ ಪುಟ್ಟ ಪೋರನ ಸ್ಮಾರ್ಟ್ ಉತ್ತರಕ್ಕೆ ನೆಟ್ಟಿಗರಂತೂ ಫುಲ್ ಫಿದಾ ಆಗಿದ್ದಾರೆ.

ಈ ಕುರಿತ ಪೋಸ್ಟ್ ಒಂದನ್ನು ದೀಪಕ್ (Putkuuu) ಎಂಬವರು ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಶಾಲೆಯ ಮೇಷ್ಟ್ರು ಪುಟ್ಟ ಹುಡುಗನ ಬಳಿ ಮಗು ದೆಹಲಿ ಮತ್ತು ಚಂದ್ರ ಇವೆರಡರಲ್ಲಿ ಯಾವುದು ನಮಗೆ ತುಂಬಾ ದೂರ ಇದೆ ಎಂದು ಪ್ರಶ್ನೆ ಕೇಳುವ ದೃಶ್ಯವನ್ನು ಕಾಣಬಹುದು. ಈ ಪ್ರಶ್ನೆಗೆ ಥಟ್ಟನೆ ಉತ್ತರಿಸಿದ ಬಾಲಕ ಚಂದ್ರನಿಗಿಂತ ದೆಹಲಿಯೇ ದೂರ ಎಂದು ಹೇಳುತ್ತಾನೆ. ಅದು ಹೇಗೆ ಸಾಧ್ಯ ಎಂದು ಮೇಷ್ಟ್ರು ಮರು ಪ್ರಶ್ನಿಸಿದಾಗ ಚಂದ್ರನನ್ನು ಇಲ್ಲೇ ನಿಂತು ನಾವು ನೋಡಬಹುದು, ಆದ್ರೆ ದೆಹಲಿಯನ್ನು ನೋಡಲು ಸಾಧ್ಯವಿಲ್ಲ ಅಲ್ವಾ ಎಂಬ ಉತ್ತರವನ್ನು ನೀಡುತ್ತಾನೆ.

ಇದನ್ನೂ ಓದಿ: ಸ್ವಾತಂತ್ರೋತ್ಸವದ ಈ ಸುದಿನದಂದು ಗಗನಯಾನ ಕಾರ್ಯಕ್ರಮವನ್ನು ಪ್ರದರ್ಶಿಸಿದ ಇಸ್ರೋ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಆಗಸ್ಟ್ 14 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ 18 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ಏನ್ ಲಾಜಿಕ್ ಗುರು ನಿಂದೂ’ ಎಂಬ ತಮಾಷೆಯ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ‘ತುಂಬಾ ಬುದ್ದಿವಂತ, ಸರಿಯಾದ ಉತ್ತರವನ್ನೇ ನೀಡಿದ್ದಾನೆ’ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು