Video: ಈ ಪುಟ್ಟ ಪೋರನ ಪ್ರಕಾರ ಚಂದ್ರನಿಗಿಂತ ದೆಹಲಿಯೇ ಬಲು ದೂರವಂತೆ, ಅದು ಹೇಗೆಂದು ಅವನ ಮಾತಲ್ಲೇ ಕೇಳಿ

ಸೋಷಿಯಲ್ ಮೀಡಿಯಾದಲ್ಲಿ ಪ್ರತಿನಿತ್ಯ ಅನೇಕಾರು ವಿಡಿಯೋಗಳು ಹರಿದಾಡುತ್ತವೆ. ಅವುಗಳಲ್ಲಿ ಕೆಲವು ದೃಶ್ಯಗಳು ನಮ್ಮನ್ನು ಭಾವುಕರನ್ನಗಿಸಿದರೆ, ಇನ್ನೂ ಕೆಲವು ದೃಶ್ಯಗಳು ಹೊಟ್ಟೆ ಹುಣ್ಣಾಗಿಸುವಂತೆ ನಗಿಸುತ್ತವೆ. ಸದ್ಯ ಅಂತಹದೊಂದು ವಿಡಿಯೋ ಇದೀಗ ವೈರಲ್ ಆಗಿದ್ದು, ಚಂದ್ರ ಮತ್ತು ದೆಹಲಿ ಇವೆರಡರಲ್ಲಿ ಯಾವುದು ತುಂಬಾನೇ ದೂರ ಎಂದು ಮೇಷ್ಟ್ರು ಕೇಳಿದ ಪ್ರಶ್ನೆಗೆ ಪುಟ್ಟ ಪೋರನೊಬ್ಬ ತಮಾಷೆಯ ಉತ್ತರವನ್ನು ನೀಡಿದ್ದಾನೆ. ಈ ಬಾಲಕ ನೀಡಿದ ತರ್ಕ ಬದ್ಧ ಉತ್ತರಕ್ಕೆ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ.

Video: ಈ ಪುಟ್ಟ ಪೋರನ ಪ್ರಕಾರ ಚಂದ್ರನಿಗಿಂತ ದೆಹಲಿಯೇ ಬಲು ದೂರವಂತೆ, ಅದು ಹೇಗೆಂದು ಅವನ ಮಾತಲ್ಲೇ ಕೇಳಿ
ವೈರಲ್​​​ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 15, 2024 | 5:57 PM

ಪುಟ್ಟ ಮಕ್ಕಳ ತರ್ಲೆ ಮಾತುಗಳನ್ನು ಕೇಳೋಕೆ ಬಲು ಚೆಂದ. ಪುಟಾಣಿಗಳ ತೊದಲು ಮಾತುಗಳು, ತಮಾಷೆಯ ಉತ್ತರಗಳು ಇವೆಲ್ಲಾ ನಮ್ಮನ್ನು ಹೊಟ್ಟೆ ಹುನ್ನಾಗಿಸುವಂತೆ ನಗಿಸುತ್ತವೆ. ಇದೀಗ ಅಂತಹದ್ದೇ ತಮಾಷೆಯ ವೀಡಿಯೊವೊಂದು ವೈರಲ್ ಆಗಿದ್ದು, ಶಾಲೆಯಲ್ಲಿ ಮೇಷ್ಟ್ರು ನಮಗೆ ದೆಹಲಿ ದೂರವೇ ಅಥವಾ ಚಂದ್ರ ದೂರವೇ ಎಂದು ಕೇಳಿದ ಪ್ರಶ್ನೆಗೆ ಬಾಲಕನೊಬ್ಬ ಚಂದ್ರನಿಗಿಂತ ದೆಹಲಿಯೇ ದೂರವೆಂದು ತಮಾಷೆಯ ಉತ್ತರವನ್ನು ನೀಡಿದ್ದಾನೆ. ಈ ಪುಟ್ಟ ಪೋರನ ಸ್ಮಾರ್ಟ್ ಉತ್ತರಕ್ಕೆ ನೆಟ್ಟಿಗರಂತೂ ಫುಲ್ ಫಿದಾ ಆಗಿದ್ದಾರೆ.

ಈ ಕುರಿತ ಪೋಸ್ಟ್ ಒಂದನ್ನು ದೀಪಕ್ (Putkuuu) ಎಂಬವರು ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಶಾಲೆಯ ಮೇಷ್ಟ್ರು ಪುಟ್ಟ ಹುಡುಗನ ಬಳಿ ಮಗು ದೆಹಲಿ ಮತ್ತು ಚಂದ್ರ ಇವೆರಡರಲ್ಲಿ ಯಾವುದು ನಮಗೆ ತುಂಬಾ ದೂರ ಇದೆ ಎಂದು ಪ್ರಶ್ನೆ ಕೇಳುವ ದೃಶ್ಯವನ್ನು ಕಾಣಬಹುದು. ಈ ಪ್ರಶ್ನೆಗೆ ಥಟ್ಟನೆ ಉತ್ತರಿಸಿದ ಬಾಲಕ ಚಂದ್ರನಿಗಿಂತ ದೆಹಲಿಯೇ ದೂರ ಎಂದು ಹೇಳುತ್ತಾನೆ. ಅದು ಹೇಗೆ ಸಾಧ್ಯ ಎಂದು ಮೇಷ್ಟ್ರು ಮರು ಪ್ರಶ್ನಿಸಿದಾಗ ಚಂದ್ರನನ್ನು ಇಲ್ಲೇ ನಿಂತು ನಾವು ನೋಡಬಹುದು, ಆದ್ರೆ ದೆಹಲಿಯನ್ನು ನೋಡಲು ಸಾಧ್ಯವಿಲ್ಲ ಅಲ್ವಾ ಎಂಬ ಉತ್ತರವನ್ನು ನೀಡುತ್ತಾನೆ.

ಇದನ್ನೂ ಓದಿ: ಸ್ವಾತಂತ್ರೋತ್ಸವದ ಈ ಸುದಿನದಂದು ಗಗನಯಾನ ಕಾರ್ಯಕ್ರಮವನ್ನು ಪ್ರದರ್ಶಿಸಿದ ಇಸ್ರೋ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಆಗಸ್ಟ್ 14 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ 18 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ಏನ್ ಲಾಜಿಕ್ ಗುರು ನಿಂದೂ’ ಎಂಬ ತಮಾಷೆಯ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ‘ತುಂಬಾ ಬುದ್ದಿವಂತ, ಸರಿಯಾದ ಉತ್ತರವನ್ನೇ ನೀಡಿದ್ದಾನೆ’ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್