AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಆ ಸಂಭಾಜಿ ಮಹರಾಜ ಯಾರು? ಈ ಭೂಮಿ ನಿಜಾಮರಿಗೆ ಸೇರಿದ್ದು; ಮುಸ್ಲಿಂ ಮಹಿಳೆಯ ವಿವಾದಾತ್ಮಕ ಹೇಳಿಕೆ

ಇಲ್ಲೊಂದು ವಿಡಿಯೋ ವೈರಲ್‌ ಆಗಿದ್ದು, ವಿಧಾನಸಭೆ ಚುನಾವಣೆಯ ನಿಮಿತ್ತ ಮಹಾರಾಷ್ಟ್ರದಲ್ಲಿ ನಡೆದ ಓವೈಸಿ ರ‍್ಯಾಲಿಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಇದು ಔರಂಗಬಾದ್‌ ನಗರ ಇದರ ಹೆಸರನ್ನು ಸಂಭಾಜಿ ನಗರ ಎಂದು ಬದಲಾಯಿಸಲು ನೀವ್ಯಾರು? ಈ ಭೂಮಿ ನಿಜಾಮರಿಗೆ ಸೇರಿದ್ದು ಎಂದು ತನ್ನ ಭಾಷಣದಲ್ಲಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು, ಮಹಿಳೆಯ ಈ ಮಾತಿಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

Viral: ಆ ಸಂಭಾಜಿ ಮಹರಾಜ ಯಾರು? ಈ ಭೂಮಿ ನಿಜಾಮರಿಗೆ ಸೇರಿದ್ದು; ಮುಸ್ಲಿಂ ಮಹಿಳೆಯ ವಿವಾದಾತ್ಮಕ ಹೇಳಿಕೆ
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 08, 2024 | 3:08 PM

ನವೆಂಬರ್‌ 20 ರಂದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮಹಾರಾಷ್ಟ್ರದಲ್ಲಿ ರಾಜಕೀಯ ಹೈಡ್ರಾಮವೂ ಜೋರಾಗಿದೆ. ಜೊತೆಗೆ ರಾಜಕೀಯ ಪಕ್ಷಗಳು ಭರ್ಜರಿ ಚುನಾವಣಾ ಪ್ರಚಾರದಲ್ಲೂ ತೊಡಗಿವೆ. ಇದೀಗ ಒವೈಸಿ ಪ್ರಚಾರ ರ‍್ಯಾಲಿಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು, ಇದು ಔರಂಗಬಾದ್‌ ನಗರ ಇದರ ಹೆಸರನ್ನು ಸಂಭಾಜಿ ನಗರ ಎಂದು ಬದಲಾಯಿಸಲು ನೀವ್ಯಾರು? ಈ ಭೂಮಿ ನಿಜಾಮರಿಗೆ ಸೇರಿದ್ದು ಎಂದು ತನ್ನ ಭಾಷಣದಲ್ಲಿ ಕಿಡಿ ಕಾರಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದ್ದು, ಮಹಿಳೆಯ ಈ ಹೇಳಿಕೆಗೆ ನೆಟ್ಟಿಗರು ಫುಲ್‌ ಗರಂ ಆಗಿದ್ದಾರೆ.

ಮಹಾರಾಷ್ಟ್ರದ ಸಂಭಾಜಿ ನಗರದಲ್ಲಿ ಎಐಎಂಐಎಂ ಶಾಸಕ ಅಕ್ಬರುದ್ದೀನ್‌ ಓವೈಸಿ ಅವರ ಚುನಾವಣಾ ರ‍್ಯಾಲಿಯಲ್ಲಿ ಭಾಷಣ ಮಾಡುವ ಸಂದರ್ಭದಲ್ಲಿ ಮಹಿಳೆಯೊಬ್ಬರು ಇದು ಸಂಭಾಜಿ ನಗರ ಅಲ್ಲ, ಇದು ಔರಂಗಬಾದ್‌ ನಗರ, ಈ ಭೂಮಿ ನಿಜಾಮರಿಗೆ ಮಾತ್ರ ಸೇರಿದ್ದು ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಈ ಕುರಿತ ವಿಡಿಯೋವನ್ನು MeghUpdates ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಸಂಭಾಜಿ ಮಹಾರಾಜರು ಯಾರು? ಔರಂಗಬಾದ್‌ನ ಹೆಸರನ್ನು ಬದಲಾಯಿಸಲು ನೀವು ಯಾರು ಈ ಭೂಮಿ ನಿಜಾಮರದ್ದು; ಮಹರಾಷ್ಟ್ರದ ಓವೈಸಿ ರ‍್ಯಾಲಿಯಲ್ಲಿ ಹೇಳಿಕೆ ನೀಡಿದ ಮುಸ್ಲಿಂ ಮಹಿಳೆ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ. ವೈರಲ್‌ ವಿಡಿಯೋದಲ್ಲಿ ಸಂಭಾಜಿ ಮಹರಾಜ ಯಾರು? ಜೌರಂಗಬಾದ್‌ ಹೆಸರನ್ನು ಬದಲಾಯಿಸಲು ನೀವು ಯಾರು? ಬಂಜರು ನಗರವಾಗಿದ್ದ ಈ ಭೂಮಿಯನ್ನು ಅಭಿವೃದ್ಧಿ ಮಾಡಿದವರೇ ಮಲಿಕ್‌ ಅಂಬರ್.‌ ನೀವು ಇತಿಹಾಸವನ್ನು ಹೇಗೆ ಬದಲಾಯಿಸುತ್ತೀರಿ? ಈ ಭೂಮಿ ನಿಜಾಮರದ್ದು ಎಂದು ಮಹಿಳೆಯೊಬ್ಬರು ಭಾಷಣದಲ್ಲಿ ಕಿರುಚಾಡುತ್ತಾ ವಿವಾದಾತ್ಮಕ ಹೇಳಿಕೆನ್ನು ನೀಡುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಅಪಹರಣಕಾರರಿಂದ 10 ವರ್ಷದ ಬಾಲಕಿಯನ್ನು ಕಾಪಾಡಿದ ಬೀದಿ ನಾಯಿಗಳು

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ವಿಡಿಯೋ 2.3 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಈ ಭೂಮಿ ಹಿಂದೂಸ್ಥಾನಕ್ಕೆ ಸೇರಿದ್ದು ಎಂಬ ಇತಿಹಾಸವನ್ನು ಮೊದಲು ಈಕೆ ತಿಳಿಯಲಿʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼನಮ್ಮಲ್ಲಿ ಔರಂಗಬಾದ್‌ ಎಂದು ಕರೆಯಲ್ಪಡುವ ಯಾವುದೇ ನಗರಲಿಲ್ಲʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಸರಿಯಾಗಿ ಮುಖ ತೋರಿಸಲು ಸಾಧ್ಯವಾಗದ ಜನರ ಹೇಳಿಕೆಗೆ ಇಲ್ಲಿ ಬೆಲೆ ಇಲ್ಲʼ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ