AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಲುಂಗೀಧಾರಿ ಬೇರ್​ ಗ್ರಿಲ್ಸ್​; ‘ಜಂಗಲ್​ ಸರ್ವೈವರ್‘ನ ಮುಂದಿನ ಅತಿಥಿ ಯಾರು?

Jungle Survival : ನೀಲ್ ಆಲಿವರ್, ಅನ್ನೇಕಾ ರೈಸ್​, ರಿಚರ್ಡ್​ ಬ್ರ್ಯಾನ್​ಸನ್​, ವಿರಾಟ ಕೊಹ್ಲಿ, ಅಕ್ಷಯ್​ ಕುಮಾರ್, ವಿಕ್ಕಿ ಕೌಶಲ್​, ರಣವೀರ್​ ಸಿಂಗ್​, ತಲೈವಾ ರಜನೀಕಾಂತ... ಮುಂತಾದವರ ಹೆಸರುಗಳ ಹೊಳೆಯನ್ನೇ ಹರಿಸಿದ್ದಾರೆ ನೆಟ್ಟಿಗರು.

Viral: ಲುಂಗೀಧಾರಿ ಬೇರ್​ ಗ್ರಿಲ್ಸ್​; ‘ಜಂಗಲ್​ ಸರ್ವೈವರ್‘ನ ಮುಂದಿನ ಅತಿಥಿ ಯಾರು?
ಜಂಗಲ್​ ಸರ್ವೈವರ್ ರಿಯಾಲಿಟಿ ಷೋನ ನಿರೂಪಕ, ಸಾಹಸಿ ಬೇರ್ ಗ್ರಿಲ್ಸ್​
ಶ್ರೀದೇವಿ ಕಳಸದ
|

Updated on: Jun 26, 2023 | 12:44 PM

Share

Bear Grylls : ಜಂಗಲ್​ ಸರ್ವೈವಲ್​ (Jungle Survival) ರಿಯಾಲಿಟಿ ಷೋನ ಖ್ಯಾತ ನಿರೂಪಕ ಮತ್ತು ಸಾಹಸಿಗ ಬೇರ್ ಗ್ರಿಲ್ಸ್​ ಲುಂಗಿ ಧರಿಸಿದ ತಮ್ಮ ಫೋಟೋ ಟ್ವೀಟ್ ಮಾಡಿ ‘ಮ್ಯಾನ್​ ವರ್ಸಸ್​ ವೈಲ್ಡ್​’ (Man v/s Wild)ನ  ಮುಂದಿನ ಎಪಿಸೋಡ್​ಗೆ ಯಾರು ಅತಿಥಿ ಎಂದು ಕೇಳಿದ್ದಾರೆ. ಈ ಟ್ವೀಟ್​ ವೀಕ್ಷಕರನ್ನು ಕುತೂಹಲಕ್ಕೆ ಕೆಡವಿದೆ. ಸ್ಕಾಟಿಷ್​ ಹೈಲ್ಯಾಂಡ್ಸ್​ನ (Scottish Highlands) ನದೀತಟದಲ್ಲಿ ಈ ಫೋಟೋ ತೆಗೆಯಲಾಗಿದೆ. ಈ ಟ್ವೀಟ್​ಗೆ ನೆಟ್ಟಗರು ಉತ್ಸಾಹದಿಂದ ಪ್ರತಿಕ್ರಿಯಿಸಿದ್ದಾರೆ.

ಶರ್ಟ್​ ಕೆಳಗೆ ಧರಿಸಿದ ಉಡುಪು ಎಂಥದು ಇದು ಎಂದು ಅನೇಕರು ಕೇಳಿದ್ದಾರೆ. ಇದು ಭಾರತೀಯರು ಧರಿಸುವ ಲುಂಗಿ ಎಂದು ಹಲವರು ಹೇಳಿದ್ದಾರೆ. ಬಾಂಗ್ಲಾದೇಶದ ಸಾಂಪ್ರದಾಯಿಕ ಉಡುಪು ಇದು ಎಂದಿದ್ದಾರೆ ಮತ್ತೊಂದಿಷ್ಟು ಜನ. ಓಹ್ ಲುಂಗಿಡ್ಯಾನ್ಸ್​ ಸ್ಟೈಲ್​! ಎಂದು ಅಚ್ಚರಿಪಟ್ಟಿದ್ಧಾರೆ ಕೆಲವರು. ಲುಂಗೀಮ್ಯಾನ್​, ಎಸಿ ಪ್ಯಾಂಟ್, ಗಾಳಿ ಬೀಸಿದರೆ ಅಷ್ಟೇ, ಹುಷಾರಾಗಿರಿ​ ಎಂದು ಕಾಲೆಳೆದಿದ್ದಾರೆ ಇನ್ನೂ ಒಂದಿಷ್ಟು ಜನ.

ಇದನ್ನೂ ಓದಿ : Viral Video: ಎಲ್ಲಿಯ ಉಡುಪಿ ಎಲ್ಲಿಯ ಚಿಕ್ಕಬಳ್ಳಾಪುರ; ಇಲ್ಲಿದೆ ಗಣೇಶ್ ಮತ್ತು ಶ್ರೀವಿದ್ಯಾ ಕಲಾಹೂರಣ

ನೀಲ್ ಆಲಿವರ್, ಅನ್ನೇಕಾ ರೈಸ್​, ಇವಾನ್​ ಮ್ಯಾಕ್​ಗ್ರಿಗೋರ್, ರಿಚರ್ಡ್​ ಬ್ರ್ಯಾನ್​ಸನ್​, ವಿರಾಟ ಕೊಹ್ಲಿ, ಅಕ್ಷಯ್​ ಕುಮಾರ್, ವಿಕ್ಕಿ ಕೌಶಲ್​, ರಣವೀರ್​ ಸಿಂಗ್​, ತಲೈವಾ ರಜನೀಕಾಂತ… ಹೀಗೆ ಪ್ರಸಿದ್ಧ ವ್ಯಕ್ತಿಗಳ ಹೆಸರುಗಳ ಪಟ್ಟಿಯನ್ನೇ ಟ್ವೀಟಿಗರು ನೀಡಿದ್ದಾರೆ. ಒಟ್ಟಿನಲ್ಲಿ ಊಹಾಪೋಹಗಳ ನಡುವೆ ಈ ಟ್ವೀಟ್ ಶರವೇಗದಲ್ಲಿ ವೈರಲ್ ಆಗುತ್ತಿದೆ. ಕೆಲ ಮೂಲಗಳ ಪ್ರಕಾರ, ಪ್ರಿಯಾಂಕಾ ಛೋಪ್ರಾ ಮತ್ತು ವಿರಾಟ್ ಕೊಹ್ಲಿ ಅವರೊಂದಿಗೆ ಮಾತುಕತೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ನಿಮ್ಮ ಊಹೆಯಂತೆ ಯಾವ ಸೆಲೆಬ್ರಿಟಿ ಈ ಷೋನಲ್ಲಿ ಭಾಗವಹಿಸಲಿದ್ದಾರೆ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು