AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಲುಂಗೀಧಾರಿ ಬೇರ್​ ಗ್ರಿಲ್ಸ್​; ‘ಜಂಗಲ್​ ಸರ್ವೈವರ್‘ನ ಮುಂದಿನ ಅತಿಥಿ ಯಾರು?

Jungle Survival : ನೀಲ್ ಆಲಿವರ್, ಅನ್ನೇಕಾ ರೈಸ್​, ರಿಚರ್ಡ್​ ಬ್ರ್ಯಾನ್​ಸನ್​, ವಿರಾಟ ಕೊಹ್ಲಿ, ಅಕ್ಷಯ್​ ಕುಮಾರ್, ವಿಕ್ಕಿ ಕೌಶಲ್​, ರಣವೀರ್​ ಸಿಂಗ್​, ತಲೈವಾ ರಜನೀಕಾಂತ... ಮುಂತಾದವರ ಹೆಸರುಗಳ ಹೊಳೆಯನ್ನೇ ಹರಿಸಿದ್ದಾರೆ ನೆಟ್ಟಿಗರು.

Viral: ಲುಂಗೀಧಾರಿ ಬೇರ್​ ಗ್ರಿಲ್ಸ್​; ‘ಜಂಗಲ್​ ಸರ್ವೈವರ್‘ನ ಮುಂದಿನ ಅತಿಥಿ ಯಾರು?
ಜಂಗಲ್​ ಸರ್ವೈವರ್ ರಿಯಾಲಿಟಿ ಷೋನ ನಿರೂಪಕ, ಸಾಹಸಿ ಬೇರ್ ಗ್ರಿಲ್ಸ್​
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on: Jun 26, 2023 | 12:44 PM

Share

Bear Grylls : ಜಂಗಲ್​ ಸರ್ವೈವಲ್​ (Jungle Survival) ರಿಯಾಲಿಟಿ ಷೋನ ಖ್ಯಾತ ನಿರೂಪಕ ಮತ್ತು ಸಾಹಸಿಗ ಬೇರ್ ಗ್ರಿಲ್ಸ್​ ಲುಂಗಿ ಧರಿಸಿದ ತಮ್ಮ ಫೋಟೋ ಟ್ವೀಟ್ ಮಾಡಿ ‘ಮ್ಯಾನ್​ ವರ್ಸಸ್​ ವೈಲ್ಡ್​’ (Man v/s Wild)ನ  ಮುಂದಿನ ಎಪಿಸೋಡ್​ಗೆ ಯಾರು ಅತಿಥಿ ಎಂದು ಕೇಳಿದ್ದಾರೆ. ಈ ಟ್ವೀಟ್​ ವೀಕ್ಷಕರನ್ನು ಕುತೂಹಲಕ್ಕೆ ಕೆಡವಿದೆ. ಸ್ಕಾಟಿಷ್​ ಹೈಲ್ಯಾಂಡ್ಸ್​ನ (Scottish Highlands) ನದೀತಟದಲ್ಲಿ ಈ ಫೋಟೋ ತೆಗೆಯಲಾಗಿದೆ. ಈ ಟ್ವೀಟ್​ಗೆ ನೆಟ್ಟಗರು ಉತ್ಸಾಹದಿಂದ ಪ್ರತಿಕ್ರಿಯಿಸಿದ್ದಾರೆ.

ಶರ್ಟ್​ ಕೆಳಗೆ ಧರಿಸಿದ ಉಡುಪು ಎಂಥದು ಇದು ಎಂದು ಅನೇಕರು ಕೇಳಿದ್ದಾರೆ. ಇದು ಭಾರತೀಯರು ಧರಿಸುವ ಲುಂಗಿ ಎಂದು ಹಲವರು ಹೇಳಿದ್ದಾರೆ. ಬಾಂಗ್ಲಾದೇಶದ ಸಾಂಪ್ರದಾಯಿಕ ಉಡುಪು ಇದು ಎಂದಿದ್ದಾರೆ ಮತ್ತೊಂದಿಷ್ಟು ಜನ. ಓಹ್ ಲುಂಗಿಡ್ಯಾನ್ಸ್​ ಸ್ಟೈಲ್​! ಎಂದು ಅಚ್ಚರಿಪಟ್ಟಿದ್ಧಾರೆ ಕೆಲವರು. ಲುಂಗೀಮ್ಯಾನ್​, ಎಸಿ ಪ್ಯಾಂಟ್, ಗಾಳಿ ಬೀಸಿದರೆ ಅಷ್ಟೇ, ಹುಷಾರಾಗಿರಿ​ ಎಂದು ಕಾಲೆಳೆದಿದ್ದಾರೆ ಇನ್ನೂ ಒಂದಿಷ್ಟು ಜನ.

ಇದನ್ನೂ ಓದಿ : Viral Video: ಎಲ್ಲಿಯ ಉಡುಪಿ ಎಲ್ಲಿಯ ಚಿಕ್ಕಬಳ್ಳಾಪುರ; ಇಲ್ಲಿದೆ ಗಣೇಶ್ ಮತ್ತು ಶ್ರೀವಿದ್ಯಾ ಕಲಾಹೂರಣ

ನೀಲ್ ಆಲಿವರ್, ಅನ್ನೇಕಾ ರೈಸ್​, ಇವಾನ್​ ಮ್ಯಾಕ್​ಗ್ರಿಗೋರ್, ರಿಚರ್ಡ್​ ಬ್ರ್ಯಾನ್​ಸನ್​, ವಿರಾಟ ಕೊಹ್ಲಿ, ಅಕ್ಷಯ್​ ಕುಮಾರ್, ವಿಕ್ಕಿ ಕೌಶಲ್​, ರಣವೀರ್​ ಸಿಂಗ್​, ತಲೈವಾ ರಜನೀಕಾಂತ… ಹೀಗೆ ಪ್ರಸಿದ್ಧ ವ್ಯಕ್ತಿಗಳ ಹೆಸರುಗಳ ಪಟ್ಟಿಯನ್ನೇ ಟ್ವೀಟಿಗರು ನೀಡಿದ್ದಾರೆ. ಒಟ್ಟಿನಲ್ಲಿ ಊಹಾಪೋಹಗಳ ನಡುವೆ ಈ ಟ್ವೀಟ್ ಶರವೇಗದಲ್ಲಿ ವೈರಲ್ ಆಗುತ್ತಿದೆ. ಕೆಲ ಮೂಲಗಳ ಪ್ರಕಾರ, ಪ್ರಿಯಾಂಕಾ ಛೋಪ್ರಾ ಮತ್ತು ವಿರಾಟ್ ಕೊಹ್ಲಿ ಅವರೊಂದಿಗೆ ಮಾತುಕತೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ನಿಮ್ಮ ಊಹೆಯಂತೆ ಯಾವ ಸೆಲೆಬ್ರಿಟಿ ಈ ಷೋನಲ್ಲಿ ಭಾಗವಹಿಸಲಿದ್ದಾರೆ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
Shridevi Kalasad
Shridevi Kalasad

ಶ್ರೀದೇವಿ ಕಳಸದ : ಮುಖ್ಯ ಉಪಸಂಪಾದಕಿ. ವಿಜಯ ಕರ್ನಾಟಕ, ಸುವರ್ಣ ನ್ಯೂಸ್, ಪ್ರಜಾವಾಣಿ ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳು ಸೇರಿದಂತೆ ಒಟ್ಟು 16 ವರ್ಷಗಳ ಅನುಭವ. ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಲ್ಲಿ ವಿಶೇಷ ಆಸಕ್ತಿ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!