AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಲುಂಗೀಧಾರಿ ಬೇರ್​ ಗ್ರಿಲ್ಸ್​; ‘ಜಂಗಲ್​ ಸರ್ವೈವರ್‘ನ ಮುಂದಿನ ಅತಿಥಿ ಯಾರು?

Jungle Survival : ನೀಲ್ ಆಲಿವರ್, ಅನ್ನೇಕಾ ರೈಸ್​, ರಿಚರ್ಡ್​ ಬ್ರ್ಯಾನ್​ಸನ್​, ವಿರಾಟ ಕೊಹ್ಲಿ, ಅಕ್ಷಯ್​ ಕುಮಾರ್, ವಿಕ್ಕಿ ಕೌಶಲ್​, ರಣವೀರ್​ ಸಿಂಗ್​, ತಲೈವಾ ರಜನೀಕಾಂತ... ಮುಂತಾದವರ ಹೆಸರುಗಳ ಹೊಳೆಯನ್ನೇ ಹರಿಸಿದ್ದಾರೆ ನೆಟ್ಟಿಗರು.

Viral: ಲುಂಗೀಧಾರಿ ಬೇರ್​ ಗ್ರಿಲ್ಸ್​; ‘ಜಂಗಲ್​ ಸರ್ವೈವರ್‘ನ ಮುಂದಿನ ಅತಿಥಿ ಯಾರು?
ಜಂಗಲ್​ ಸರ್ವೈವರ್ ರಿಯಾಲಿಟಿ ಷೋನ ನಿರೂಪಕ, ಸಾಹಸಿ ಬೇರ್ ಗ್ರಿಲ್ಸ್​
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on: Jun 26, 2023 | 12:44 PM

Share

Bear Grylls : ಜಂಗಲ್​ ಸರ್ವೈವಲ್​ (Jungle Survival) ರಿಯಾಲಿಟಿ ಷೋನ ಖ್ಯಾತ ನಿರೂಪಕ ಮತ್ತು ಸಾಹಸಿಗ ಬೇರ್ ಗ್ರಿಲ್ಸ್​ ಲುಂಗಿ ಧರಿಸಿದ ತಮ್ಮ ಫೋಟೋ ಟ್ವೀಟ್ ಮಾಡಿ ‘ಮ್ಯಾನ್​ ವರ್ಸಸ್​ ವೈಲ್ಡ್​’ (Man v/s Wild)ನ  ಮುಂದಿನ ಎಪಿಸೋಡ್​ಗೆ ಯಾರು ಅತಿಥಿ ಎಂದು ಕೇಳಿದ್ದಾರೆ. ಈ ಟ್ವೀಟ್​ ವೀಕ್ಷಕರನ್ನು ಕುತೂಹಲಕ್ಕೆ ಕೆಡವಿದೆ. ಸ್ಕಾಟಿಷ್​ ಹೈಲ್ಯಾಂಡ್ಸ್​ನ (Scottish Highlands) ನದೀತಟದಲ್ಲಿ ಈ ಫೋಟೋ ತೆಗೆಯಲಾಗಿದೆ. ಈ ಟ್ವೀಟ್​ಗೆ ನೆಟ್ಟಗರು ಉತ್ಸಾಹದಿಂದ ಪ್ರತಿಕ್ರಿಯಿಸಿದ್ದಾರೆ.

ಶರ್ಟ್​ ಕೆಳಗೆ ಧರಿಸಿದ ಉಡುಪು ಎಂಥದು ಇದು ಎಂದು ಅನೇಕರು ಕೇಳಿದ್ದಾರೆ. ಇದು ಭಾರತೀಯರು ಧರಿಸುವ ಲುಂಗಿ ಎಂದು ಹಲವರು ಹೇಳಿದ್ದಾರೆ. ಬಾಂಗ್ಲಾದೇಶದ ಸಾಂಪ್ರದಾಯಿಕ ಉಡುಪು ಇದು ಎಂದಿದ್ದಾರೆ ಮತ್ತೊಂದಿಷ್ಟು ಜನ. ಓಹ್ ಲುಂಗಿಡ್ಯಾನ್ಸ್​ ಸ್ಟೈಲ್​! ಎಂದು ಅಚ್ಚರಿಪಟ್ಟಿದ್ಧಾರೆ ಕೆಲವರು. ಲುಂಗೀಮ್ಯಾನ್​, ಎಸಿ ಪ್ಯಾಂಟ್, ಗಾಳಿ ಬೀಸಿದರೆ ಅಷ್ಟೇ, ಹುಷಾರಾಗಿರಿ​ ಎಂದು ಕಾಲೆಳೆದಿದ್ದಾರೆ ಇನ್ನೂ ಒಂದಿಷ್ಟು ಜನ.

ಇದನ್ನೂ ಓದಿ : Viral Video: ಎಲ್ಲಿಯ ಉಡುಪಿ ಎಲ್ಲಿಯ ಚಿಕ್ಕಬಳ್ಳಾಪುರ; ಇಲ್ಲಿದೆ ಗಣೇಶ್ ಮತ್ತು ಶ್ರೀವಿದ್ಯಾ ಕಲಾಹೂರಣ

ನೀಲ್ ಆಲಿವರ್, ಅನ್ನೇಕಾ ರೈಸ್​, ಇವಾನ್​ ಮ್ಯಾಕ್​ಗ್ರಿಗೋರ್, ರಿಚರ್ಡ್​ ಬ್ರ್ಯಾನ್​ಸನ್​, ವಿರಾಟ ಕೊಹ್ಲಿ, ಅಕ್ಷಯ್​ ಕುಮಾರ್, ವಿಕ್ಕಿ ಕೌಶಲ್​, ರಣವೀರ್​ ಸಿಂಗ್​, ತಲೈವಾ ರಜನೀಕಾಂತ… ಹೀಗೆ ಪ್ರಸಿದ್ಧ ವ್ಯಕ್ತಿಗಳ ಹೆಸರುಗಳ ಪಟ್ಟಿಯನ್ನೇ ಟ್ವೀಟಿಗರು ನೀಡಿದ್ದಾರೆ. ಒಟ್ಟಿನಲ್ಲಿ ಊಹಾಪೋಹಗಳ ನಡುವೆ ಈ ಟ್ವೀಟ್ ಶರವೇಗದಲ್ಲಿ ವೈರಲ್ ಆಗುತ್ತಿದೆ. ಕೆಲ ಮೂಲಗಳ ಪ್ರಕಾರ, ಪ್ರಿಯಾಂಕಾ ಛೋಪ್ರಾ ಮತ್ತು ವಿರಾಟ್ ಕೊಹ್ಲಿ ಅವರೊಂದಿಗೆ ಮಾತುಕತೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ನಿಮ್ಮ ಊಹೆಯಂತೆ ಯಾವ ಸೆಲೆಬ್ರಿಟಿ ಈ ಷೋನಲ್ಲಿ ಭಾಗವಹಿಸಲಿದ್ದಾರೆ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ