AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಪ ಮಾಡಿಕೊಳ್ಳಬೇಡ ಕೃಷ್ಣ: ಮುಂದಿನ ವರ್ಷ ಮೋದಿ ಮಥುರಾದಲ್ಲಿ ನಿನ್ನ ಮಂದಿರ ಕಟ್ತಾರೆ; ಹೀಗೊಂದು ಫೋಟೋ ವೈರಲ್ 

ರಾಮ ಮಂದಿರದ ನಿರ್ಮಾಣವು ಕೋಟ್ಯಾಂತರ ರಾಮ ಭಕ್ತರ ಕನಸಾಗಿದ್ದು, ರಾಮಮಂದಿರದ  ಕನಸು  ಇನ್ನೂ ಕೆಲವೇ ದಿನಗಳಲ್ಲಿ ನನಸಾಗುತ್ತಿದೆ. ಈ ನಡುವೆ  ಮುಂದಿನ ವರ್ಷ ಮೋದಿಯವರು  ಮಥುರಾದಲ್ಲಿ ಕೃಷ್ಣ ಮಂದಿರವನ್ನು ನಿರ್ಮಾಣ ಮಾಡ್ತಾರೆ ಆಯ್ತಾ, ಕೋಪ ಮಾಡ್ಕೋಬೇಡಾ ಕೃಷ್ಣ… ಅಂತ ಹೇಳುವ ಮುದ್ದಾದ ಫೋಟೋವೊಂದು ಒಂದು ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗುತ್ತಿದೆ.

ಕೋಪ ಮಾಡಿಕೊಳ್ಳಬೇಡ ಕೃಷ್ಣ: ಮುಂದಿನ ವರ್ಷ ಮೋದಿ ಮಥುರಾದಲ್ಲಿ ನಿನ್ನ ಮಂದಿರ ಕಟ್ತಾರೆ; ಹೀಗೊಂದು ಫೋಟೋ ವೈರಲ್ 
ಮಾಲಾಶ್ರೀ ಅಂಚನ್​
| Edited By: |

Updated on: Jan 10, 2024 | 6:52 PM

Share

ಭವ್ಯ ರಾಮ ಮಂದಿರದ ನಿರ್ಮಾಣವು ಕೋಟ್ಯಾಂತರ ರಾಮ ಭಕ್ತರ ಕನಸಾಗಿದ್ದು, ಈ ಕನಸು  ಇನ್ನೂ ಕೆಲವೇ ದಿನಗಳಲ್ಲಿ ನನಸಾಗುತ್ತಿದೆ. ಈ ನಡುವೆ ಮುದ್ದಾದ ಫೋಟೋವೊಂದು ವೈರಲ್ ಆಗಿದ್ದು, ಅಯೋಧ್ಯೆ ನಗರಿಯಲ್ಲಿ ರಾಮ ಮಂದಿರವನ್ನು ನಿರ್ಮಿಸಿದ್ದೀರಿ ಅಲ್ವಾ, ನನ್ನ ಜನ್ಮಸ್ಥಳವಾದ ಮಥುರಾದಲ್ಲಿ ಕೃಷ್ಣ ಮಂದಿರವನ್ನು ಯಾವಾಗ ನಿರ್ಮಾಣ ಮಾಡುತ್ತೀರಾ ಎಂದು  ಬಾಲ ಕೃಷ್ಣ  ಹುಸಿ ಕೋಪದಲ್ಲಿ ಕುಳಿತಿರುವಂತ ಮುದ್ದಾದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್  (AI) ಚಿತ್ರವೊಂದು  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈ ಪೋಸ್ಟ್ ಅನ್ನು ಚಕ್ರವರ್ತಿ ಸುಲಿಬೆಲೆ (@Chakravarty Sulinele)   ಅವರು ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದು, ನೀನು ಏಕೆ ಕೋಪಗೊಂಡಿದ್ದೀಯಾ ಕೃಷ್ಣಾ, ಮುಂದಿನ ವರ್ಷ ಮೋದಿಯವರು ಮಥುರಾದಲ್ಲಿ ನಿಮ್ಮ ಮಂದಿರವನ್ನು ಸಹ ಕಟ್ಟಿಸುತ್ತಾರೆ ಸ್ವಲ್ಪ ನಗು ನೋಡೋಣ ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್  ಫೋಟೋದಲ್ಲಿ   ಬೇಜಾರಿನಲ್ಲಿ ಕುಳಿತಿರುವಂತಹ ಬಾಲ ಕೃಷ್ಣನನ್ನು ತಾಯಿ ಸಮಾಧಾನ ಪಡಿಸುವ  ಮುದ್ದಾದ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ವಿಮಾನದೊಳಗೆ ಹೋಗುತ್ತಿದ್ದಂತೆ ತಾಯಿ-ಮಗಳಿಗೆ ಕಾದಿತ್ತು ಅಚ್ಚರಿ, ಅದೃಷ್ಟ ಅಂದ್ರೆ ಇದಪ್ಪ

ಜನವರಿ 10ರಂದು ಹಂಚಿಕೊಳ್ಳಲಾದ ಈ ಫೊಸ್ಟ್ 34 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಹಾಗೂ ಹಲವಾರು ಲೈಕ್ಸ್ ಮತ್ತು ಕಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರುʼಬಹಳ ಸುಂದರವಾದ ಶೀರ್ಷಿಕೆಯನ್ನು ಬರೆದುಕೊಂಡಿದ್ದೀರಾʼ ಎಂದು ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇದು ಆದಷ್ಟು ಬೇಗ ಆಗಲಿ ಎಂದು ನಾನು ಬಯಸುತ್ತೇನೆʼ ಎಂಬ ಕಮೆಂಟ್ ಬರೆದುಕೊಂಡಿದ್ದಾರೆ.  ಇನ್ನೊಬ್ಬ ಬಳಕೆದಾರರು ʼಬಾಲ ಕೃಷ್ಣನ ಫೋಟೋ ಬಹಳ ಮುದ್ದಾಗಿದೆʼ ಎಂದು ಕಮೆಂಟ್ ಮಾಡಿದ್ದಾರೆ. ಇನ್ನೂ ಅನೇಕರು ಈ ಪೋಸ್ಟ್ಗೆ ಮೆಚ್ಚುಗೆಯನ್ನು ನೀಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ