AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video : ನೀನೇಕೆ ನಮ್ಮ ದೇಶದಲ್ಲಿದ್ದೀಯ, ನೀನು ಇಲ್ಲಿರುವುದು ನನಗೆ ಇಷ್ಟವಿಲ್ಲ : ಭಾರತೀಯನಿಗೆ ಅವಮಾನ ಮಾಡಿದ ಅಮೆರಿಕದ ನಿವಾಸಿ

ನಾವು ಭಾರತೀಯರು, ನಮ್ಮ ದೇಶಕ್ಕೆ ಯಾರೇ ಬಂದರೂ ಪ್ರೀತಿ ಅದರದಿಂದ ಸ್ವಾಗತಿಸುತ್ತೇವೆ. ಹಾಗಂತ ವಿದೇಶಿಗರು ಎಲ್ಲರೂ ಕೆಟ್ಟವರು ಎಂದು ಹೇಳಲು ಸಾಧ್ಯವಿಲ್ಲ. ಆದರೆ ಇದೀಗ ಅಮೆರಿಕದ ಸ್ಥಳೀಯ ನಿವಾಸಿಯೂ ಭಾರತೀಯನನ್ನು ಅವಮಾನಿಸಿರುವ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಇದು ಭಾರತೀಯರನ್ನು ಕೆರಳಿಸುವಂತೆ ಮಾಡಿದೆ. ಅಷ್ಟಕ್ಕೂ ಈ ವಿಡಿಯೋದಲ್ಲಿ ಏನಿದೆ? ಭಾರತೀಯನನ್ನು ಅವಮಾನಿಸಿದ್ದು ಯಾಕೆ? ಈ ಕುರಿತಾದ ವಿಡಿಯೋ ಇಲ್ಲಿದೆ ನೋಡಿ.

Video : ನೀನೇಕೆ ನಮ್ಮ ದೇಶದಲ್ಲಿದ್ದೀಯ, ನೀನು ಇಲ್ಲಿರುವುದು ನನಗೆ ಇಷ್ಟವಿಲ್ಲ : ಭಾರತೀಯನಿಗೆ ಅವಮಾನ ಮಾಡಿದ ಅಮೆರಿಕದ ನಿವಾಸಿ
ವೈರಲ್ ವಿಡಿಯೋImage Credit source: Twitter
ಸಾಯಿನಂದಾ
|

Updated on:Jul 09, 2025 | 3:10 PM

Share

ಶಿಕ್ಷಣ, ಉದ್ಯೋಗಕ್ಕಾಗಿ ವಿದೇಶಕ್ಕೆ (foreign) ಲೆಕ್ಕವಿಲ್ಲದಷ್ಟು ಭಾರತೀಯರು ತೆರಳಿ ಅಲ್ಲೇ ನೆಲೆಸಿದ್ದಾರೆ. ಹೌದು, ಕೆಲವರಿಗೆ ಅಲ್ಲಿನ ಜನರು, ಜೀವನಶೈಲಿ ಹಾಗೂ ವಾತಾವರಣ ಇಷ್ಟವಾಗಿದ್ದರೆ, ಇನ್ನು ಕೆಲವರು ಅನಿವಾರ್ಯ ಕಾರಣಕ್ಕಾಗಿ ವಿದೇಶದಲ್ಲಿ ನೆಲೆಸಿದ್ದಾರೆ. ವಿದೇಶದಲ್ಲಿ ವಾಸಿಸುವ ಎಷ್ಟೋ ಜನರಿಗೆ ಕಹಿ ಅನುಭವವಾಗುವುದಿದೆ. ಆದರೆ ಇದೀಗ ಅಮೆರಿಕದಲ್ಲಿ (America) ನೆಲೆಸಿರುವ ಭಾರತೀಯನಿಗೆ ಅಲ್ಲಿನ ಸ್ಥಳೀಯ ನಿವಾಸಿಯೊಬ್ಬರು ಅವಮಾನಿಸಿರುವ ಘಟನೆ ನಡೆದಿದೆ. ಹೌದು ಮಳಿಗೆಯೊಂದಕ್ಕೆ ನಡೆದುಕೊಂಡು ಬರುತ್ತಿದ್ದ ಭಾರತೀಯನಿಗೆ ನೀನು ಯಾಕೆ ನಮ್ಮ ದೇಶದಲ್ಲಿದ್ದೀಯ ಎಂದು ಪ್ರಶ್ನೆ ಮಾಡಿ ಖಾರವಾಗಿ ಮಾತನಾಡಿದ್ದಾನೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ (social media) ವೈರಲ್ ಆಗುತ್ತಿದ್ದಂತೆ ಭಾರತೀಯರು ಗರಂ ಆಗಿದ್ದಾರೆ.

ಇದನ್ನೂ ಓದಿ : Video : ಮಲೇಷ್ಯಾದಲ್ಲಿ ಭಾರತೀಯ ನಾರಿಯರಂತೆ ಸೀರೆ ಉಟ್ಟು ಸುತ್ತಾಡಿದ ಚೀನೀ ಮಹಿಳೆಯರು

ಇದನ್ನೂ ಓದಿ
Image
ನಿಜವಾದ ಟಾಮ್ ಆ್ಯಂಡ್ ಜೆರಿ; ಒಟ್ಟಿಗೇ ಊಟ ಮಾಡುವ ಬೆಕ್ಕು-ಇಲಿ ವಿಡಿಯೋ ವೈರಲ್
Image
ಕೆಳಗಿಂದ ಮೇಲೆ ಹರಿವ ನೀರಿನಲ್ಲಿ ದೋಣಿ ಬಿಟ್ಟ ಸಚಿವ ಶಿವರಾಜ್ ಸಿಂಗ್ ಚೌಹಾಣ್
Image
ಸಾಮಾನ್ಯ ಆಟೋರಿಕ್ಷಾ ದರಕ್ಕೆ ಹೋಲಿಸಿದ್ರೆ ಆ್ಯಪ್ ಆಧಾರಿತ ಆಟೋ ಬಲು ದುಬಾರಿ
Image
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು

@gharkekalesh ಹೆಸರಿನ ಎಕ್ಸ್ ಖಾತೆಯಲ್ಲಿ ಶೇರ್ ಮಾಡಲಾದ ಈ ವಿಡಿಯೋದಲ್ಲಿ ಭಾರತೀಯನೊಬ್ಬನು ನಡೆದುಕೊಂಡು ಬರುತ್ತಿದ್ದ ವೇಳೆ ಅಮೆರಿಕದ ಸ್ಥಳೀಯ ನಿವಾಸಿಯೊಬ್ಬನು ಆತನನ್ನು ನಿಂದಿಸಿದ್ದಾನೆ. ಹೌದು, ನೀನೇಕೆ ನಮ್ಮ ದೇಶದಲ್ಲಿದ್ದೀಯ, ನೀನೇಕೆ ಅಮೆರಿಕಾದಲ್ಲಿದ್ದೀಯ? ಎಂದು ಪ್ರಶ್ನಿಸಿರುವ ಸ್ಥಳೀಯ ನೀವು ನಮ್ಮ ದೇಶದಲ್ಲಿರುವುದು ನನಗೆ ಇಷ್ಟವಿಲ್ಲ, ನೀವು ತುಂಬಾ ಜನ ಇಲ್ಲಿ ಇದ್ದೀರ, ಅಮೆರಿಕಾದ ತುಂಬಾ ಭಾರತೀಯರೇ ತುಂಬಿಕೊಂಡಿದ್ದಾರೆ. ಇದರಿಂದ ನಮಗೆ ಸಾಕಾಗಿ ಹೋಗಿದೆ, ನೀವು ಅಮೆರಿಕಾ ಬಿಟ್ಟು ವಾಪಸ್‌ ಭಾರತಕ್ಕೆ ಹೋಗಬೇಕು ಆಯ್ತಾ? ಎಂದು ಹೇಳಿದ್ದಾನೆ. ಇಷ್ಟೆಲ್ಲಾ ಮಾತುಗಳನ್ನು ಕೇಳಿಸಿಕೊಂಡ ಭಾರತೀಯ ಮಾತ್ರ ಏನು ಹೇಳದೇ ಅಲ್ಲಿಂದ ಹೊರಟು ಹೋಗಿದ್ದಾನೆ. ಅಷ್ಟೇ ಅಲ್ಲದೇ, ಅಮೆರಿಕದ ಸ್ಥಳೀಯ ನಿವಾಸಿ ಅವಾಚ್ಯ ಶಬ್ದಗಳಿಂದ ಭಾರತೀಯನಿಗೆ ಬೈಯುವುದನ್ನು ಈ ವಿಡಿಯೋದಲ್ಲಿ ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಈ ವಿಡಿಯೋವೊಂದು 3.8 ಮಿಲಿಯನ್‌ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು ಬಳಕೆದಾರರು ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ. ಬಳಕೆದಾರರೊಬ್ಬರು, ಈ ವ್ಯಕ್ತಿಯೂ ಭಾರತೀಯರನ್ನು ಬೆದರಿಸಿದ್ದಾರೆ ಅಷ್ಟೇ. ನಾವು ಎಷ್ಟು ಪ್ರತಿಭಾನ್ವಿತರು, ಸಮರ್ಥರು ಎಂದು ಅವರಿಗೆ ತಿಳಿದಿದೆ. ಇದು ಅವರ ಅಭದ್ರತೆಯನ್ನು ಸೂಚಿಸುತ್ತಿದೆ ಎಂದಿದ್ದಾರೆ. ಇನ್ನೊಬ್ಬರು, ನಿಜಕ್ಕೂ ಈ ವಿಡಿಯೋ ನೋಡಿ ಬೇಸರವಾಯಿತು, ನಾವು ವಿದೇಶಿಗರನ್ನು ಅತ್ಯಂತ ಪ್ರೀತಿಯಿಂದ ಮಾತನಾಡಿಸುತ್ತೇವೆ, ಈ ವ್ಯಕ್ತಿಗೆ ಆ ರೀತಿಯ ಮನಸ್ಥಿತಿ ಯಾಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಮತ್ತೊಬ್ಬರು, ಇದು ನಾಚಿಕೆಗೇಡಿನ ವಿಡಿಯೋ, ಅಲ್ಲಿನ ವ್ಯಕ್ತಿಯೂ ಭಾರತೀಯನ ಬಳಿ ಕಾನೂನುಬದ್ಧವಾಗಿ ಕೇಳುವುದಕ್ಕಿಂತ ಅಲ್ಲಿನ ಸರ್ಕಾರಕ್ಕೆ ಈ ರೀತಿ ಪ್ರಶ್ನೆ ಕೇಳಬೇಕಿತ್ತು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:04 pm, Wed, 9 July 25

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ