Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಪ್ರಯೋಗವನ್ನು ಮೊದಲು ಇಲಿಗಳ ಮೇಲೆ ಮಾಡೋದೇಕೆ? ಇಲ್ಲಿದೆ ವೈಜ್ಞಾನಿಕ ಕಾರಣ!

ಭೂಮಿಯ ಮೇಲೆ ಲಕ್ಷಾಂತರ ಜೀವಿಗಳಿದ್ದರೂ ವಿಜ್ಞಾನಿಗಳು ಯಾವುದೇ ಪ್ರಯೋಗಗಳಿಗೆ ಇಲಿಗಳನ್ನು ಏಕೆ ಬಳಸುತ್ತಾರೆ ಎಂಬ ಪ್ರಶ್ನೆ ನಿಮ್ಮಲ್ಲಿ ಉದ್ಭವಿಸುತ್ತದೆ. ಈ ಪ್ರಶ್ನೆಗೆ ಉತ್ತರವನ್ನು ಈ ಲೇಖನದಲ್ಲಿ ಕಂಡುಕೊಳ್ಳಿ.

ಯಾವುದೇ ಪ್ರಯೋಗವನ್ನು ಮೊದಲು ಇಲಿಗಳ ಮೇಲೆ ಮಾಡೋದೇಕೆ? ಇಲ್ಲಿದೆ ವೈಜ್ಞಾನಿಕ ಕಾರಣ!
Follow us
ಅಕ್ಷತಾ ವರ್ಕಾಡಿ
|

Updated on:Nov 14, 2024 | 3:56 PM

ವಿಜ್ಞಾನಿಗಳು ಮಾನವರ ಮೇಲೆ ಯಾವುದೇ ಪ್ರಯೋಗವನ್ನು ಮಾಡುವ ಮೊದಲು ಅದನ್ನು ಇಲಿಗಳ ಮೇಲೆ ಪ್ರಯೋಗಿಸಿ ನೋಡುತ್ತಾರೆ. ವಿಶೇಷವಾಗಿ ವೈದ್ಯಕೀಯ ಅಥವಾ ಔಷಧೀಯಕ್ಕೆ ಸಂಬಂಧಿಸಿದ ಪ್ರಯೋಗಗಳು. ಭೂಮಿಯ ಮೇಲೆ ಲಕ್ಷಾಂತರ ಜೀವಿಗಳಿದ್ದರೂ ವಿಜ್ಞಾನಿಗಳು ಇಲಿಗಳ ಮೇಲೆ ಮಾತ್ರ ಏಕೆ ಪ್ರಯೋಗಗಳನ್ನು ಮಾಡುತ್ತಾರೆ ಎಂಬ ಪ್ರಶ್ನೆ ನಿಮ್ಮಲ್ಲಿ ಉದ್ಭವಿಸುತ್ತದೆ. ಈ ಪ್ರಶ್ನೆಗೆ ಉತ್ತರವನ್ನು ಈ ಲೇಖನದಲ್ಲಿ ಕಂಡುಕೊಳ್ಳಿ.

ಪ್ರಯೋಗಗಳನ್ನು ಇಲಿಗಳ ಮೇಲೆ ಮಾತ್ರ ಏಕೆ ನಡೆಸಲಾಗುತ್ತದೆ?

ಇಲಿ ಮತ್ತು ಮಾನವ ಪರಸ್ಪರ ಭಿನ್ನವಾಗಿದ್ದರೂ, ಅವುಗಳ ಜೀನೋಮ್ಗಳಲ್ಲಿ ಅನೇಕ ಸಾಮ್ಯತೆಗಳಿವೆ. ಇಲಿ ಮತ್ತು ಮಾನವನ ಡಿಎನ್ಎ ಹೆಚ್ಚಿನ ಪ್ರಮಾಣದಲ್ಲಿ ಹೋಲುತ್ತದೆ ಎಂದು ವಿಜ್ಞಾನಿಗಳು ಹೇಳುತ್ತಾರೆ.

ಉದಾಹರಣೆಗೆ, ಇಲಿಗಳು ಮತ್ತು ಮನುಷ್ಯರ ಪ್ರತಿರಕ್ಷಣಾ ವ್ಯವಸ್ಥೆ, ಮೆದುಳಿನ ರಚನೆ, ಹಾರ್ಮೋನ್ ವ್ಯವಸ್ಥೆ ಮತ್ತು ಅಂಗಗಳ ಕಾರ್ಯಚಟುವಟಿಕೆಗಳು ಹೆಚ್ಚಿನ ಪ್ರಮಾಣದಲ್ಲಿ ಹೋಲುತ್ತವೆ. ಮಾನವರ ಮೇಲೆ ಪ್ರಯೋಗ ಮಾಡುವ ಮೊದಲು ಇಲಿಗಳ ಮೇಲೆ ಪ್ರಯೋಗಗಳನ್ನು ಮಾಡಲು ಇದು ಕಾರಣವಾಗಿದೆ. ಪ್ರಯೋಗದ ಫಲಿತಾಂಶಗಳು ಮಾನವ ದೇಹದ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬುದನ್ನು ಇದರಿಂದ ತಿಳಿದುಕೊಳ್ಳಲು ಸಾಧ್ಯ.

ಇಲಿಗಳು ಮತ್ತು ಮನುಷ್ಯರ ನಡುವಿನ ಹೋಲಿಕೆಯ ಹೊರತಾಗಿ, ವಿಜ್ಞಾನಿಗಳು ಪ್ರಯೋಗಾಲಯದಲ್ಲಿ ಇಲಿಗಳನ್ನು ಬಳಸುವುದಕ್ಕೆ ಇನ್ನೊಂದು ಕಾರಣವಿದೆ. ಅಂದರೆ, ಅವುಗಳ ಮೇಲೆ ಯಾವುದೇ ಪ್ರಯೋಗದ ಪರಿಣಾಮವು ತುಂಬಾ ವೇಗವಾಗಿರುತ್ತದೆ. ಈ ಕಾರಣದಿಂದಾಗಿ, ವಿಜ್ಞಾನಿಗಳು ಔಷಧಿಗಳ ಪರಿಣಾಮವನ್ನು ತ್ವರಿತವಾಗಿ ಅಳೆಯಲು ಇಲಿಗಳನ್ನು ಬಳಸುತ್ತಾರೆ.

ಇದನ್ನೂ ಓದಿ: ಇಲ್ಲಿ ಬಾಲ್ಯದಲ್ಲೇ ಮದುವೆ ನಿಶ್ಚಯ, ಬೆಳೆದ ನಂತರ ಮದುವೆ ಬೇಡ ಎಂದ್ರೆ ಲಕ್ಷಗಟ್ಟಲೆ ಹಣ ಕೊಡಬೇಕು

ಪ್ರಯೋಗಾಲಯದಲ್ಲಿ ಇಲಿಗಳನ್ನು ಇಡುವುದು ಸುಲಭ:

ಇಲಿಗಳು ಪ್ರಯೋಗಾಲಯದಲ್ಲಿ ನಿಯಂತ್ರಿತ ಪರಿಸರದಲ್ಲಿ ಇರಿಸಬಹುದಾದ ಜೀವಿಗಳಾಗಿವೆ. ಇಲ್ಲಿ ಅವುಗಳ ಆಹಾರ, ಜೀವನಶೈಲಿ ಮತ್ತು ನಡವಳಿಕೆಯ ಎಲ್ಲಾ ಅಂಶಗಳನ್ನು ಸುಲಭವಾಗಿ ನೋಡಿಕೊಳ್ಳಬಹುದು. ಇದಲ್ಲದೆ, ಇಲಿಗಳನ್ನು ಪ್ರಯೋಗಗಳಿಗೆ ಬಳಸಲು ಕಾರಣ ಅವುಗಳ ಜೀವಿತಾವಧಿ. ಹೌದು ಇಲಿಗಳ ಜೀವಿತಾವಧಿ ಚಿಕ್ಕದಾಗಿದ್ದು ಮತ್ತು ಅವು ವೇಗವಾಗಿ ಸಂತಾನೋತ್ಪತ್ತಿ ಮಾಡುತ್ತವೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:52 pm, Thu, 14 November 24

ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ
ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ
ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ
ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ
ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ
ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ
’ಅಂದೊಂತಿತ್ತು ಕಾಲ’, ಆ ಸುಂದರ ಕಾಲ ತೋರಿಸಲು ಬಂದ ವಿನಯ್ ರಾಜ್​ಕುಮಾರ್
’ಅಂದೊಂತಿತ್ತು ಕಾಲ’, ಆ ಸುಂದರ ಕಾಲ ತೋರಿಸಲು ಬಂದ ವಿನಯ್ ರಾಜ್​ಕುಮಾರ್