Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡುಗೆಯ ಲೈವ್-ಸ್ಟ್ರೀಮ್ ಮಾಡುವಾಗ ಹೊತ್ತಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ, ಪ್ರಾಣಾಪಾಯದಿಂದ ಪಾರಾದ ಮಹಿಳೆ

Viral Video: ಮಹಿಳೆಯೊಬ್ಬಳ್ಳು ಅಡುಗೆ ಮಾಡುವ ಲೈವ್-ಸ್ಟ್ರೀಮ್ ಮಾಡುವಾಗ ಎಣ್ಣೆ ಹಾಕಿದ ಬಾಣಲೆಯಲ್ಲಿ ಹೊಗೆ ಕಾಣಿಸಿಕೊಂಡಿತು. ನಂತರ ಹೊಗೆ ಜಾಸ್ತಿಯಾಗಿ ಬೆಂಕಿ ಹೊತ್ತಿಕೊಂಡಿತು.

ಅಡುಗೆಯ ಲೈವ್-ಸ್ಟ್ರೀಮ್ ಮಾಡುವಾಗ ಹೊತ್ತಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ, ಪ್ರಾಣಾಪಾಯದಿಂದ ಪಾರಾದ ಮಹಿಳೆ
ಅಡುಗೆ ಮಾಡುವಾಗ ಹೊತ್ತಿಕೊಂಡ ಬೆಂಕಿ
Follow us
TV9 Web
| Updated By: ವಿವೇಕ ಬಿರಾದಾರ

Updated on:May 16, 2022 | 5:00 PM

ಅಡುಗೆಮನೆಯಲ್ಲಿ (Kitchen) ಅಡುಗೆ ಮಾಡುವಾಗ ಬಹಳ ಜಾಗುರುಕತೆಯಿಂದ ಇರಬೇಕಾಗುತ್ತದೆ. ಇಲ್ಲವಾದಲ್ಲಿ ಅನಾಹುತ ಉಂಟಾಗುವ ಸಾಧ್ಯತೆ ಇರುತ್ತದೆ. ಇದರಿಂದ ಜೀವಕ್ಕೆ ಕುತ್ತು ತಂದುಕೊಳ್ಳುವ ಸಾಧ್ಯತೆ ಹೆಚ್ಚಾಗಿರುತ್ತದೆ. ಈ ಕಾರಣದಿಂದ ಬಹಳಷ್ಟು ಜಾಗರೂಕತೆಯಿಂದ ಮತ್ತು ಏಕಾಗ್ರತೆಯಿಂದ ಅಡುಗೆ ಮಾಡುವುದು ಒಳ್ಳೆಯದು. ಅಡುಗೆ ಮಾಡುವಾಗ ಸಲ್ಪ ಹೆಚ್ಚು-ಕಡಿಮೆ ಆದರೂ ದೊಡ್ಡ ಅವಗಡ ಸಂಭವಿಸುವ ಸಾಧ್ಯತೆಗಳಿರುತ್ತದೆ ಎನ್ನುವುದಕ್ಕೆ ಕೆಳಗಿನ ವಿಡಿಯೊನೇ ಸಾಕ್ಷಿ.

ವಿಡಿಯೋದಲ್ಲಿ ಮಹಿಳೆಯೊಬ್ಬಳ್ಳು ಅಡುಗೆ ಮಾಡುವ ಲೈವ್-ಸ್ಟ್ರೀಮ್ (Live Stream) ಮಾಡುವಾಗ ಎಣ್ಣೆ ಹಾಕಿದ ಬಾಣಲೆಯಲ್ಲಿ ಹೊಗೆ ಕಾಣಿಸಿಕೊಂಡಿತು. ನಂತರ ಮಹಿಳೆ ಬಾಣಲೆಯಿಂದ ಆಹಾರವನ್ನು (Food) ತೆಗೆದು, ಹೊಗೆಯನ್ನು ಕಡಿಮೆಗೊಳಿಸಲು ಪ್ರಯತ್ನಿಸಿದರು. ಆದರೆ ಹೊಗೆ ಜಾಸ್ತಿಯಾಗಿ ಬೆಂಕಿ ಹೊತ್ತಿಕೊಂಡಿತು. ಇದರಿಂದ ಗಾಬರಿಗೊಂಡ ಮಹಿಳೆ ಬಾಣಲೆಯಲ್ಲಿ ಹೊತ್ತಿಕೊಂಡ ಬೆಂಕಿಯನ್ನು ಆರಿಸಲು ಬಾಣಲೆಯನ್ನು ಸಿಂಕ್ ನಲ್ಲಿ ಅಡಿ ಇಟ್ಟು ನೀರು ಬಿಟ್ಟಳು. ಆದರೆ ಬೆಂಕಿ ಇನ್ನಷ್ಟು ಜೋರಾಗಿ ಉರಿಯಲು ಪ್ರಾರಂಭಿಸಿತು.

ಇದರಿಂದ ಆಕೆಯ ಅಡುಗೆಮನೆ ಸಂಪೂರ್ಣ ಹೊಗೆಯಿಂದ ತುಂಬಿಕೊಂಡಿತು. ಬೆಂಕಿಯನನ್ನು ನಂದಿಸಲು ಅಕ್ಕ-ಪಕ್ಕದಲ್ಲಿದ್ದ ಕ್ಯಾಮರಾ ಮೆನ್ ಅಥವಾ ಇನ್ನಿತರೆ ಸಹಾಯಕರನ್ನು ಕರೆದಳು. ಅವರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಕೆಲವು ಸೆಕೆಂಡುಗಳ ನಂತರ, ವೀಡಿಯೊ ಥಟ್ಟನೆ ಕೊನೆಗೊಂಡಿತು.

ವಿಡಿಯೋದಲ್ಲಿದ್ದ ಮಹಿಳೆ ಹೆಸರು ಕ್ಯಾರನ್ ಆಗಿದ್ದು, ತಾನು ಚೆನ್ನಾಗಿದ್ದೇನೆ, ಆದರೆ ನನ್ನ ಕೈ ಸ್ವಲ್ಪ ಸುಟ್ಟಿದೆ ಎಂದು ತನ್ನ Instagram ಖಾತೆಯಲ್ಲಿ ಬರೆದುಕೊಂಡಿದ್ದಾಳೆ.ಮತ್ತೊಂದು ಪೋಸ್ಟ್‌ನಲ್ಲಿ, ಅವರು ನಾನು ಚೆನ್ನಾಗಿದ್ದೇನೆ ಮತ್ತು ಇನ್ನೂ ಸ್ಟ್ರೀಮಿಂಗ್ ಮಾಡುತ್ತಿದ್ದಾನೆ” ಎಂದು ಬರೆದಿದ್ದಾರೆ. ಕೆಲವರು ಆಕೆಯನ್ನು ಗೇಲಿ ಮಾಡಿ ಟ್ರೋಲ್ ಮಾಡಿದ್ದಾರೆ. ಇನ್ನು ಕೆಲವರು ಆಕೆ ಸುರಕ್ಷಿತವಾಗಿದ್ದಾರೆ ಎಂದು ಖುಷಿಪಟ್ಟಿದ್ದಾರೆ. ನಂತರ ಅವರು ಟ್ರೋಲಿಂಗ್‌ಗೆ ಪ್ರತಿಕ್ರಿಯಿಸಿ ಬರೆದಿದ್ದಾರೆ, ”ನನಗೆ ಬೆಂಕಿಯ ಅನುಭವವಿಲ್ಲ, ನಾನು ಭಯಭೀತಳಾಗಿದ್ದೆ. ಮತ್ತು ನಾನು ಸಹಾಯಕ್ಕಾಗಿ ನನ್ನ ನೆರೆಹೊರೆಯವರ ಬಳಿಗೆ ಓಡಿದೆ.

Published On - 5:00 pm, Mon, 16 May 22

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ