AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೆಂಕಿ ಇಲ್ಲದೆ ನಡು ರಸ್ತೆಯಲ್ಲಿಯೇ ಆಮ್ಲೆಟ್ ಮಾಡಿದ ಮಹಿಳೆ; ವೈರಲ್ ಆಯ್ತು ವಿಡಿಯೋ

ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಹಾಸ್ಯಮಯ ವಿಡಿಯೋಗಳು ಹರಿದಾಡುತ್ತಿರುತ್ತವೆ. ಅದೇ ರೀತಿ ಇಲ್ಲೊಂದು ವಿಡಿಯೋ ವೈರಲ್ ಆಗಿದ್ದು, ಮಹಿಳೆಯೊಬ್ಬರು ಗ್ಯಾಸ್ ಏಕೆ ಸುಮ್ನೆ ವೇಸ್ಟ್ ಮಾಡೋದು ಎಂದು ರಣ ಬಿಸಿಲಿಗೆ ನಡು ರಸ್ತೆಯಲ್ಲಿಯೇ ಆಮ್ಲೆಟ್ ಮಾಡಿ ತಿಂದಿದ್ದಾರೆ. 

Viral Video: ಬೆಂಕಿ ಇಲ್ಲದೆ ನಡು ರಸ್ತೆಯಲ್ಲಿಯೇ ಆಮ್ಲೆಟ್ ಮಾಡಿದ ಮಹಿಳೆ; ವೈರಲ್ ಆಯ್ತು ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: May 23, 2024 | 6:30 PM

Share

ಈ ಬಾರಿಯ  ಬಿಸಿಲಿನ ಝಳಕ್ಕೆ ಮನುಷ್ಯರು ಮಾತ್ರವಲ್ಲದೆ ಪ್ರಾಣಿ ಪಕ್ಷಿಗಳೂ ಕೂಡಾ ಬಸವಳಿದೆ. ಹೌದು ಕಳೆದ ವರ್ಷಕ್ಕಿಂತ ಈ ಬಾರಿ ಬಿಸಿಲಿನ ತಾಪ ಏರಿಕೆಯಾಗಿದ್ದು,  ಇಳೆಗೆ ಮಳೆ ಬಿದ್ದರೆ ಸಾಕು ಎಂದು ಜನರು ಕಾಯುತ್ತಿದ್ದಾರೆ. ಈ ನಡುವೆ ಇಲ್ಲೊಬ್ಬರು ಮಹಿಳೆ ಅಲ್ಲಾ ಇಷ್ಟೊಂದು ಬಿಸಿಲಿದೆಯಲ್ವಾ, ಸುಮ್ನೆ ಮನೆಯ ಗ್ಯಾಸ್ ಏನಕ್ಕೆ ವೇಸ್ಟ್ ಮಾಡೋದು ಅಂತ ಹೇಳಿ ರಣ ಬಿಸಿಲಿಗೆ ನಡುರಸ್ತೆಯಲ್ಲಿ ಆಮ್ಲೆಟ್ ಮಾಡಿ ತಿಂದಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಮಹಿಳೆಯ ಅವತಾರವನ್ನು ಕಂಡು ನೆಟ್ಟಿಗರು ದಂಗಾಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳೆಯೊಬ್ಬರು ಉರಿ ಬಿಸಿಲಿಗೆ ಗ್ಯಾಸ್ ಇಲ್ಲದೆ ಅಡುಗೆ ಮಾಡಿದ್ರೆ ಹೇಗೆ ಅಂತ ಪ್ಲಾನ್ ಮಾಡಿ ರಸ್ತೆಯ ಬಳಿ ಬಂದು  ರಸ್ತೆಗೆ ಚೆನ್ನಾಗಿ ನೀರು ಹಾಕಿ ಕ್ಲೀನ್ ಮಾಡಿ ಬಳಿಕ ಅದಕ್ಕೆ  ಎಣ್ಣೆ ಸುರಿದು, ಆ ರಸ್ತೆಯಲ್ಲಿಯೇ ಎರಡು ಮೊಟ್ಟೆಗಳ ಆಮ್ಲೆಟ್ ತಯಾರಿಸುತ್ತಿರುವಂತಹ ಹಾಸ್ಯಮಯ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ತಾಳಿ ಕಟ್ಟುವಾಗ ವಧುವಿಗೆ ಮುತ್ತಿಟ್ಟ ವರ; ರಣರಂಗವಾದ ಕಲ್ಯಾಣ ಮಂಟಪ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by modi tejal (@tejalmodi454)

@tajalmodi454 ಎಂಬ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ 10 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು  ಪಡೆದುಕೊಂಡಿದೆ. ಕೆಲವರು ದಯವಿಟ್ಟು ವಿಡಿಯೋ ಮಾಡುವ ಸಲುವಾಗಿ ಫುಡ್ ವೇಸ್ಟ್ ಮಾಡದಿರಿ ಎಂದು ಸಲಹೆ ನೀಡಿದ್ದಾರೆ. ಇನ್ನೂ ಕೆಲವರು ಈ ಕಣ್ಣಲ್ಲಿ ಇನ್ನೂ ಏನೇನೂ ನೋಡೋದಿದೆಯೋ ಎಂದು ಕಾಮೆಂಟ್ಸ್ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ?
ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ?
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ