Video: ಜೋರು ಮಳೆಗೆ ಪುಟ್ಟ ಮಗಳನ್ನು ಹೆಗಲ ಮೇಲೆ ಹೊತ್ತು ಶಾಲೆಗೆ ನಡೆದ ಅಮ್ಮ

ತಾಯಿ ಪ್ರೀತಿಯೇ ಹಾಗೇ... ಆಕೆ ನಿಷ್ಕಲ್ಮಶ ಪ್ರೀತಿ, ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ತಾಯಿಯೊಬ್ಬರು ತನ್ನ ಕಂದಮ್ಮ ಮಳೆಗೆ ಒದ್ದೆಯಾಗಬಾರದೆಂದು ಮಗಳನ್ನು ಹೆಗಲ ಮೇಲೆ ಹೊತ್ತು ಶಾಲೆಗೆ ಕರೆದುಕೊಂಡು ಹೋಗಿದ್ದಾರೆ. ಈ ಹೃದಯಸ್ಪರ್ಶಿ ದೃಶ್ಯ ನೆಟ್ಟಿಗರ ಮನಗೆದ್ದಿದೆ.

Video: ಜೋರು ಮಳೆಗೆ ಪುಟ್ಟ ಮಗಳನ್ನು ಹೆಗಲ ಮೇಲೆ ಹೊತ್ತು ಶಾಲೆಗೆ ನಡೆದ ಅಮ್ಮ
ವೈರಲ್​​ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 26, 2024 | 4:26 PM

ಅಮ್ಮಾ ಕಣ್ಣಿಗೆ ಕಾಣುವ ದೇವರು. ತನ್ನ ಕುಟುಂಬ, ಮಕ್ಕಳಿಗಾಗಿ ಬದುಕನ್ನೇ ಮುಡಿಪಾಗಿಟ್ಟವಳು ಅಮ್ಮ. ತನ್ನ ಮಕ್ಕಳಿಗಾಗಿ ಎಂತಹ ಕಷ್ಟವನ್ನೂ ಎದುರಿಸಿ ನಿಲ್ಲುವ ವಾತ್ಸಲ್ಯ ಮೂರ್ತಿ ಆಕೆ. ಹೀಗೆ ತಾಯಿಯ ಪ್ರೀತಿ, ವಾತ್ಸಲ್ಯ, ತ್ಯಾಗಕ್ಕೆ ಸಂಬಂಧಿಸಿದ ಹಲವಾರು ಹೃದಯಸ್ಪರ್ಶಿ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ. ಇದೀಗ ಅಂತಹದೇ ದೃಶ್ಯವೊಂದು ವೈರಲ್‌ ಆಗಿದ್ದು, ತಾಯಿಯೊಬ್ಬರು ತನಗೆ ಕಷ್ಟವಾದರೂ ಪರವಾಗಿಲ್ಲ, ಆದ್ರೆ ನಮ್ಮ ಕಂದಮ್ಮ ಮಾತ್ರ ಈ ಮಳೆಗೆ ಒಂದು ಚೂರು ಒದ್ದೆಯಾಗಬಾರದೆಂದು ಮಗಳನ್ನು ಹೆಗಲ ಮೇಲೆ ಹೊತ್ತು ಶಾಲೆಗೆ ಕರೆದುಕೊಂಡು ಹೋಗಿದ್ದಾರೆ. ಈ ಹೃದಯಸ್ಪರ್ಶಿ ದೃಶ್ಯ ನೋಡುಗರ ಮನ ಗೆದ್ದಿದೆ.

ಸಾಮಾನ್ಯವಾಗಿ ಮಳೆಗಾಲದಲ್ಲಿ ನಡೆದುಕೊಂಡು ಶಾಲೆಗೆ ಹೋಗಲು ಪುಟ್ಟ ಮಕ್ಕಳಿಗೆ ತುಂಬಾನೇ ಕಷ್ಟಕರವಾಗುತ್ತದೆ. ಆದ್ರೆ ನಮ್ಮ ಮಗಳಿಗೆ ಶಾಲೆಗೆ ಹೋಗಲು ಕಷ್ಟವಾಗಬಾರದು, ಆಕೆ ಮಳೆಯಲ್ಲಿ ಒದ್ದೆಯಾಗಬಾರದೆಂದು ಇಲ್ಲೊಬ್ಬರು ತಾಯಿ ಕೈಯಲ್ಲಿ ಕೊಡೆ ಹಿಡಿದು, ಮಗಳನ್ನು ಹೆಗಲ ಮೇಲೆ ಹೊತ್ತು ಶಾಲೆಗೆ ಕರೆದುಕೊಂಡು ಹೋಗಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ಪೋಸ್ಟ್‌ ಒಂದನ್ನು Gulzar_sahab ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ತನ್ನ ಕಂದ ಒಂದು ಚೂರು ಒದ್ದೆಯಾಗಬಾರದೆಂದು ತಾಯಿಯೊಬ್ಬರು ತಮ್ಮ ಮಗಳನ್ನು ಹೆಗಲ ಮೇಲೆ ಹೊತ್ತು ಸಾಗುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಊಟಕ್ಕೆ ಉಪ್ಪಿನಕಾಯಿ ನೀಡದ ಹೊಟೇಲ್‌, ಮಾಲೀಕನಿಗೆ ಬಿತ್ತು 35 ಸಾವಿರ ರೂ. ದಂಡ!

ಜುಲೈ 21 ರಂದು ಹಂಚಿಕೊಳ್ಳಲಾದ ಈ ವಿಡಿಯೋ 4 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼನಿಜವಾಗಿಯೂ ಅಮ್ಮನ ತ್ಯಾಗ ಪ್ರೀತಿಗೆ ಬೆಲೆಕಟ್ಟಲಾಗದುʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼತಾಯಿಯ ಪ್ರೀತಿ ಆಕಾಶಕ್ಕಿಂತ ಮಿಗಿಲಾದುದುʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್